Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ...

ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಶಿಕ್ಷಕಿ ರೂಪಾ

ಪ್ರಕಾಶ್ ಎಚ್.ಎನ್.ಪ್ರಕಾಶ್ ಎಚ್.ಎನ್.25 Oct 2023 11:11 AM IST
share
ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ  ಸಾಧನೆಗೈದ ಶಿಕ್ಷಕಿ ರೂಪಾ

ದಾವಣಗೆರೆ: ಮಹಿಳೆ ಇಂದು ಪುರುಷನಷ್ಟೇ ಸರಿಸಮಾನಳಾಗಿ ಎಲ್ಲ ಕ್ಷೇತ್ರಗಳಲ್ಲಿ ಛಾಪು ಮೂಡಿಸು ತ್ತಿದ್ದಾಳೆ.ಇದಕ್ಕೊಂದು ಉತ್ತಮ ಉದಾಹರಣೆ ರೂಪಾ ಬಿ.ಬಸಪ್ಪನವರು.

ಜಗಳೂರು ತಾಲೂಕಿನ ಕಲ್ಲೇದೇವರಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕಿ ರೂಪಾ ಬಿ.ಬಸಪ್ಪನವರ ಸಾಧನೆ ಇತರ ಶಿಕ್ಷಕಿಯರಿಗೆ ಮಾದರಿಯಾಗಿದ್ದಾರೆ. ತಮ್ಮ ಬೋಧನಾ ವೃತ್ತಿಯ ಜೊತೆ ಕ್ರೀಡೆಯನ್ನು ಪ್ರವೃತ್ತಿಯನ್ನಾಗಿಸಿಕೊಂಡ ಶಿಕ್ಷಕಿ ರೂಪಾ, ಜಿಲ್ಲಾ, ರಾಜ್ಯ ,ರಾಷ್ಟ್ರ ಮಟ್ಟದಲ್ಲಿ ನಡೆಯುವ ನೌಕರರ ಕಬಡ್ಡಿ ಮತ್ತು ಕುಸ್ತಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಹಲವಾರು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ. ಪ್ರಾಥಮಿಕ ಶಾಲಾ ಹಂತದಲ್ಲಿ ಶಿಕ್ಷಕರಿಂದ ಪ್ರೇರಣೆ ಪಡೆದಿದ್ದ ಇವರು ಕಬಡ್ಡಿಯನ್ನು ರಾಷ್ಟ್ರಮಟ್ಟದಲ್ಲಿ ಆಡಬೇಕೆಂಬ ಕನಸು ಇಂದು ನನಸಾಗಿಸಿದೆ.

ಪರಿಶ್ರಮಕ್ಕೆ ಹಲವಾರು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸರ್ವೋತ್ತಮ ಆಟಗಾರ್ತಿ, ಅನುಪಮಾ ಸೇವಾ ಶಿಕ್ಷಕಿ ಸೇರಿದಂತೆ ರಾಷ್ಟ್ರಮಟ್ಟದ ಹಲವಾರು ಪ್ರಶಸ್ತಿಗೆ ಭಾಜನರಾಗಿದ್ದಾರೆ. 2021-22ರಲ್ಲಿ ಹರಿಯಾಣ ರಾಜ್ಯದ ಗುರ್ಗಾಂವ್‌ನಲ್ಲಿ ನಡೆದ ರಾಷ್ಟ್ರಮಟ್ಟದ ನೌಕರರ ಕಬಡ್ಡಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರೆ, 2022-23ರಲ್ಲಿ ಡೆಹ್ರಾಡೂನ್‌ನಲ್ಲಿ ನಡೆದ ರಾಷ್ಟ್ರ ಮಟ್ಟದ ಕಬಡ್ಡಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದರು.

ಮಾತ್ರವಲ್ಲ, ಇತ್ತೀಚೆಗೆ ಹೊಸದಿಲ್ಲಿಯಲ್ಲಿ ನಡೆದ ನೌಕರರ ಕಬಡ್ಡಿ ಆಟದಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸಿ ಕೇರಳ ರಾಜ್ಯದ ವಿರುದ್ಧ ಹಾಗೂ ತೆಲಂಗಾಣದ ವಿರುದ್ಧ ಜಯಗಳಿಸಿದ್ದಾರೆ.

2022-23ರಲ್ಲಿ ಚಂಡಿಗಡದಲ್ಲಿ ನಡೆದ ನೌಕರರ ರಾಷ್ಟ್ರ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ 4ನೇ ಸ್ಥಾನವನ್ನು ಗಳಿಸಿ ಉತ್ತಮ ಆಟಗಾರರಾಗಿ ಹೊರ ಹೊಮ್ಮಿದ್ದಾರೆ. ತನ್ನ ಶಾಲೆಯ ಮಕ್ಕಳೂ ರಾಷ್ಟ್ರಮಟ್ಟದಲ್ಲಿ ಆಟ ಆಡಬೇಕೆಂಬ ಕನಸು ಹೊತ್ತಿರುವ ಇವರು ಮಕ್ಕಳಿಗೆ ದಿನಂಪ್ರತಿ ಕಬಡ್ಡಿ ಆಟದ ತರಬೇತಿ ನೀಡುತ್ತಿದ್ದಾರೆ. ಒಟ್ಟಾರೆ ಶಾಲೆಯ ಮಕ್ಕಳಿಗೆ ಜ್ಞಾನ ತುಂಬುವ ಜೊತೆಗೆ ಕ್ರೀಡೆಯನ್ನು ಕಲಿಸಿ ತಾನೂ ಸಾಧನೆ ಮಾಡಿ ಮಕ್ಕಳ ಸಾಧನೆಯನ್ನು ಪಟ್ಟಿಯಲ್ಲಿ ನೋಡಬೇಕೆಂಬ ಅವರ ತುಡಿತ ಇತರ ಶಿಕ್ಷಕರುಗಳಲ್ಲೂ ಬರಬೇಕಾಗಿದೆ.

ಪ್ರತಿಯೊಬ್ಬ ನೌಕರರು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು.ರೂಪಾ ಬಿ.ಬಸಪ್ಪನವರು ಶಿಕ್ಷಕರಿಗೆ ಮಾದರಿಯಾಗಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ಯಶಸ್ಸು ದೊರಕಲಿ.

-ಹಾಲಮೂರ್ತಿ

ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಗಳೂರು.

ನನ್ನ ಪತ್ನಿ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದು ನನಗೆ ಹೆಮ್ಮೆ ಇದೆ,ಅವರ ಕ್ರೀಡಾಸಕ್ತಿಗೆ ನನ್ನ ಬೆಂಬಲ ನಿರಂತರವಾಗಿರುತ್ತದೆ.

-ಶಿವಕುಮಾರ್, ಅಗಸನಕಟ್ಟೆ

ನನ್ನಿಬ್ಬರ ಮಕ್ಕಳ ಬೆಂಬಲ, ಪತಿಯ ಸಹಕಾರ,ಇಲಾಖೆ ಅಧಿಕಾರಿಗಳ ಮಾರ್ಗದರ್ಶನದಿಂದ ಮತ್ತು ನನಗೆ ತರಬೇತಿ ನೀಡಿದ ನಾಗರಾಜ್ ಚಂದ್ರನಹಳ್ಳಿ ಸಹಕಾರದಿಂದ ನಾನು ಕ್ರೀಡೆಯಲ್ಲಿ ಭಾಗವಹಿಸಲು ಅನುಕೂಲವಾಗಿದೆ.

- ರೂಪಾ ಬಸಪ್ಪನವರು, ಕ್ರೀಡಾ ಸಾಧಕಿ.

share
ಪ್ರಕಾಶ್ ಎಚ್.ಎನ್.
ಪ್ರಕಾಶ್ ಎಚ್.ಎನ್.
Next Story
X