Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 2017ರಿಂದ 2023ರವರೆಗಿನ ವಿಪತ್ತು...

2017ರಿಂದ 2023ರವರೆಗಿನ ವಿಪತ್ತು ನಿರ್ವಹಣೆ ಹಣಕಾಸಿನ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸದ ರಾಜ್ಯ ಸರಕಾರ

ಜಿ.ಮಹಾಂತೇಶ್ಜಿ.ಮಹಾಂತೇಶ್27 Dec 2025 8:40 AM IST
share
2017ರಿಂದ 2023ರವರೆಗಿನ ವಿಪತ್ತು ನಿರ್ವಹಣೆ ಹಣಕಾಸಿನ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸದ ರಾಜ್ಯ ಸರಕಾರ

ಬೆಂಗಳೂರು : ರಾಜ್ಯದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರಕಾರವು 2017-18ರಿಂದ 2022-23ರವರೆಗೆ ಬಿಡುಗಡೆಯಾಗಿದ್ದ ಒಟ್ಟು 19,644.78 ಕೋಟಿ ರೂ.ಗಳಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯು ಹಣಕಾಸಿನ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ.

ಹೆಚ್ಚಿನ ಮೌಲ್ಯದ ಹಣಕಾಸಿನ ವಹಿವಾಟುಗಳನ್ನು ನಡೆಸುತ್ತಿದ್ದರೂ ಸಹ ಹಣಕಾಸು ದಾಖಲೆಗಳನ್ನು ಕ್ರಮಬದ್ಧವಾಗಿ ನಿರ್ವಹಿಸಿಲ್ಲ. ಅಲ್ಲದೇ ಹಣಕಾಸು ಔಚಿತ್ಯದ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿರುವುದನ್ನು ಭಾರತದ ಲೆಕ್ಕ ನಿಯಂತ್ರಕರು ಮತ್ತು ಪ್ರಧಾನ ಮಹಾಲೇಖಪಾಲರು ಪತ್ತೆ ಹಚ್ಚಿದ್ದಾರೆ.

2025ರ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆಯಾಗಿರುವ ಸಿಎಜಿ ಲೆಕ್ಕ ಪರಿಶೋಧನೆ ವರದಿಯು, ಕರ್ನಾಟಕದ ವಿಪತ್ತು ನಿರ್ವಹಣೆಯಲ್ಲಿನ ಹಣಕಾಸಿನ ದುರಾಡಳಿತವನ್ನು ಅನಾವರಣಗೊಳಿಸಿದೆ. ಈ ವರದಿಯ ಪ್ರತಿಯು "the-file.in"ಗೆ ಲಭ್ಯವಾಗಿದೆ.

2017-18ರಿಂದ 2022-23ರವರೆಗಿನ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರವು ಎಸಗಿರುವ ಲೋಪ ಮತ್ತು ಉಲ್ಲಂಘನೆಗಳ ಪಟ್ಟಿಯನ್ನು ವರದಿಯಲ್ಲಿ ಒದಗಿಸಿದೆ. ಅಲ್ಲದೇ ಈ ಆರೂ ವರ್ಷಗಳಲ್ಲಿ ವಿಪತ್ತು ನಿರ್ವಹಣೆಗೆ ಸ್ವೀಕರಿಸಿರುವ ಅನುದಾನ, ಬಿಡುಗಡೆಯಾದ ಅನುದಾನ, ಮಾಡಿರುವ ವೆಚ್ಚದ ಕುರಿತು ಆರ್ಥಿಕ ದಾಖಲೆಗಳನ್ನು ಸಿಎಜಿಗೆ ಕಂದಾಯ ಇಲಾಖೆಯು ಒದಗಿಸಿರಲಿಲ್ಲ.

‘ನಿಗದಿತ ಆರ್ಥಿಕ ದಾಖಲೆಗಳ ಅನುಪಸ್ಥಿತಿಯಲ್ಲಿ ಲೆಕ್ಕ ಪರಿಶೋಧನೆಗೆ ಲಭ್ಯವಿರುವ ಆರ್ಥಿಕ ಹೇಳಿಕೆಗಳಲ್ಲಿ ಸ್ವೀಕೃತಿಗಳು ಮತ್ತು ಖರ್ಚುಗಳ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಲೆಕ್ಕಪರಿಶೋಧನೆಗೆ ಸಾಧ್ಯವಾಗಲಿಲ್ಲ,’ ಎಂದು ಸಿಎಜಿಯು ಅಭಿಪ್ರಾಯಿಸಿರುವುದು ವರದಿಯಿಂದ ತಿಳಿದು ಬಂದಿದೆ.

ವಿಪತ್ತು ನಿರ್ವಹಣೆಗೆ ಸ್ವೀಕೃತವಾದ ಅನುದಾನವೆಷ್ಟು?:

2017-18ರಲ್ಲಿ ವಿಪತ್ತು ನಿರ್ವಹಣೆಯ ಖಾತೆಯಲ್ಲಿ ಆರಂಭಿಕ ಶಿಲ್ಕಿನ ರೂಪದಲ್ಲಿ 1235.52 ಕೋಟಿ ರೂ. ಇತ್ತು. ಎನ್‌ಡಿಆರ್‌ಎಫ್‌ನಿಂದ 913.04 ಕೋಟಿ ರೂ., ಎಸ್‌ಡಿಆರ್‌ಎಫ್‌ಗೆ ಕೇಂದ್ರ ಸರಕಾರವು 228.75 ಕೋಟಿ ರೂ., ರಾಜ್ಯ ಸರಕಾರವು 76.25 ಕೋಟಿ, ರಾಜ್ಯದಿಂದ ಹೆಚ್ಚುವರಿ ಅನುದಾನದ ರೂಪದಲ್ಲಿ 37.19 ಕೋಟಿ ರೂ. ಇತ್ತು. ಈ ಪೈಕಿ ಒಟ್ಟು 2,490.75 ಕೋಟಿ ರೂ. ಬಿಡುಗಡೆಯಾಗಿತ್ತು. ಇದರಲ್ಲಿ ಶೇ.97ರಷ್ಟು ಅಂದರೇ 2,411.61 ಕೋಟಿ ರೂ. ವೆಚ್ಚ ಮಾಡಿತ್ತು.

2018-19ರಲ್ಲಿ ಎನ್‌ಡಿಆರ್‌ಎಫ್‌ನಿಂದ 959.84 ಕೋಟಿ ರೂ. ಅನುದಾನ ಸ್ವೀಕೃತವಾಗಿತ್ತು. ಕೇಂದ್ರ ಸರಕಾರವು ಎಸ್‌ಡಿಆರ್‌ಎಫ್‌ಗೆ 288,.00 ಕೋಟಿ ರೂ.., ರಾಜ್ಯ ಸರಕಾರವು 32.00 ಕೋಟಿ ರೂ. ಅನುದಾನ ನೀಡಿತ್ತು. ಅಲ್ಲದೇ ರಾಜ್ಯ ಸರಕಾರವು ಹೆಚ್ಚುವರಿಯಾಗಿ 400 ಕೋಟಿ ರೂ. ಅನುದಾನ ಒದಗಿಸಿತ್ತು. ಇದರಲ್ಲಿ ಒಟ್ಟು 1,679.84 ಕೋಟಿ ರೂ. ಬಿಡುಗಡೆಯಾಗಿತ್ತು. ಈ ಪೈಕಿ 1,207.22 ಕೋಟಿ ರೂ. ವೆಚ್ಚವಾಗಿತ್ತು. 2019-20ರಲ್ಲಿ ಆರಂಭಿಕ ಶಿಲ್ಕಿನಲ್ಲಿ 434.62 ಕೋಟಿ ರೂ. ಇತ್ತು. ಎನ್‌ಡಿಆರ್‌ಎಫ್‌ನಿಂದ2,744.26 ಕೋಟಿ ರೂ., ಎಸ್‌ಡಿಆರ್‌ಎಫ್‌ಗೆ ಕೇಂದ್ರ ಸರಕಾರವು 204.00 ಕೋಟಿ, ರಾಜ್ಯ ಸರಕಾರವು 132.00 ಕೋಟಿ ರೂ. ನೀಡಿತ್ತು. ಅಲ್ಲದೇ ರಾಜ್ಯ ಸರಕಾರವು ಹೆಚ್ಚುವರಿಯಾಗಿ 1,500 ಕೋಟಿ ರೂ. ಒದಗಿಸಿತ್ತು. ಈ ಪೈಕಿ 5,014.88 ಕೋಟಿ ರೂ. ಬಿಡುಗಡೆಯಾಗಿದ್ದರೇ ಇದರಲ್ಲಿ 4,899.52 ಕೋಟಿ ರೂ. ವೆಚ್ಚವಾಗಿತ್ತು.

2020-21ರಲ್ಲಿ ಎನ್‌ಡಿಆರ್‌ಎಫ್‌ನಿಂದ 577.84 ಕೋಟಿ ರೂ. ಅನುದಾನ ಸ್ವೀಕೃತವಾಗಿದ್ದರೇ ಎಸ್‌ಡಿಆರ್‌ಎಫ್‌ಗೆ ಕೇಂದ್ರ ಸರಕಾರವು 632.40 ಕೋಟಿ ರೂ., ರಾಜ್ಯ ಸರಕಾರವು 210.80 ಕೋಟಿ ರೂ. ನೀಡಿತ್ತು. ಎಸ್‌ಡಿಎಂಎಫ್‌ಗೆ ಕೇಂದ್ರ ಸರಕಾರವು 158.20 ಕೊಟಿ ರೂ., ರಾಜ್ಯ ಸರಕಾರವು 52.60 ಕೋಟಿ ರೂ. ನೀಡಿತ್ತು. ಅಲ್ಲದೇ ರಾಜ್ಯ ಸರಕಾರವು ಇದೇ ಅವಧಿಗೆ ಹೆಚ್ಚುವರಿಯಾಗಿ 608.13 ಕೋಟಿ ರೂ. ನೀಡಿತ್ತು. ಇದರಲ್ಲಿ ಬಿಡುಗಡೆಯಾಗಿದ್ದ 2,239.97 ಕೋಟಿ ರೂ. ಪೈಕಿ 2,238.37 ಕೋಟಿ ರೂ. ವೆಚ್ಚವಾಗಿತ್ತು.

2021-22ರಲ್ಲಿ ಎನ್‌ಡಿಆರ್‌ಎಫ್‌ನಿಂದ 1,734.3 ಕೋಟಿ ರೂ. ಅನುದಾನ ಸ್ವೀಕೃತವಾಗಿದ್ದರೇ ಎಸ್‌ಡಿಆರ್‌ಎಫ್‌ಗೆ ಭಾರತ ಸರಕಾರವು 632.40 ಕೋಟಿ, ರಾಜ್ಯ ಸರಕಾರವು 210.80 ಕೋಟಿ ರೂ.., ಎಸ್‌ಡಿಎಂಎಫ್‌ಗೆ ಕೇಂದ್ರ ಸರಕಾರವು 158.20 ಕೋಟಿ, ರಾಜ್ಯ ಸರಕಾರವು 52.60 ಕೋಟಿ ರೂ. ನೀಡಿತ್ತು. ಅಲ್ಲದೆ ಇದೇ ವರ್ಷಕ್ಕೆ ರಾಜ್ಯ ಸರಕಾರವು 2,426.27 ಕೋಟಿ ರೂ. ಹೆಚ್ಚುವರಿಯಾಗಿ ನೀಡಿತ್ತು. ಬಿಡುಗಡೆಯಾಗಿದ್ದ 5,214.57 ಕೋಟಿ ರೂ. ಪೈಕಿ 5,003.75 ಕೋಟಿ ರೂ. ವೆಚ್ಚವಾಗಿತ್ತು.

2022-23ರಲ್ಲಿ ಎನ್‌ಡಿಆರ್‌ಎಫ್‌ನಿಂದ 939.83 ಕೋಟಿ ರೂ., ಎಸ್‌ಡಿಆರ್‌ಎಫ್ ನಿಧಿಗೆ ಕೇಂದ್ರ ಸರಕಾರವು 664.00 ಕೋಟಿ, ರಾಜ್ಯ ಸರಕಾರವು 221.33 ಕೋಟಿ ರೂ. ನೀಡಿತ್ತು. ಎಸ್‌ಡಿಎಂಎಫ್‌ಗೆ ಕೇಂದ್ರ ಮತ್ತು ರಾಜ್ಯ ಸರಕಾರವು ಹಣ ಬಿಡುಗಡೆ ಮಾಡಿರಲಿಲ್ಲ. ಬದಲಿಗೆ ಹೆಚ್ಚುವರಿಯಾಗಿ 1,179.61 ಕೋಟಿ ರೂ. ಒದಗಿಸಿತ್ತು. ಬಿಡುಗಡೆಯಾಗಿದ್ದ 3,004.77 ಕೋಟಿ ರೂ. ಪೈಕಿ 2,939.41 ಕೋಟಿ ರೂ. ವೆಚ್ಚ ಮಾಡಿತ್ತು.

ಒಟ್ಟಾರೆಯಾಗಿ ಎನ್‌ಡಿಆರ್‌ಎಫ್‌ನಿಂದ ಈ ಆರೂ ವರ್ಷಗಳಲ್ಲಿ 7,869.11 ಕೋಟಿ ರೂ. ಅನುದಾನ ಸ್ವೀಕೃತವಾಗಿತ್ತು. ಎಸ್‌ಡಿಆರ್‌ಎಫ್ ನಿಧಿಗೆ ಕೇಂದ್ರ ಸರಕಾರವು 2,649.55 ಕೋಟಿ ರೂ.., ರಾಜ್ಯ ಸರಕಾರವು 883.18 ಕೋಟಿ ರೂ., ಎಸ್ಡಿಎಂಎಫ್ಗೆ ಕೇಂದ್ರ ಸರಕಾರವು 316.40 ಕೋಟಿ, ರಾಜ್ಯ ಸರಕಾರವು 105.20 ಕೋಟಿ ರೂ. ನೀಡಿತ್ತು. ರಾಜ್ಯ ಸರಕಾರವು ಹೆಚ್ಚುವರಿಯಾಗಿ ಒಟ್ಟು 6,151.20 ಕೋಟಿ ರೂ. ಅನುದಾನ ಒದಗಿಸಿತ್ತು. ಒಟ್ಟು ಬಿಡುಗಡೆಯಾಗಿದ್ದ 19,644.78 ಕೋಟಿ ರೂ. ಪೈಕಿ 18,699.88 ಕೋಟಿ ರೂ. ವೆಚ್ಚ ಮಾಡಿತ್ತು ಎಂದು ಸಿಎಜಿಯು ತನ್ನ ವರದಿಯಲ್ಲಿ ಪಟ್ಟಿ ನೀಡಿದೆ.

ಬಿಡುಗಡೆಯಾಗದ 210.80 ಕೋಟಿ ರೂ.: ಎಸ್‌ಡಿಎಂಎಫ್ ಅಡಿಯಲ್ಲಿ ರಾಜ್ಯ ಸರಕಾರವು (2020-21) ಭಾರತ ಸರಕಾರದಿಂದ ಮಾರ್ಗಸೂಚಿಗಳನ್ನು ಸ್ವೀಕರಿಸುವವರೆಗೆ ಅನುದಾನ ಬಳಸದಂತೆ ಸೂಚನೆ ನೀಡಿತ್ತು. ಮತ್ತು ಜಿಲ್ಲಾ ಕಚೇರಿಗಳಿಗೆ 184.50 ಕೋಟಿ ರೂ.ಗಳನ್ನು (ಲಭ್ಯವಿದ್ದ 210.80 ಕೋಟಿ ರೂ.) ಬಿಡುಗಡೆ ಮಾಡಿತ್ತು. 2021-22ಕ್ಕೆ ಸಂಬಂಧಿಸಿ ಒಟ್ಟು 210.80 ಕೋಟಿ ರೂ.ಗಳ ನಿಧಿಯನ್ನು ಅನುಷ್ಠಾನ ಏಜೆನ್ಸಿಗಳಿಗೆ ಬಿಡುಗಡೆಯನ್ನೇ ಮಾಡಿರಲಿಲ್ಲ. ಬದಲಿಗೆ ರಾಜ್ಯ ಸರಕಾರವು ತನ್ನಲ್ಲೇ ಉಳಿಸಿಕೊಂಡಿತ್ತು ಎಂಬುದನ್ನು ಲೆಕ್ಕ ಪರಿಶೋಧನೆಯು ಗಮನಿಸಿದೆ.

ಇದಲ್ಲದೇ 2022-23ನೇ ಸಾಲಿನಲ್ಲಿ ಹದಿನೈದನೇ ಹಣಕಾಸು ಆಯೋಗದ ಶಿಫಾರಸುಗಳ ಪ್ರಕಾರ ಭಾರತ ಸರಕಾರದ ಪಾಲು 166.05 ಕೋಟಿ ರೂ. ಮತ್ತು ರಾಜ್ಯ ಸರಕಾರದ ಪಾಲು 55.35 ಕೋಟಿ ರೂ. ಸೇರಿ ಒಟ್ಟು 221.40 ಕೋಟಿ ರೂ. ಗಳನ್ನು ಎಸ್ಡಿಎಂಎಫ್ ಅಡಿಯಲ್ಲಿ ಒದಗಿಸಬೇಕಿತ್ತು. ಆದರೂ ಭಾರತ ಸರಕಾರದಿಂದ ಮೀಸಲಿಟ್ಟ ಮೊತ್ತವನ್ನು ಸ್ವೀಕರಿಸಿರಲಿಲ್ಲ. ಹೀಗಾಗಿ ರಾಜ್ಯ ಸರಕಾರವೂ ತನ್ನ ಹೊಂದಾಣಿಕೆ ಪಾಲನ್ನು ಬಿಡುಗಡೆ ಮಾಡಿರಲಿಲ್ಲ. ಹೀಗಾಗಿ ಒಟ್ಟು 421.60 ಕೋಟಿ ರೂ. ನಿಧಿಯ ಲಭ್ಯತೆ ಇದ್ದರೂ ಸಹ ವಿವಿಧ ವಿಪತ್ತುಗಳನ್ನು ಶಮನಗೊಳಿಸುವ ಚಟುವಟಿಕೆಗಳನ್ನು ಕಾರ್ಯಗತಗೊಳಿಸಲಿಲ್ಲ ಎಂದು ಸಿಎಜಿ ವರದಿಯಲ್ಲಿ ವಿವರಿಸಿರುವುದು ಗೊತ್ತಾಗಿದೆ.

ಖಾತೆಯಲ್ಲಿ ವ್ಯತ್ಯಾಸಗಳು ಪತ್ತೆ

2017-18ರಿಂದ 2022-23ರವರೆಗಿನ ಆರಂಭಿಕ ಶಿಲ್ಕು, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಎಸ್‌ಡಿಎಂಎಫ್, ರಾಜ್ಯದಿಂದ ಹೆಚ್ಚುವರಿಯಾಗಿ ಒದಗಿಸಿದ್ದ ಅನುದಾನದ ರಸೀದಿಗಳು, ವೆಚ್ಚದಲ್ಲಿ ಅಂಕಿ ಅಂಶಗಳಲ್ಲಿ ವ್ಯತ್ಯಾಸಗಳನ್ನು ಸಿಎಜಿಯು ಪತ್ತೆ ಹಚ್ಚಿದೆ. ಇದರ ಪ್ರಕಾರ 2019-20ರ ಅವಧಿಯಲ್ಲಿ ಸಿಡಿಎಂ-ಎಟಿಐಗೆ 4.19 ಕೋಟಿ ರೂ. ವರ್ಗಾವಣೆ ಮಾಡಬೇಕಿತ್ತು. ಆದರೆ ಇಲಾಖೆಯು 0.13 ಕೋಟಿ ರೂ. ಕಡಿಮೆ ಮಾಡಿ ಕೇವಲ 4.06 ಕೋಟಿ ರೂ.ವರ್ಗಾವಣೆ ಮಾಡಿತ್ತು. ಅದೇ ರೀತಿ 2021-22ರಲ್ಲಿ ಸಿಡಿಎಂ-ಎಟಿಐಗೆ 3 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ತೋರಿಸಿದ್ದರೂ ಹಣವನ್ನು ವಾಸ್ತವಿಕವಾಗಿ ವರ್ಗಾಯಿಸಿರಲೇ ಇಲ್ಲ. ಅಲ್ಲದೇ ಹಣಕಾಸಿನ ಅಂಕಿ ಅಂಶಗಳನ್ನು ನಿಯತಕಾಲಿಕವಾಗಿ ಹೊಂದಾಣಿಕೆಯನ್ನೂ ಮಾಡಲಿಲ್ಲ.

‘ಜಿಲ್ಲೆಗಳು ಅಥವಾ ಏಜೆನ್ಸಿಗಳು ಬಿಡುಗಡೆಯಾದ ಅನುದಾನವನ್ನು ಸೆಳೆದುಕೊಳ್ಳದಿರುವುದರಿಂದ ಅಥವಾ ಕೈ ತಪ್ಪಿ ಹೋಗಿರುವುದರಿಂದ ಅಂಕಿ ಅಂಶಗಳೊಂದಿಗೆ ವ್ಯತ್ಯಾಸದ ಸಾಧ್ಯತೆಯಿದೆ’ ಎಂದು ಸಿಎಜಿ ವರದಿಯು ಅಭಿಪ್ರಾಯಿಸಿರುವುದು ಗೊತ್ತಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X