Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ತನ್ನ ಅವಧಿಯ ಸಿಎಂ ರಾಜಕೀಯ ಕಾರ್ಯದರ್ಶಿ,...

ತನ್ನ ಅವಧಿಯ ಸಿಎಂ ರಾಜಕೀಯ ಕಾರ್ಯದರ್ಶಿ, ಸಲಹೆಗಾರರ ನೇಮಕ ಸಮರ್ಥಿಸಿದ್ದ ಬಿಜೆಪಿ ಸರಕಾರ

-ಜಿ.ಮಹಾಂತೇಶ್-ಜಿ.ಮಹಾಂತೇಶ್25 July 2023 10:42 AM IST
share
ತನ್ನ ಅವಧಿಯ ಸಿಎಂ ರಾಜಕೀಯ ಕಾರ್ಯದರ್ಶಿ, ಸಲಹೆಗಾರರ ನೇಮಕ ಸಮರ್ಥಿಸಿದ್ದ ಬಿಜೆಪಿ ಸರಕಾರ

ಬೆಂಗಳೂರು, ಜು.24: ರಾಜಕೀಯ ಕಾರ್ಯದರ್ಶಿ ಮತ್ತು ಸಲಹೆಗಾರರನ್ನು ನೇಮಿಸಿಕೊಳ್ಳುವುದು ಮುಖ್ಯಮಂತ್ರಿಗಳ ವಿಶೇಷಾಧಿಕಾರವಾಗಿದೆ. ಮುಖ್ಯಮಂತ್ರಿಗಳ ಮೇಲಿನ ಕಾರ್ಯದ ಒತ್ತಡ, ರಾಜಕೀಯ ಬೆಳವಣಿಗೆಗಳು ಮತ್ತು ಸರಕಾರದ ಹಿತರಕ್ಷಣೆಗಾಗಿಯೇ ಮುಖ್ಯಮಂತ್ರಿಗಳಿಗೆ ರಾಜಕೀಯ ಕಾರ್ಯದರ್ಶಿ ಮತ್ತು ಸಲಹೆಗಾರರನ್ನಾಗಿ ನೇಮಿಸಿಕೊಳ್ಳಲಾಗುತ್ತದೆ ಎಂದು ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಪಿಐಎಲ್ಗೆ ಆಕ್ಷೇಪಣೆ ಸಲ್ಲಿಸಿದ ಹಿಂದಿನ ಬಿಜೆಪಿ ಸರಕಾರವು ಈ ಎಲ್ಲಾ ನೇಮಕಾತಿಗಳನ್ನು ಸಮರ್ಥಿಸಿಕೊಂಡಿರುವುದು ಇದೀಗ ಬಹಿರಂಗವಾಗಿದೆ.

ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಮುಖ್ಯಮಂತ್ರಿಗಳಿಗೆ ರಾಜಕೀಯ ಕಾರ್ಯದರ್ಶಿ, ಸಲಹೆಗಾರರ ಹುದ್ದೆ ಸೃಷ್ಟಿಸಿ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ದ ಕ್ರಮದ ಸಿಂಧುತ್ವ ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ವಿವರಣಾತ್ಮಕ ಟಿಪ್ಪಣಿಯಲ್ಲಿ ಕರ್ನಾಟಕ ಸರಕಾರವು ತನ್ನ ಕ್ರಮವನ್ನು 3 ಪುಟಗಳಲ್ಲಿ ಸಮರ್ಥಿಸಿಕೊಂಡಿದೆ.

ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಕೀಯ ಕಾರ್ಯದರ್ಶಿಗಳಾದ ವಿಧಾನ ಪರಿಷತ್ ಸದಸ್ಯರಾದ ನಜೀರ್ ಅಹ್ಮದ್ ಮತ್ತು ಕೆ. ಗೋವಿಂದರಾಜ್ ಹಾಗೂ ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಸುನೀಲ್ ಕನುಗೋಳು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ನೇಮಕಾತಿಯನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿರುವ ಬೆನ್ನಲ್ಲೇ ಈ ಎಲ್ಲಾ ನೇಮಕಾತಿಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಸರಕಾರವು ಸಲ್ಲಿಸಿರುವ ವಿವರಣಾತ್ಮಕ ಟಿಪ್ಪಣಿಯು ಮುನ್ನೆಲೆಗೆ ಬಂದಿದೆ. ಈ ಟಿಪ್ಪಣಿಯು ‘the-file.in’ಗೆ ಲಭ್ಯವಾಗಿದೆ.

ರಾಜಕೀಯ ಕಾಯದರ್ಶಿಗಳ ನೇಮಕದ ಹಿಂದೆ ಸಾರ್ವಜನಿಕ ಹಿತಾಸಕ್ತಿ ಇದೆ. ಮುಖ್ಯಮಂತ್ರಿಗಳ ಕಾರ್ಯಭಾರದ ಒತ್ತಡ ಕಡಿಮೆಗೊಳಿಸುವುದು, ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಸೂಕ್ತ ನಿರ್ಣಯ ಕೈಗೊಳ್ಳುವುದು ಮತ್ತು ಸರಕಾರದ ಹಿತರಕ್ಷಣೆ ಉದ್ದೇಶವಿದೆ. ಅನುಭವ ಮತ್ತು ಜ್ಞಾನ ಆಧರಿಸಿ ರಾಜಕೀಯ ಕಾರ್ಯದರ್ಶಿ ನೇಮಕ ಮಾಡಲಾಗುತ್ತಿದೆ. ಹಾಗೆಯೇ ಇಂತಹ ನೇಮಕಾತಿ ಮಾಡುವುದು ಮುಖ್ಯಮಂತ್ರಿಗಳ ವಿಶೇಷಾಧಿಕಾರ. ಹೀಗಾಗಿ ಇದರಲ್ಲಿ ಅಧಿಕಾರ ದುರ್ಬಳಕೆಯಾಗಿಲ್ಲ ಎಂದು ಸಮರ್ಥಿಸಿಕೊಂಡಿರುವುದು ಗೊತ್ತಾಗಿದೆ.

ಹಾಗೆಯೇ ಆಫೀಸ್ ಆಫ್ ಪ್ರಾಫಿಟ್, ಕರ್ನಾಟಕ ಕಾಯ್ದೆ ನಂ 7, 2019ರ ಅಡಿಯಲ್ಲಿ ರಾಜಕೀಯ ಕಾರ್ಯದರ್ಶಿಗಳು ಬರುವುದಿಲ್ಲ. ಕರ್ನಾಟಕ ವಿಧಾನಸಭೆ (ಅನರ್ಹತೆ ತಡೆಗಟ್ಟುವಿಕೆ) ಕಾಯ್ದೆ 1956 ಪ್ರಕಾರ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಕರ್ನಾಟಕ ಶಾಸಕಾಂಗ ಸಭೆಯ ಸದಸ್ಯತ್ವದ ಅನರ್ಹತೆ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಹೇಳಿರುವುದು ತಿಳಿದು ಬಂದಿದೆ.

ಹಿಂದಿನ ಸರಕಾರಗಳ ಅವಧಿಯಿಂದಲೂ ಮುಖ್ಯಮಂತ್ರಿಗಳಿಗೆ ರಾಜಕೀಯ ಕಾರ್ಯದರ್ಶಿಗಳನ್ನು ನೇಮಿಸಿಕೊಳ್ಳುವ ಪರಿಪಾಠವಿದೆ. ಮುಖ್ಯಮಂತ್ರಿ ಕಚೇರಿ ಮತ್ತು ರಾಜಕೀಯ ವಿಷಯಗಳ ಕುರಿತು ರಾಜಕೀಯ ಕಾರ್ಯದರ್ಶಿಗಳು ವ್ಯವಹರಿಸುತ್ತಾರೆ ಮತ್ತು ಇಂತಹ ವಿಚಾರಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ನೆರವಾಗುತ್ತಾರೆ ಎಂದು ರಾಜ್ಯ ಶಿಷ್ಟಾಚಾರದ ಅಧೀನ ಕಾರ್ಯದರ್ಶಿಯು ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

share
-ಜಿ.ಮಹಾಂತೇಶ್
-ಜಿ.ಮಹಾಂತೇಶ್
Next Story
X