Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಲಿತ ಅಂಗಣದಲ್ಲೇ ಕೋಚಿಂಗ್ ಮಾಡುತ್ತಿ ರುವ...

ಕಲಿತ ಅಂಗಣದಲ್ಲೇ ಕೋಚಿಂಗ್ ಮಾಡುತ್ತಿ ರುವ ಫುಟ್ಬಾಲ್ ಆಟಗಾರ ಸಿರಾಜ್

ಕೆ.ಎಂ. ಇಸ್ಮಾಯಿಲ್ ಕಂಡಕರೆಕೆ.ಎಂ. ಇಸ್ಮಾಯಿಲ್ ಕಂಡಕರೆ3 Jan 2024 12:22 PM IST
share
ಕಲಿತ ಅಂಗಣದಲ್ಲೇ ಕೋಚಿಂಗ್ ಮಾಡುತ್ತಿ ರುವ ಫುಟ್ಬಾಲ್ ಆಟಗಾರ ಸಿರಾಜ್

ಮಡಿಕೇರಿ,ಜ.2: ಕೊಡಗು ಜಿಲ್ಲೆಯ ಅಪ್ರತಿಮ ಕಾಲ್ಚೆಂಡು ಪಟುಗಳಲ್ಲಿ ಒಬ್ಬರಾದ ಅಮ್ಮತ್ತಿಯ ಎ.ಎಸ್.ಸಿರಾಜ್ ಅವರು, ಅತ್ಯುತ್ತಮ ಫುಟ್ಬಾಲ್ ಆಟಗಾರ. ಅವರು ಬರೀ ಫುಟ್ಬಾಲ್ ಆಟಕ್ಕೆ ಸೀಮಿತವಾಗದೆ,ಫುಟ್ಬಾಲ್ ತರಬೇತಿಯೂ ನೀಡುತ್ತಿದ್ದಾರೆ.

ಜ.3ರಂದು ಪಂಜಾಬ್‌ನಲ್ಲಿ ನಡೆಯಲಿರುವ ಆಲ್ ಇಂಡಿಯಾ ಇಂಟರ್ ಯೂನಿವರ್ಸಿಟಿ ಫುಟ್ಬಾಲ್ ಚಾಂಪಿ ಯನ್‌ಶಿಪ್‌ನಲ್ಲಿ ಕೊಡಗಿನ ಆಟಗಾರರ ನ್ನೊಳಗೊಂಡ ಮಂಗಳೂರು ವಿಶ್ವವಿದ್ಯಾನಿಲಯ ಪುರುಷರ ಫುಟ್ಬಾಲ್ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದೇ ಮೊದಲ ಬಾರಿಗೆ ಮಂಗಳೂರು ವಿಶ್ವವಿದ್ಯಾನಿ ಲಯವು ಆಲ್ ಇಂಡಿಯಾ ಇಂಟರ್ ಯೂನಿ ವರ್ಸಿಟಿ ಫುಟ್ಬಾಲ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದೆ.

ಕೊಡಗಿನ ತಡೆಗೋಡೆ ಖ್ಯಾತಿಯ ಆಟಗಾರ ಸಿರಾಜ್:

ಎ.ಎಸ್. ಸಿರಾಜ್ ಕೊಡಗಿನ ಫುಟ್ಬಾಲ್‌ನಲ್ಲಿ ಕೊಡಗಿನ ತಡೆಗೋಡೆ ಎಂದೇ ಹೆಸರುವಾಸಿಯಾಗಿದ್ದಾರೆ. ಎದುರಾಳಿ ತಂಡ ಎಷ್ಟೇ ಬಲಿಷ್ಠವಾಗಿದ್ದರೂ ಸಿರಾಜ್ ಅವರು ಡಿಫೆಂಡರ್ ಆಗಿದ್ದರೆ,ಗೋಲುಗಳಿಸುವುದು ಕಷ್ಟಸಾಧ್ಯ.

ಫುಟ್ಬಾಲ್ ಆಟದಲ್ಲಿ ಎದುರಾಳಿ ತಂಡದ ಆಟಗಾರರೂ ಸಿರಾಜ್ ಅವರ ಬಳಿಯಿಂದ ಅಗತ್ಯ ಸಲಹೆಗಳನ್ನು ಪಡೆಯುತ್ತಿದ್ದರು. ಒಬ್ಬ ಡಿಫೆಂಡರ್ ಆಗಿ ಕೊಡಗಿನಲ್ಲಿ ನಡೆದ ಫುಟ್ಬಾಲ್ ಪಂದ್ಯಾವಳಿಗಳಲ್ಲಿ ಸಿರಾಜ್ ಅವರು ಗೋಲುಗಳಿಸಿದೆ ಇರುತ್ತಿರಲಿಲ್ಲ.

ಮೂರು ಬಾರಿ ಮಂಗಳೂರು ವಿವಿ ಪ್ರತಿನಿಧಿಸಿದ್ದ ಆಟಗಾರ:

ಸಿರಾಜ್ ಅವರು ಮೂರು ಬಾರಿ ಮಂಗಳೂರು ವಿಶ್ವವಿದ್ಯಾನಿಲಯದ ಪುರುಷರ ಫುಟ್ಬಾಲ್ ತಂಡವನ್ನು ಪ್ರತಿನಿಧಿಸಿದ್ದಾರೆ. ಇದೀಗ ಅದೇ ವಿವಿಯ ಪುರುಷರ ಫುಟ್ಬಾಲ್ ತಂಡದ ತರಬೇತುದಾರನಾಗಿ ಕಾರ್ಯನಿರ್ವಹಿಸುತ್ತಿರುವುದು ಯುವ ಫುಟ್ಬಾಲ್ ಆಟಗಾರರಿಗೆ ಮಾದರಿಯಾಗಿದ್ದಾರೆ.

ವೀರಾಜಪೇಟೆ ತಾಲೂಕಿನ ಅಮ್ಮತ್ತಿಯ ಸಕೀರ್ ಹಾಗೂ ಸುಹರ ದಂಪತಿಯ ಮಗನಾದ ಎ.ಎಸ್. ಸಿರಾಜ್, ಅಮ್ಮತ್ತಿಯ ಸರಕಾರಿ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಪಡೆದು,ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನಲ್ಲಿ ಪಿಯುಸಿ ಹಾಗೂ ಪದವಿ ವಿದ್ಯಾಭ್ಯಾಸವನ್ನು ಪಡೆದಿದ್ದಾರೆ.

ನಂತರ ಮಂಗಳೂರಿನ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಪಿ.ಪೆಡ್ ಶಿಕ್ಷಣವನ್ನು ಪಡೆದು, ಕೊಣಾಜೆಯ ಮಂಗಳೂರು ವಿವಿನಲ್ಲಿ ಎಂ.ಪೆಡ್ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ದೂರ ಶಿಕ್ಷಣದ ಮೂಲಕ ಕುವೆಂಪು ವಿಶ್ವವಿದ್ಯಾನಿಲಯದಿಂದ ಎಂ.ಕಾಮ್ ಪದವಿಯನ್ನೂ ಸಿರಾಜ್ ಅವರು ಪಡೆದಿದ್ದಾರೆ.

ಮಂಗಳೂರು ವಿವಿ ಮಹಿಳಾ ತಂಡದ ತರಬೇತು ದಾರನಾಗಿಯೂ ಸಿರಾಜ್ ಕಾರ್ಯನಿರ್ವಹಿಸಿದ್ದಾರೆ. ಅಖಿಲ ಭಾರತ ಫುಟ್ಬಾಲ್ ಸಂಸ್ಥೆಯಿಂದ ಡಿ-ಲೈಸನ್ಸ್ ತರಬೇತಿಯನ್ನು ಪಡೆದು,ಉತ್ತೀರ್ಣರಾಗಿದ್ದಾರೆ.

ಗುಜರಾತ್‌ನಲ್ಲಿ ನಡೆದ ಸೀನಿಯರ್ ಫುಟ್ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ,ರನ್ನರ್ಸ್ ಪ್ರಶಸ್ತಿಯನ್ನು ಪಡೆದಿದ್ದಾರೆ.

ಕೊಡಗು ಮಾತ್ರವಲ್ಲದೆ ಕರ್ನಾಟಕದ ವಿವಿಧ ಫುಟ್ಬಾಲ್ ತಂಡದಲ್ಲಿ ಆಡಿ ಅನುಭವವಿರುವ ಎ.ಎಸ್. ಸಿರಾಜ್ ಅವರು ಕೇರಳದ ಕಣ್ಣೂರಿನ ಪ್ರತಿಷ್ಠಿತ ಕಣ್ಣೂರು ಲೀಗ್‌ನಲ್ಲಿ ಕಣ್ಣೂರು ಯುನೈಟೆಡ್ ತಂಡವನ್ನೂ ಪ್ರತಿನಿಧಿಸಿದ್ದಾರೆ.

ಮಿಲನ್ಸ್ ಫುಟ್ಬಾಲ್ ಕ್ಲಬ್ ಮೂಲಕ ಬೆಳೆದು ಬಂದ ಆಟಗಾರ:

ಸಿರಾಜ್ ಅವರು ಕೊಡಗಿನ ಪ್ರತಿಷ್ಠಿತ ಫುಟ್ಬಾಲ್ ಕ್ಲಬ್‌ಗಳಲ್ಲಿ ಒಂದಾದ ಅಮ್ಮತ್ತಿಯ ಮಿಲನ್ಸ್ ಫುಟ್ಬಾಲ್ ಕ್ಲಬ್ ಮೂಲಕ ಬೆಳೆದು ಬಂದ ಆಟಗಾರ. ಬಾಲ್ಯದಿಂದಲೇ ಸಿರಾಜ್ ಅವರು ಮಿಲನ್ಸ್ ಫುಟ್ಬಾಲ್ ಕ್ಲಬ್ ಪರವಾಗಿ ಹಲವಾರು ಫುಟ್ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಶಸ್ತಿ ಗೆದ್ದಿದ್ದಾರೆ.

ಬಾಲ್ಯದಿಂದಲೇ ಮಿಲನ್ಸ್ ಫುಟ್ಬಾಲ್ ಕ್ಲಬ್‌ನಲ್ಲಿ ಹಲವಾರು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದೆ. ಮಿಲನ್ಸ್ ಫುಟ್ಬಾಲ್ ಕ್ಲಬ್‌ನ ಪ್ರತಿಯೊಬ್ಬ ಸದಸ್ಯರಿಗೂ ನಾನು ಅಭಾರಿಯಾಗಿರುವೆ. ಕುಟುಂಬ ಸದಸ್ಯರ ಪ್ರೋತ್ಸಾಹ ಹಾಗೂ ,ಸಹೋದ್ಯೋಗಿಗಳ ಸಹಕಾರದಿಂದ ಮಂಗಳೂರು ವಿವಿಯ ಪುರುಷರ ತಂಡಕ್ಕೆ ತರಬೇತಿ ನೀಡಿ, ಮೊದಲ ಬಾರಿಗೆ ಆಲ್ ಇಂಡಿಯಾ ಇಂಟರ್ ವಿವಿ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆಯಲು ಸಾಧ್ಯವಾಯಿತು.

-ಎ.ಎಸ್. ಸಿರಾಜ್ ಅಮ್ಮತ್ತಿ,

ಮಂಗಳೂರು ವಿವಿ ಫುಟ್ಬಾಲ್

ತರಬೇತುದಾರ.

share
ಕೆ.ಎಂ. ಇಸ್ಮಾಯಿಲ್ ಕಂಡಕರೆ
ಕೆ.ಎಂ. ಇಸ್ಮಾಯಿಲ್ ಕಂಡಕರೆ
Next Story
X