Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸಾಗರ ಉಪವಿಭಾಗೀಯ ಸರಕಾರಿ ಆಸ್ಪತ್ರೆಯಲ್ಲಿ...

ಸಾಗರ ಉಪವಿಭಾಗೀಯ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಕೊರತೆ

ತಜ್ಞರ ಅಭಾವದಿಂದ ಬಳಕೆಯಾಗದ ಯಂತ್ರಗಳು

ಇಮ್ರಾನ್ ಸಾಗರ್ಇಮ್ರಾನ್ ಸಾಗರ್14 Nov 2023 11:22 AM IST
share
ಸಾಗರ ಉಪವಿಭಾಗೀಯ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಕೊರತೆ

ಸಾಗರ: ಇಲ್ಲಿನ ಉಪವಿಭಾಗೀಯ ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿಂದ ರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಗರ, ಸೊರಬ, ಹೊಸನಗರ ಹಾಗೂ ಉತ್ತರ ಕನ್ನಡ ಜಿಲ್ಲೆಯಿಂದಲೂ ಬಡ ರೋಗಿಗಳು ಇಲ್ಲಿಗೆ ಚಿಕಿತ್ಸೆಗೆ ಬರುತ್ತಾರೆ. ಆದರೆ ಈ ಆಸ್ಪತ್ರೆಯಲ್ಲಿ ಸಾಕಷ್ಟು ವೈದ್ಯರು, ಸಿಬ್ಬಂದಿಯವರ ಕೊರತೆ ಎದ್ದು ಕಾಣುತ್ತಿದೆ.

ಆಸ್ಪತ್ರೆಯಲ್ಲಿ ಸಾಕಷ್ಟು ಅತ್ಯಾಧುನಿಕ ಯಂತ್ರಗಳಿದ್ದರೂ ವೈದ್ಯರು, ತಜ್ಞ ಸಿಬ್ಬಂದಿ ಕೊರತೆ ಕಾರಣಕ್ಕಾಗಿ ಅವುಗಳ ಬಳಕೆ ಸಮರ್ಪಕವಾಗಿ ಆಗುತ್ತಿಲ್ಲ. ತುರ್ತು ಚಿಕಿತ್ಸಾ ನಿಗಾ ಘಟಕವು ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸಬೇಕಿದ್ದು, ಇದಕ್ಕಾಗಿ ಅಗತ್ಯವಿರುವ ಪ್ರತ್ಯೇಕ ವೈದ್ಯರು, ಸಿಬ್ಬಂದಿ ಇರುವುದಿಲ್ಲ.

ಇತರ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯ ಸಿಬ್ಬಂದಿಯೇ ಈ ಘಟಕವನ್ನು ನೋಡಿಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಸ್ಕ್ಯಾನಿಂಗ್ ಯಂತ್ರೋಪಕರಣಗಳು ಇದ್ದರೂ ವಿಕಿರಣ ತಜ್ಞರು (ರೇಡಿಯಾಲಜಿಸ್ಟ್) ಕೊರತೆಯಿಂದಾಗಿ ಅದು ಸರಿಯಾಗಿ ಬಳಕೆಯಾಗುತ್ತಿಲ್ಲ. ಇದರ ಪರಿಣಾಮ ಬಡ ರೋಗಿಗಳು ಸ್ಕ್ಯಾನಿಂಗ್ ಮಾಡಲು ಖಾಸಗಿ ಆಸತ್ರೆಯ ಬಾಗಿಲು ತಟ್ಟಬೇಕಿದೆ. ಕಳೆದ 6 ತಿಂಗಳಿನಿಂದ ನೇತ್ರ ತಜ್ಞರಿಲ್ಲದೆ ಕಣ್ಣಿನ ಸಮಸ್ಯೆ ಇದ್ದವರ ಪರದಾಟ ಹೇಳತೀರದು. ಹಲ್ಲಿನ ವೈದ್ಯರು ಇದ್ದರೂ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಇರುವ ಅತ್ಯಾಧುನಿಕ ಯಂತ್ರೋಕರಣಗಳನ್ನು ಹಾಗೆಯೇ ಜೋಪಾನವಾಗಿಟ್ಟಿದ್ದಾರೆ.

ಹೊರ ರೋಗಿಗಳು ವೈದ್ಯರ ಭೇಟಿಗೆ ಸರತಿ ಸಾಲಿನಲ್ಲಿ ನಿಂತು ಗಂಟೆಗಟ್ಟಲೆ ಕಾಯಬೇಕು. ಕೆಲ ರೋಗಿಗಳು ಹಾಗೆ ಸಾಲಿನಲ್ಲಿ ನಿಲ್ಲದೆ ನೇರ ವೈದ್ಯರನ್ನು ಭೇಟಿಯಾಗಲು ಮುನ್ನುಗ್ಗುತ್ತಾರೆ. ಆ ಸಂದರ್ಭದಲ್ಲಿ ಸಾಲಿನಲ್ಲಿ ತಾಸುಗಟ್ಟಲೆ ಕಾದು ನಿಂತಿದ್ದವರು ರೊಚ್ಚಿಗೆದ್ದು ಅವರೊಂದಿಗೆ ಜಗಳವಾಡುವುದು ಮಾಮೂಲಾಗಿದೆ. ತಾಸುಗಟ್ಟಲೆ ಕಾದರೂ ಕೆಲವೊಮ್ಮೆ ವೈದ್ಯರಿಲ್ಲದೇ ಹಿಂದಿರುಗಬೇಕಾದ ಪರಿಸ್ಥಿತಿಯೂ ನಿರ್ಮಾಣವಾಗುತ್ತದೆ. ವಿಚಾರಣೆಯಲ್ಲಿ ವೈದ್ಯರ ಬರುವಿಕೆಗೆ ಮಾಹಿತಿ ಕೇಳಿದಾಗ ದರ್ಪದ ಉತ್ತರ ಸಿಗುತ್ತದೆ.

ಉಪವಿಭಾಗೀಯ ಆಸ್ಪತ್ರೆ 100ರಿಂದ 150 ಹಾಸಿಗೆಗೆ ಮೇಲ್ದರ್ಜೆಗೆ ಏರಿದ್ದರೂ ಸಿಬ್ಬಂದಿ ಸಮಸ್ಯೆ ಇನ್ನೂ ಬಗೆಹರಿದಿಲ್ಲ. 150 ಹಾಸಿಗೆ ಆಸ್ಪತ್ರೆಗೆ ಇರಬೇಕಾದ 82 ಡಿ ದರ್ಜೆ ನೌಕರರಲ್ಲಿ ಈಗಿರುವುದು ಕೇವಲ 42 ನೌಕರರು ಮಾತ್ರ. 13 ಜನ ನರ್ಸ್ ಸಿಬ್ಬಂದಿ ಕೊರತೆ ಇದೆ. ಕಾಲಕಾಲಕ್ಕೆ ಸಂಬಂಧ ಪಟ್ಟವರ ಕಾಳಜಿಯಿಂದ ಹಾಸಿಗೆ ಸಂಖ್ಯೆ ಹೆಚ್ಚುತ್ತಿದೆ. ಆಧುನಿಕ ಯಂತ್ರ ಸುಧಾರಣೆ ಆಗುತ್ತದೆ.ಆದರೆ ಜೊತೆ ಜೊತೆಗೆ ಆಗಬೇಕಾದ ಪೂರಕ ವ್ಯವಸ್ಥೆ, ತಜ್ಞರ ನೇಮಕ ಆಗುತ್ತಿಲ್ಲ.ಬಡ ರೋಗಿಗಳು ಪರದಾಡುವ ಸ್ಥಿತಿ ಹೆಚ್ಚಾಗಿದೆ.

‘ವಿಶ್ವಾಸಾರ್ಹತೆ ಕಳೆದುಕೊಂಡ ಲ್ಯಾಬ್ ವರದಿ’

ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳಿಗೆ ಅಗತ್ಯವಿರುವ ರಕ್ತ, ಮೂತ್ರ ಮೊದಲಾದ ಪರೀಕ್ಷೆಗಳಿಗೆ ಪರೀಕ್ಷಿಸುವ ಪ್ರಯೋಗಾಲಯ ಆಸ್ಪತ್ರೆಯಲ್ಲಿದೆ. ಆದರೆ ಇಲ್ಲಿ ಬರುವ ವರದಿಗೂ, ಖಾಸಗಿ ಲ್ಯಾಬ್‌ಗಳಲ್ಲಿ ಬರುವ ವರದಿಗೂ ವ್ಯತ್ಯಾಸಗಳು ಕಂಡು ಬರುತ್ತಿರುವುದರಿಂದ ಈ ಆಸ್ಪತ್ರೆಯಲ್ಲಿನ ಪ್ರಯೋಗಾಲಯ ವಿಶ್ವಾಸರ್ಹತೆಯನ್ನು ಕಳೆದುಕೊಂಡಿದೆ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.

Tags

sagarSub-Divisional Government Hospital
share
ಇಮ್ರಾನ್ ಸಾಗರ್
ಇಮ್ರಾನ್ ಸಾಗರ್
Next Story
X