Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನೋಡುಗರನ್ನು ಮಂತ್ರಮುಗ್ಧಗೊಳಿಸುವ...

ನೋಡುಗರನ್ನು ಮಂತ್ರಮುಗ್ಧಗೊಳಿಸುವ ತೀರ್ಥಕೆರೆ ಫಾಲ್ಸ್‌ನ ಚಿತ್ತಾರ

ಕೆ.ಎಲ್.ಶಿವು, ಚಿಕ್ಕಮಗಳೂರುಕೆ.ಎಲ್.ಶಿವು, ಚಿಕ್ಕಮಗಳೂರು10 Nov 2025 10:38 AM IST
share
ನೋಡುಗರನ್ನು ಮಂತ್ರಮುಗ್ಧಗೊಳಿಸುವ ತೀರ್ಥಕೆರೆ ಫಾಲ್ಸ್‌ನ ಚಿತ್ತಾರ

ಚಿಕ್ಕಮಗಳೂರು: ಕಾಫಿನಾಡು ಎಂದೇ ಖ್ಯಾತಿಗೆ ಪಾತ್ರವಾಗಿರುವ ಚಿಕ್ಕಮಗಳೂರು ಜಿಲ್ಲೆ ಪ್ರವಾಸಿಗರ ಸ್ವರ್ಗವಾಗಿದೆ. ಭೌಗೋಳಿಕವಾಗಿ ಗಿರಿಶಿಖರಗಳ ಬೀಡಾಗಿರುವ ಜಿಲ್ಲೆ ನೂರಾರು ಪ್ರವಾಸಿ ತಾಣಗಳ ತವರೂರಾಗಿದೆ.

ಜಿಲ್ಲಾದ್ಯಂತ ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಮಲೆನಾಡು ಭಾಗದಲ್ಲಿರುವ ಝರಿ ಜಲಪಾತಗಳಿಗೆ ಜೀವಕಳೆ ಬಂದಿದ್ದು, ಈ ಝರಿ ಜಲಪಾತಗಳು ಸದ್ಯ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗುತ್ತಿವೆ. ಜಿಲ್ಲೆಯಲ್ಲಿರುವ ನೂರಾರು ಝರಿ ಜಲಪಾತಗಳ ಪೈಕಿ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಯಪುರ-ಕಳಸ ರಾಜ್ಯ ಹೆದ್ದಾರಿಯ ಕೌಳಿ ಗ್ರಾಮದ ಬಳಿ ಇರುವ ತೀರ್ಥಕೆರೆ ಜಲಪಾತವೂ ಒಂದು. ಉತ್ತಮ ಮಳೆಯ ಪರಿಣಾಮ ತೀರ್ಥಕೆರೆ ಫಾಲ್ಸ್ ಮೈದುಂಬಿ ಹರಿಯುತ್ತಾ ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತಿದೆ.

ಜಯಪುರ-ಕಳಸ ರಾಜ್ಯ ಹೆದ್ದಾರಿಯ ಕೌಳಿ ಗ್ರಾಮ ಸಮೀಪದಲ್ಲಿ ರಸ್ತೆಗೆ ಅಂಟಿಕೊಂಡೇ ಧುಮ್ಮಿಕ್ಕುತ್ತಿರುವ ತೀರ್ಥಕೆರೆ ಫಾಲ್ಸ್ ದಟ್ಟ ಅರಣ್ಯ ಮತ್ತು ಕಾಫಿ ತೋಟವೊಂದಕ್ಕೆ ಹೊಂದಿಕೊಂಡು ಸುಮಾರು 40ಅಡಿ ಎತ್ತರದಿಂದ ಕಪ್ಪು ಬಂಡೆ ಕಲ್ಲಿನ ಮೇಲೆ ಭೋರ್ಗರೆಯುತ್ತಾ ಇಳಿದು ಬರುವ ಪರಿ ನೋಡುಗರನ್ನು ಮಂತ್ರಮುಗ್ಧಗೊಳಿಸುತ್ತದೆ.

ಭೋರ್ಗರೆಯುತ್ತಾ ಹರಿಯುವ ಜಲಪಾತದ ನೀರಿನ ಶಬ್ದ, ಹಿನ್ನೆಲೆಯಲ್ಲಿ ಕೇಳಿಬರುವ ಪ್ರಾಣಿ ಪಕ್ಷಿಗಳ ಕಲರವ, ಸುಂದರ ಹಸಿರು ಕಾಡಿನ ವಾತಾವರಣ ಪ್ರವಾಸಿಗರ ಮೈಮನವನ್ನು ಪುಳಕಗೊಳಿಸುತ್ತದೆ.

ಜಯಪುರ ಪಟ್ಟಣದಿಂದ ಕೇವಲ 6 ಕಿ.ಮೀ. ದೂರದಲ್ಲಿರುವ ಈ ಫಾಲ್ಸ್ ರಸ್ತೆ ಬದಿಯಲ್ಲೇ ಇದ್ದರೂ ಪ್ರಚಾರದ ಕೊರತೆಯಿಂದಾಗಿ ಪ್ರವಾಸಿಗರಿಂದ ದೂರವೇ ಉಳಿದಿದೆ. ಶೃಂಗೇರಿ, ಹೊರನಾಡಿನಂತಹ ಧಾರ್ಮಿಕ ಪ್ರವಾಸಿ ಕೇಂದ್ರಗಳಿಗೆ ಭೇಟಿ ನೀಡಲು ಬರುವ ಪ್ರವಾಸಿಗರು ಜಯಪುರದಿಂದ ಕೊಗ್ರೆ ಮಾರ್ಗವಾಗಿ ಕಳಸ ರಸ್ತೆಯಲ್ಲಿ ಸಂಚರಿಸಿದಲ್ಲಿ ಕೌಳಿ ಗ್ರಾಮ ಸಮೀಪದಲ್ಲಿ ತೀರ್ಥಕೆರೆ ಫಾಲ್ಸ್ ಕಣ್ಣಿಗೆ ಬೀಳುತ್ತದೆ. ಈ ಮಾರ್ಗದಲ್ಲಿ ಸಂಚರಿಸುವ ಪ್ರವಾಸಿಗರು ಜಲಪಾತದ ಮುಂದೆ ವಾಹನ ನಿಲ್ಲಿಸಿ ಸೆಲ್ಫಿ ಕ್ಲಿಕ್ಕಿಸಿಕೊಂಡೇ ಮುಂದೆ ಸಾಗುತ್ತಾರೆ.

ಫಾಲ್ಸ್ ತಲುಪುವುದು ಹೇಗೆ?

ಚಿಕ್ಕಮಗಳೂರು ಜಿಲ್ಲಾ ಕೇಂದ್ರದಿಂದ ಈ ಫಾಲ್ಸ್ ಸುಮಾರು 80 ಕಿ.ಮೀ. ದೂರದಲ್ಲಿದ್ದು, ಚಿಕ್ಕಮಗಳೂರು-ಶೃಂಗೇರಿ ರಸ್ತೆಯಲ್ಲಿ ಸಿಗುವ ಜಯಪುರ ಪಟ್ಟಣ ಸಮೀಪದ ಮಕ್ಕಿಕೊಪ್ಪದಿಂದ 3 ಕಿ.ಮೀ. ಸಾಗಿದಲ್ಲಿ ತೀರ್ಥಕೆರೆ ಫಾಲ್ಸ್ ರಸ್ತೆ ಬದಿಯಲ್ಲೇ ಸಿಗುತ್ತದೆ.

share
ಕೆ.ಎಲ್.ಶಿವು, ಚಿಕ್ಕಮಗಳೂರು
ಕೆ.ಎಲ್.ಶಿವು, ಚಿಕ್ಕಮಗಳೂರು
Next Story
X