Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಗಣಿಗಾರಿಕೆ ಮೂಲಕ ರಾಜಧನ ಸಂಗ್ರಹ: ಪ್ರಗತಿ...

ಗಣಿಗಾರಿಕೆ ಮೂಲಕ ರಾಜಧನ ಸಂಗ್ರಹ: ಪ್ರಗತಿ ಸಾಧಿಸದ ಇಲಾಖೆ

ಜಿ. ಮಹಾಂತೇಶ್ಜಿ. ಮಹಾಂತೇಶ್17 Sept 2026 7:50 AM IST
share
ಗಣಿಗಾರಿಕೆ ಮೂಲಕ ರಾಜಧನ ಸಂಗ್ರಹ: ಪ್ರಗತಿ ಸಾಧಿಸದ ಇಲಾಖೆ

ಬೆಂಗಳೂರು : 2026-27ನೇ ಸಾಲಿನ ಅವಧಿಗೆ ಸಂಬಂಧಿಸಿದಂತೆ ಗಣಿಗಾರಿಕೆ ಮೂಲಕ ರಾಜಧನ ಸಂಗ್ರಹಿಸುವಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಎಪ್ರಿಲ್‌ನಿಂದ ಜುಲೈ 15ರವರೆಗಿನ ಪ್ರಗತಿಯು ಆಶಾದಾಯಕವಾಗಿಲ್ಲ. ರಾಜಧನ ಸಂಗ್ರಹಿಸುವಲ್ಲಿ ಇಲಾಖೆಯು ಹಿಂದೆ ಬಿದ್ದಿರುವುದು ಇದೀಗ ಬಹಿರಂಗವಾಗಿದೆ.

ಕರ್ನಾಟಕದಲ್ಲಿ ಎ, ಬಿ ಮತ್ತು ಸಿ ವರ್ಗ ಸೇರಿದಂತೆ ವಿವಿಧ ವರ್ಗಗಳ ಗಣಿಗಾರಿಕೆ ಗುತ್ತಿಗೆಗಳನ್ನು ಹಾಗೂ ಇದುವರೆಗೂ ಗಣಿಗಾರಿಕೆ ನಡೆಯದ ನೈಸರ್ಗಿಕ ಅರಣ್ಯ ಭೂಮಿಯನ್ನು ಹರಾಜಿಗಾಗಿ ಒಂದೇ ಬ್ಲಾಕ್ ಅಥವಾ ಘಟಕವಾಗಿ ಒಗ್ಗೂಡಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ರಾಜಧನ ಸಂಗ್ರಹಣೆಗೆ ಸಂಬಂಧಿಸಿದಂತೆ ಸಾಧಿಸಿರುವ ಹಿನ್ನಡೆಯು ಮುನ್ನೆಲೆಗೆ ಬಂದಿದೆ.

2026-27ನೇ ಸಾಲಿಗೆ ಒಟ್ಟು 11,000 ಕೋಟಿ ರೂ. ಗುರಿ ನಿಗದಿಪಡಿಸಿತ್ತು. ಈ ಪೈಕಿ 2026ರ ಎಪ್ರಿಲ್‌ನಿಂದ ಜುಲೈ 15ರವರೆಗೆ ಒಟ್ಟು 2,273.83 ಕೋಟಿ ರೂ. ಸಂಗ್ರಹಿಸಿದೆ. ಈ ನಾಲ್ಕು ತಿಂಗಳಲ್ಲಿ ಶೇ. 21ರಷ್ಟೇ ಪ್ರಗತಿ ಸಾಧಿಸಿದೆ. ಎಪ್ರಿಲ್‌ನಿಂದ ಜುಲೈವರೆಗೆ ಒಟ್ಟು ಗುರಿ 3,444.01 ಕೋಟಿ ರೂ.ಯಷ್ಟಿತ್ತು. ಈ ಪೈಕಿ 2,273.83 ಕೋಟಿ ರೂ. ಮಾತ್ರ ಸಂಗ್ರಹಿಸಿದೆ. ಈ ಲೆಕ್ಕದ ಆಧಾರದ ಪ್ರಕಾರ ಎಪ್ರಿಲ್‌ನಿಂದ ಜುಲೈವರೆಗೆ ನೀಡಿದ್ದ ಗುರಿಯನ್ನು ಇಲಾಖೆಯು ಮುಟ್ಟಿಲ್ಲ. ವಸೂಲಾತಿಗೆ ಇನ್ನೂ 1,170.17 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ.

ಇದಕ್ಕೆ ಸಂಬಂಧಿಸಿದಂತೆ ‘the-file.in’ಗೆ ಅಂಕಿ ಅಂಶಗಳು ಲಭ್ಯವಾಗಿವೆ.

ವಿಶೇಷವೆಂದರೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ತವರು ಜಿಲ್ಲೆ ದಾವಣಗೆರೆ ಜಿಲ್ಲೆಗೆ ಪ್ರಧಾನ ಖನಿಜಗಳ ವಲಯದಲ್ಲಿ ರಾಜಧನ ಸಂಗ್ರಹಿಸಲು ಒಟ್ಟು ವಾರ್ಷಿಕ ಗುರಿ ಎಂದು 58 ಕೋಟಿ ರೂ. ನಿಗದಿಪಡಿಸಿತ್ತು. ಈ ಪೈಕಿ ಎಪ್ರಿಲ್‌ನಿಂದ ಜುಲೈವರೆಗೆ 0.39 ಕೋಟಿಯಷ್ಟು ಗುರಿ ನಿಗದಿಯಾಗಿತ್ತು. ಈ ಪೈಕಿ 2026ರ ಜುಲೈ ಅಂತ್ಯಕ್ಕೆ 0.14 ಕೋಟಿ ರೂ. ಸಂಗ್ರಹಿಸಿದೆ. ಇದು ಶೇ. 0.01ರಷ್ಟಿದೆ. ಅಲ್ಲದೇ ವಾರ್ಷಿಕ ಒಟ್ಟು ಗುರಿಗೆ ಶೇ. 4ರಷ್ಟಿರುವುದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.

ಅದೇ ರೀತಿ ಉಪ ಖನಿಜಗಳಿಂದ ರಾಜಧನ ಸಂಗ್ರಹಿಸಲು ವಾರ್ಷಿಕವಾಗಿ 58.39 ಕೋಟಿ ರೂ.ನಷ್ಟು ಗುರಿ ನಿಗದಿಪಡಿಸಿತ್ತು. ಈ ಪೈಕಿ ಎಪ್ರಿಲ್‌ನಿಂದ ಜುಲೈವರೆಗೆ 20.88 ಕೋಟಿ ರೂ. ನಿಗದಿಯಾಗಿತ್ತು. ಈ ಅವಧಿಯಲ್ಲಿ ಇಲಾಖೆಯು ಸಂಗ್ರಹಿಸಿರುವುದು 4.62 ಕೋಟಿ ರೂ. ಮಾತ್ರ ಸಂಗ್ರಹಿಸಿದೆ. ಪ್ರಧಾನ ಮತ್ತು ಉಪ ಖನಿಜಗಳಿಂದ ಈ ನಾಲ್ಕು ತಿಂಗಳಲ್ಲಿ ಶೇ. 22ರಷ್ಟೇ ಪ್ರಗತಿ ಸಾಧಿಸಿರುವುದು ಅಂಕಿ ಅಂಶಗಳಿಂದ ಗೊತ್ತಾಗಿದೆ.

ಎಪ್ರಿಲ್‌ನಲ್ಲಿ 662.00 ಕೋಟಿ ರೂ. ವಸೂಲು ಮಾಡಬೇಕಿತ್ತು. ಈ ಪೈಕಿ 643.74 ಕೋಟಿ ರೂ. ವಸೂಲು ಮಾಡಿದೆ. ಒಟ್ಟು ಗುರಿಯಲ್ಲಿ ಶೇ. 97ರಷ್ಟು ಪ್ರಗತಿ ಸಾಧಿಸಿದೆ. ಮೇ ತಿಂಗಳಲ್ಲಿ 637 ಕೋಟಿ ರೂ. ಗುರಿ ಪ್ರಕಾರ 520.37 ಕೋಟಿ ರೂ. ವಸೂಲು ಮಾಡಿದೆ. ಇದು ಶೇ. 82ರಷ್ಟಿದೆ. ಜೂನ್ ತಿಂಗಳಲ್ಲಿ ಗುರಿ ಪ್ರಕಾರ 1,052.00 ಕೋಟಿ ರೂ. ವಸೂಲು ಮಾಡಬೇಕಿದ್ದ ಇಲಾಖೆಯು 706.89 ಕೋಟಿ ರೂ. ವಸೂಲು ಮಾಡಿದೆ. ಇದು ಶೇ.67ರಷ್ಟಿದೆ. ಜುಲೈ ತಿಂಗಳಲ್ಲಿ 1,093.00 ಕೋಟಿ ರೂ. ವಸೂಲು ಗುರಿ ನಿಗದಿಪಡಿಸಿತ್ತು. ಆದರೆ ಇಲಾಖೆಯು 402.83 ಕೋಟಿ ರೂ. ವಸೂಲು ಮಾಡಿದೆ. ಇದು ಒಟ್ಟು ಸಂಗ್ರಹಕ್ಕೆ ಹೋಲಿಸಿದರೇ ಶೇ. 37ರಷ್ಟಿದೆ.

ಅಕ್ರಮ ಗಣಿಗಾರಿಕೆ: ಹಾಗೆಯೇ 2024-25ನೇ ಸಾಲಿನಲ್ಲಿ 9 ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ಪತ್ತೆ ಹಚ್ಚಿತ್ತು. ಇದರಿಂದ 3.31 ಲಕ್ಷ ರೂ. ದಂಡ ಸಂಗ್ರಹಿಸಿತ್ತು. ಒಟ್ಟು 8 ಮೊಕದ್ದಮೆಗಳನ್ನು ದಾಖಲಿಸಿತ್ತು. 2025-26ನೇ ಸಾಲಿನಲ್ಲಿ 3 ಪ್ರಕರಣಗಳನ್ನು ಪತ್ತೆ ಹಚ್ಚಿದ್ದ

ಇಲಾಖೆಯು 5 ಲಕ್ಷ ರೂ. ದಂಡ ಸಂಗ್ರಹಿಸಿತ್ತು. 2 ಮೊಕದ್ದಮೆಗಳನ್ನು ದಾಖಲಿಸಿತ್ತು. 2026-27ನೇ ಸಾಲಿನ ಜುಲೈವರೆಗೆ ಒಂದೇ ಒಂದು ಪ್ರಕರಣವನ್ನು ಪತ್ತೆ ಹಚ್ಚಿಲ್ಲ.

ಅನಧಿಕೃತ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ 2024-25ನೇ ಸಾಲಿನಲ್ಲಿ ಒಟ್ಟು 657 ಪ್ರಕರಣಗಳನ್ನು ಪತ್ತೆ ಹಚ್ಚಿತ್ತು. 7.15 ಕೋಟಿ ರೂ. ದಂಡ ಸಂಗ್ರಹಿಸಿತ್ತು. ಒಟ್ಟು 186 ಮೊಕದ್ದಮೆಗಳನ್ನು ದಾಖಲಿಸಿತ್ತು. 2025-26ನೇ ಸಾಲಿನಲ್ಲಿ 945 ಪ್ರಕರಣಗಳನ್ನು ಪತ್ತೆ ಹಚ್ಚಿದ್ದ ಇಲಾಖೆಯು 11.70 ಕೋಟಿ ರೂ. ದಂಡ ಸಂಗ್ರಹಿಸಿತ್ತು. 231 ಮೊಕದ್ದಮೆಗಳನ್ನು ದಾಖಲಿಸಿತ್ತು. 2026-27ನೇ ಸಾಲಿನ ಜುಲೈ ಅಂತ್ಯಕ್ಕೆ 146 ಪ್ರಕರಣಗಳನ್ನು ಪತ್ತೆ ಹಚ್ಚಿರುವ ಇಲಾಖೆಯು 5.32 ಕೋಟಿ ರೂ. ದಂಡ ಸಂಗ್ರಹಿಸಿತ್ತು. 38 ಮೊಕದ್ದಮೆಗಳನ್ನು ದಾಖಲಿಸಿತ್ತು.

ಅನಧಿಕೃತ ಮರಳು ಗಣಿಗಾರಿಕೆಗೆ ಸಂಬಂಧಿಸಿ 2024-25ನೇ ಸಾಲಿನಲ್ಲಿ 219 ಪ್ರಕರಣಗಳನ್ನು ಪತ್ತೆ ಹಚ್ಚಿದೆ. ಒಟ್ಟು 75.98 ಲಕ್ಷ ರೂ. ದಂಡ ಸಂಗ್ರಹಿಸಿದೆ. 126 ಮೊಕದ್ದಮೆಗಳನ್ನು ದಾಖಲಿಸಿತ್ತು. 2025-26ನೇ ಸಾಲಿನಲ್ಲಿ 229 ಪ್ರಕರಣಗಳನ್ನು ಪತ್ತೆ ಹಚ್ಚಿದ್ದರೇ ಈ ಪೈಕಿ 1.33 ಕೋಟಿ ರೂ. ದಂಡ ಸಂಗ್ರಹಿಸಿದೆ. 127 ಮೊಕದ್ದಮೆಗಳನ್ನು ದಾಖಲಿಸಿದೆ. 2026-27ನೇ ಸಾಲಿನ ಜುಲೈವರೆಗೆ 103 ಪ್ರಕರಣಗಳನ್ನು ಪತ್ತೆ ಹಚ್ಚಿರುವ ಇಲಾಖೆಯು 38.99 ಲಕ್ಷ ರೂ. ದಂಡ ಸಂಗ್ರಹಿಸಿದೆ. 63 ಮೊಕದ್ದಮೆಗಳನ್ನು ದಾಖಲಿಸಿದೆ.

share
ಜಿ. ಮಹಾಂತೇಶ್
ಜಿ. ಮಹಾಂತೇಶ್
Next Story
X