Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರಾಹುಲ್ ಗಾಂಧಿ ಹಾದಿ ಈಗ ಸ್ಪಷ್ಟ

ರಾಹುಲ್ ಗಾಂಧಿ ಹಾದಿ ಈಗ ಸ್ಪಷ್ಟ

ಪೂರ್ವಿಪೂರ್ವಿ30 Dec 2023 12:53 PM IST
share
ರಾಹುಲ್ ಗಾಂಧಿ ಹಾದಿ ಈಗ ಸ್ಪಷ್ಟ
ಬಿಜೆಪಿಯನ್ನು ರಾಜಕೀಯವಾಗಿ ಸೋಲಿಸಬೇಕಾದರೆ ಮೊದಲು ಆರೆಸ್ಸೆಸನ್ನು, ಅದರ ಸಿದ್ಧಾಂತವನ್ನು ಸೋಲಿಸಲೇಬೇಕು. ಅದಾಗದೆ ಅಲ್ಲೊಂದು ಇಲ್ಲೊಂದು ಚುನಾವಣೆಯಲ್ಲಿ ಬಿಜೆಪಿ ಎದುರು ಗೆದ್ದರೆ ಪ್ರಯೋಜನವಿಲ್ಲ ಎಂಬುದು ಅವರಿಗೆ ಅರ್ಥವಾಗಿದೆ.

‘‘ಹಮ್ ತಯ್ಯಾರ್ ಹೈ’’

ಹೀಗೆಂದು ನಾಗ್ಪುರ ಸಮಾವೇಶದಲ್ಲಿ ಘೋಷಿಸಿದ್ದಾರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.

ವಿಶೇಷವೆಂದರೆ ಲೋಕಸಭಾ ಚುನಾವಣೆಗೆ ಮೊದಲ ಪ್ರಚಾರ ಸಮಾವೇಶ ಎಂದೇ ಪರಿಗಣಿಸಲಾಗಿರುವ ಈ ಬೃಹತ್ ಸಮಾವೇಶವನ್ನು ಕಾಂಗ್ರೆಸ್ ಆಯೋಜಿಸಿದ್ದು ಆರೆಸ್ಸೆಸ್ ಕೇಂದ್ರ ಕಚೇರಿ ಇರುವ ಮಹಾರಾಷ್ಟ್ರದ ನಾಗ್ಪುರದಲ್ಲಿ.

ಈಗ ನಾಗ್ಪುರವೆಂದರೆ ಆರೆಸ್ಸೆಸ್ ಎಂದಾಗಿಬಿಟ್ಟಿದೆ. ಆದರೆ ನಾಗ್ಪುರಕ್ಕೆ ಭಾರತದ ಇತಿಹಾಸದಲ್ಲಿ ಎರಡು ಕಾರಣಗಳಿಗೆ ಭಾರೀ ಮಹತ್ವವಿದೆ.

1956ರಲ್ಲಿ ಸಾವಿರಾರು ದಲಿತರ ಜೊತೆ ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕರಿಸಿದ ದೀಕ್ಷಾ ಭೂಮಿ ಇರುವುದು ನಾಗ್ಪುರದಲ್ಲಿ.

ಇನ್ನು ಗಾಂಧೀಜಿಗೂ ನಾಗ್ಪುರಕ್ಕೂ ಬಹಳ ಹತ್ತಿರದ ಸಂಬಂಧವಿದೆ. ಗಾಂಧೀಜಿ ಸ್ವಾತಂತ್ರ್ಯ ಹೋರಾಟದ ಕೇಂದ್ರ ಸ್ಥಾನವಾಗಿ ಆಯ್ದುಕೊಂಡು ಸೇವಾಶ್ರಮ ಸ್ಥಾಪಿಸಿದ ವಾರ್ಧಾ ಇರೋದೂ ಇದೇ ನಾಗ್ಪುರ ಬಳಿ.

ಈಗ ಅದೇ ನಾಗ್ಪುರಕ್ಕೆ ಹೋಗಿ ಆರೆಸ್ಸೆಸ್ ವಿರುದ್ಧವೇ ಸಮರ ಸಾರಿದ್ದಾರೆ ರಾಹುಲ್ ಗಾಂಧಿ. ಅವರ ಜೊತೆಗೆ ಅಷ್ಟೇ ಬದ್ಧತೆಯಿಂದ ನಿಂತು ಆರೆಸ್ಸೆಸ್ ವಿರುದ್ಧ ಹರಿಹಾಯ್ದಿದ್ದಾರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು.

ಕಳೆದ ಒಂದೆರಡು ವರ್ಷಗಳಿಂದ ರಾಹುಲ್ ಗಾಂಧಿ ಆರೆಸ್ಸೆಸ್ ಅನ್ನು ನೇರವಾಗಿಯೇ ಎದುರು ಹಾಕಿಕೊಂಡಿದ್ದಾರೆ.

ಆರೆಸ್ಸೆಸ್‌ನ ಸಿದ್ಧಾಂತ ಹಾಗೂ ಅದರ ಅಪಾಯಗಳ ಬಗ್ಗೆ ಕಾಂಗ್ರೆಸ್‌ನ ಇತರ ಹಿರಿಯ ನಾಯಕರಲ್ಲಿ ಈ ರೀತಿಯ ಸ್ಪಷ್ಟತೆ ಎಂದೂ ಕಂಡಿಲ್ಲ.

ಕಾಂಗ್ರೆಸ್‌ನಲ್ಲೂ ಕೆಲವು ನಾಯಕರು ಆರೆಸ್ಸೆಸ್ ವಿರುದ್ಧ ಮಾತನಾಡುತ್ತಾರೆ. ಅದರ ಅಪಾಯಗಳ ಬಗ್ಗೆ ಹೇಳುತ್ತ್ತಾರೆ. ಆದರೆ ಒಂದು ಪಕ್ಷವಾಗಿ ಕಾಂಗ್ರೆಸ್ ಎಂದೂ ಆರೆಸ್ಸೆಸ್ ಸಿದ್ಧಾಂತದ ವಿರುದ್ಧ ಸಂಘಟಿತವಾಗಿ ಹೋರಾಡಲೇ ಇಲ್ಲ.

ಈಗಲೂ ಕಮಲ್ ನಾಥ್, ಭೂಪೇಶ್ ಬಘೇಲ್, ಅಶೋಕ್ ಗೆಹ್ಲೋಟ್‌ರಂತಹ ನಾಯಕರನ್ನು ನಂಬಿಕೊಂಡು ಆರೆಸ್ಸೆಸ್ ಸಿದ್ಧಾಂತದ ವಿರುದ್ಧದ ಹೋರಾಟ ಅಸಾಧ್ಯ ಎಂಬುದು ರಾಹುಲ್ ಗಾಂಧಿಗೆ ಮನವರಿಕೆಯಾಗಿದೆ.

ಅದಕ್ಕಿಂತಲೂ ಮುಖ್ಯವಾಗಿ ಆರೆಸ್ಸೆಸ್ ವಿರುದ್ಧ ಹೋರಾಡುವುದೇ ಈಗ ಮುಖ್ಯ ಎಂಬುದೂ ರಾಹುಲ್ ಗಾಂಧಿಗೆ ಸ್ಪಷ್ಟವಾಗಿ ಗೊತ್ತಾಗಿದೆ.

ಬಿಜೆಪಿಯನ್ನು ರಾಜಕೀಯವಾಗಿ ಸೋಲಿಸಬೇಕಾದರೆ ಮೊದಲು ಆರೆಸ್ಸೆಸನ್ನು, ಅದರ ಸಿದ್ಧಾಂತವನ್ನು ಸೋಲಿಸಲೇಬೇಕು. ಅದಾಗದೆ ಅಲ್ಲೊಂದು ಇಲ್ಲೊಂದು ಚುನಾವಣೆಯಲ್ಲಿ ಬಿಜೆಪಿ ಎದುರು ಗೆದ್ದರೆ ಪ್ರಯೋಜನವಿಲ್ಲ ಎಂಬುದು ಅವರಿಗೆ ಅರ್ಥವಾಗಿದೆ.

ಎಲ್ಲಕ್ಕಿಂತ ಮುಖ್ಯವಾಗಿ ಈಗ ಯಾಕಾಗಿ ಹೋರಾ ಡಬೇಕು ಮತ್ತು ಯಾರ ವಿರುದ್ಧ ಹೋರಾಡಬೇಕು ಎಂಬುದು ರಾಹುಲ್ ಗಾಂಧಿಯವರಿಗೆ ಸ್ಪಷ್ಟವಾಗಿದೆ. ಆದರೆ ಆ ಸ್ಪಷ್ಟತೆ ಕಾಂಗ್ರೆಸ್ ಪಕ್ಷಕ್ಕೆ ಇನ್ನೂ ಬಂದಿಲ್ಲ. ಮಲ್ಲಿಕಾರ್ಜುನ ಖರ್ಗೆಯಂತಹ ನಾಯಕರು ಮಾತ್ರ ಈ ಹೋರಾಟದಲ್ಲಿ ರಾಹುಲ್ ಜೊತೆ ನಿಂತಿದ್ದಾರೆ.

ಕಳೆದೊಂದು ದಶಕದಲ್ಲಿ ಕಾಂಗ್ರೆಸ್ ಗೆಲುವಿಗಿಂತ ಸೋಲು ಕಂಡಿದ್ದೇ ಹೆಚ್ಚು. ಪ್ರತೀ ಸೋಲಿನ ಬಳಿಕವೂ ಪಕ್ಷ ಕಂಗೆಡುತ್ತಿತ್ತು. ಹತಾಶ ಸ್ಥಿತಿ ಕಾಣುತ್ತಿತ್ತು. ಮತ್ತೆ ತೆರೆಮರೆಗೆ ಸರಿಯುತ್ತಿತ್ತು. ಆದರೆ ಈ ಬಾರಿ ಪಂಚ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡರೂ ಕಾಂಗ್ರೆಸ್ ನಲ್ಲಿ ಅಂತಹ ಹತಾಶೆ ಕಾಣುತ್ತಿಲ್ಲ. ಅದು ಕಂಗೆಟ್ಟಂತೆ ಕಾಣುತ್ತಿಲ್ಲ. ವಿಶೇಷವಾಗಿ ರಾಹುಲ್ ಗಾಂಧಿಯವರಂತೂ ಸೋಲೊಪ್ಪಿಕೊಳ್ಳುವ ಸಮಯ ಇದಲ್ಲ ಎಂದು ಗಟ್ಟಿ ನಿರ್ಧಾರ ಮಾಡಿದವರಂತೆ ಬೀದಿಗಿಳಿದಿದ್ದಾರೆ. ಅದೂ ನೇರವಾಗಿ ಆರೆಸ್ಸೆಸ್ ವಿರುದ್ಧವೇ ನಮ್ಮ ಹೋರಾಟ ಎಂದು ಘೋಷಿಸುವ ಮೂಲಕ.

ಅತ್ತ ಖರ್ಗೆಯವರೂ ಸೋಲಿನ ಬಳಿಕ ಪಕ್ಷ ಸಂಘಟನೆಯಲ್ಲಿ ಇನ್ನಷ್ಟು ಚುರುಕಾಗಿದ್ದಾರೆ. ರಾಜ್ಯಗಳ ಮುಖಂಡರೊಂದಿಗೆ ಚುನಾವಣಾ ತಯಾರಿ ಬಗ್ಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಪ್ರತೀ ಪ್ರಮುಖ ವಿಷಯದ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಆದರೆ ಇದಾವುದೂ ‘ಮಡಿಲ ಮಾಧ್ಯಮ’ಗಳಲ್ಲಿ ಸುದ್ದಿಯಾಗುವುದಿಲ್ಲ.

ಈಗ ದಿಲ್ಲಿಯಲ್ಲಿರುವುದು ಸಂಘದ ಸರಕಾರ ಎಂದೇ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ನಾಗ್ಪುರದಲ್ಲಿ ಹೇಳಿದ್ದಾರೆ.

ಆರೆಸ್ಸೆಸ್ ಇದೇ ನಾಗ್ಪುರದಲ್ಲಿ ಹುಟ್ಟಿ ಇವತ್ತು ಈ ದೇಶವನ್ನು ವಿನಾಶದತ್ತ ಕೊಂಡೊಯ್ಯುತ್ತಿದೆ ಎಂದು ಖರ್ಗೆ ಹೇಳಿದ್ದಾರೆ.

‘‘ಈ ದೇಶದಲ್ಲಿ ಯಾವುದೇ ಉನ್ನತ ಸ್ವಾಯತ್ತ ಸಂಸ್ಥೆಗಳಿಂದ ಹಿಡಿದು ವಿವಿಗಳವರೆಗೆ ಎಲ್ಲೂ ಅರ್ಹರ ನೇಮಕವಾಗುತ್ತಿಲ್ಲ. ಎಲ್ಲ ನೇಮಕಾತಿಗಳೂ ಸಂಘದಲ್ಲಿದ್ದಾರೆಯೇ ಎಂದು ನೋಡಿ ಮಾಡಲಾಗುತ್ತಾ ಇದೆ. ಹೀಗೆ ನೇಮಕವಾಗುವವರಿಗೆ ಬೇರೇನೂ ಗೊತ್ತಿರುವುದಿಲ್ಲ. ಅವರಿಗೆ ಸಂಘದ ಕೆಲಸ ಮಾಡುವುದು ಮಾತ್ರ ಗೊತ್ತು’’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಜೆಪಿ ಸರಕಾರವನ್ನು ಹಿಂದೆ ರಾಜ ಮಹಾರಾಜರು ನಡೆಸುತ್ತಿದ್ದ ದರ್ಬಾರಿಗೆ ಹೋಲಿಸಿರುವ ರಾಹುಲ್ ಗಾಂಧಿ ಬಿಜೆಪಿ ಸಂಸದರನ್ನೇ ಗುಲಾಮರಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಜಾತಿ ಗಣತಿ ಬಗ್ಗೆ ಹೇಳಿದ್ದು ಪಂಚ ರಾಜ್ಯಗಳಲ್ಲಿ ಕಾಂಗ್ರೆಸ್ ಗೆ ಲಾಭ ತಂದಿಲ್ಲ, ನಷ್ಟವೇ ಆಗಿದೆ ಎಂದು ಕಾಂಗ್ರೆಸಿಗರೇ ಹೇಳಿಕೊಂಡು ತಿರುಗುತ್ತಿದ್ದರು. ಈಗ ರಾಹುಲ್ ಗಾಂಧಿಯವರೇ ನಮ್ಮ ಸರಕಾರ ಬಂದರೆ ದೇಶಾದ್ಯಂತ ಜಾತಿ ಗಣತಿ ಮಾಡಿಸುವುದಾಗಿ ಪುನರುಚ್ಚರಿಸಿದ್ದಾರೆ.

ಅಂದರೆ ಅವರಿಗೀಗ ತಮ್ಮ ಆದ್ಯತೆಗಳ ಬಗ್ಗೆ ಸರಿಯಾಗಿ ಗೊತ್ತಾಗಿದೆ. ಚುನಾವಣಾ ಫಲಿತಾಂಶದ ಆಧಾರದಲ್ಲಿ ಅದು ಬದಲಾಗುವುದಿಲ್ಲ.

ಒಟ್ಟಾರೆ 2024ರ ಲೋಕಸಭಾ ಚುನಾವಣೆಗೆ ಹೊರಟಿರುವ ರಾಹುಲ್ ಗಾಂಧಿ ಪ್ರಬುದ್ಧ ನಾಯಕ ರಾಹುಲ್ ಗಾಂಧಿಯಾಗಿದ್ದಾರೆ.

ಅವರು ಕಾಂಗ್ರೆಸ್‌ನ ಆಂತರಿಕ ವೈರುಧ್ಯಗಳನ್ನು, ಗೊಂದಲಗಳನ್ನು, ದ್ವಂದ್ವವನ್ನು ಮೀರಿ ನಿಂತು, ತಾನು ಯಾವ ಸಿದ್ಧಾಂತವನ್ನು ಅನುಸರಿಸಬೇಕು, ಯಾವ ಸಿದ್ಧಾಂತದ ವಿರುದ್ಧ ಹೋರಾಡಬೇಕು ಎಂಬುದರ ಬಗ್ಗೆ ಅತ್ಯಂತ ಸ್ಪಷ್ಟ ನಿಲುವು ತಳೆದಿದ್ದಾರೆ.

ಪಕ್ಷದ ಪಟ್ಟಭದ್ರ ನಾಯಕರ ಹಂಗಿನಿಂದ ಅವರು ಹೊರ ಬಂದು, ಹೋರಾಟದ ಹಾದಿಯಲ್ಲಿ ಹೊರಟಿದ್ದಾರೆ.

ಆದರೆ ಅವರನ್ನು ಈ ಹಾದಿಯಲ್ಲಿ, ಹೋರಾಟದಲ್ಲಿ ಬಿಜೆಪಿಗಿಂತ ಮೊದಲು ಸೋಲಿಸಲು ಹೊರಡುವುದು ಅವರದೇ ಪಕ್ಷ. ಹಾಗಾಗಿ ಮೊದಲು ಅವರ ಪಕ್ಷದೊಳಗಿನ ಮೃದು ಹಿಂದುತ್ವವಾದಿಗಳ ವಿರುದ್ಧ ಹೋರಾಡಿ ಗೆಲ್ಲಬೇಕಾದ ಅನಿವಾರ್ಯತೆಯಿದೆ.

ಅದು ಸಾಧ್ಯವೇ? ಕಾದು ನೋಡಬೇಕು.

share
ಪೂರ್ವಿ
ಪೂರ್ವಿ
Next Story
X