Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಯನಾಡ್ ಪ್ರವಾಸೋದ್ಯಮದ ಪರ ಜಾಹೀರಾತು:...

ವಯನಾಡ್ ಪ್ರವಾಸೋದ್ಯಮದ ಪರ ಜಾಹೀರಾತು: 2019ರಿಂದಲೂ ಪ್ರವಾಸ ಆಯೋಜನೆ; ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ವರದಿ

ಜಿ.ಮಹಾಂತೇಶ್ಜಿ.ಮಹಾಂತೇಶ್1 Nov 2025 9:04 AM IST
share
ವಯನಾಡ್ ಪ್ರವಾಸೋದ್ಯಮದ ಪರ ಜಾಹೀರಾತು: 2019ರಿಂದಲೂ ಪ್ರವಾಸ ಆಯೋಜನೆ; ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ವರದಿ

ಬೆಂಗಳೂರು: ಕೇರಳದ ವಯನಾಡ್ ಪ್ರವಾಸಿ ತಾಣಕ್ಕೆ ವ್ಯವಸ್ಥಿತವಾಗಿ ಪ್ರವಾಸವನ್ನು 2019ರಿಂದಲೂ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ದಿ ನಿಗಮವು ಆಯೋಜಿಸುತ್ತಿದೆ. ನಿಗಮದ ವ್ಯವಸ್ಥಿತ ಪ್ರವಾಸಗಳ ವಹಿವಾಟನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಹಾಗೂ ಅಂತರ್‌ರಾಜ್ಯಗಳಿಗೆ ವ್ಯವಸ್ಥಿತ ಪ್ರವಾಸಗಳನ್ನು ಆಯೋಜನೆ ಮಾಡಲಾಗಿದೆ ಎಂದು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ವರದಿ ನೀಡಿದ್ದಾರೆ.

ವಯನಾಡ್ ಪ್ರವಾಸೋದ್ಯಮದ ಪರವಾಗಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಜಾಹೀರಾತು ನೀಡಿತ್ತು. ಇದು ರಾಜ್ಯಾದ್ಯಂತ ವ್ಯಾಪಕ ವಿರೋಧಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ವರದಿ ನೀಡುವಂತೆ ಕೆಎಸ್‌ಟಿಡಿಸಿಗೆ ರಾಜ್ಯ ಸರಕಾರ ಸೂಚನೆ ನೀಡಿದೆ.

ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರ ಆಪ್ತ ಕಾರ್ಯದರ್ಶಿಗೆ 2025ರ ಅಕ್ಟೋಬರ್ 30ರಂದು ನಾಲ್ಕು ಪುಟಗಳ ವರದಿ ನೀಡಿದ್ದಾರೆ. ಈ ವರದಿಯ ಪ್ರತಿಯು "The-file.in"ಗೆ ಲಭ್ಯವಾಗಿದೆ.

ವಯನಾಡ್‌ಗೆ ಪ್ರವಾಸ ಆಯೋಜಿಸಿದ್ದನ್ನು ಬಿಜೆಪಿಯು ಇದೇನು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯೋ ಅಥವಾ ಕೇರಳ ಪ್ರವಾಸೋದ್ಯಮ ಇಲಾಖೆಯೋ ಎಂದು ಪ್ರತಿಪಕ್ಷ ಬಿಜೆಪಿಯು ಟೀಕಿಸಿತ್ತು. ಪ್ರತಿಪಕ್ಷಗಳ ಟೀಕೆಯಿಂದ ಮುಜುಗರಕ್ಕೊಳಗಾಗಿದ್ದ ಸರಕಾರವು, ನಿಗಮದಿಂದ ಈ ಬಗ್ಗೆ ವರದಿ ಕೇಳಿತ್ತು. ಇದೀಗ ನಿಗಮವು ವರದಿ ನೀಡುವ ಮೂಲಕ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ.

ವರದಿಯಲ್ಲೇನಿದೆ?: ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ವಯನಾಡ್ ಪ್ರವಾಸಿ ತಾಣಕ್ಕೆ 2019ನೇ ಸಾಲಿನಲ್ಲಿ ವ್ಯವಸ್ಥಿತ ಪ್ರವಾಸವನ್ನು ಹೊಸದಾಗಿ ಆಯೋಜಿಸಲು ಕ್ರಮವಹಿಸಿತ್ತು. 2020ನೇ ಸಾಲಿನಲ್ಲಿ ಕೋವಿಡ್‌ನಿಂದಾಗಿ ಈ ಪ್ರವಾಸವನ್ನು ಸ್ಥಗಿತಗೊಳಸಲಾಗಿತ್ತು. ಮತ್ತೇ 2024-25ನೇ ಸಾಲಿನಲ್ಲಿ ವಯನಾಡ್ ಪ್ರವಾಸವನ್ನು ಆಯೋಜಿಸಲಾಗಿತ್ತು ಎಂದು ವಿವರಿಸಿರುವುದು ತಿಳಿದು ಬಂದಿದೆ.

ನಿಗಮವು ಕರ್ನಾಟಕ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ, ಪ್ರಚಾರಪಡಿಸುವ ಹಾಗೂ ಉತ್ತೇಜನಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಬೇರೆ ರಾಜ್ಯಗಳ ಪ್ರವಾಸಿ ತಾಣಗಳನ್ನು ಪ್ರಚಾರಪಡಿಸುತ್ತಿಲ್ಲ. ನಿಗಮದ ವ್ಯವಸ್ಥಿತ ಪ್ರವಾಸಗಳ ವಹಿವಾಟನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಹಾಗೂ ಅಂತರ್‌ರಾಜ್ಯಗಳಿಗೆ ವ್ಯವಸ್ಥಿತ ಪ್ರವಾಸಗಳನ್ನು ಆಯೋಜನೆ ಮಾಡಲಾಗಿರುತ್ತದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸಚಿವ ಎಚ್.ಕೆ.ಪಾಟಿಲ್ ಅವರ ಆಪ್ತ ಕಾರ್ಯದರ್ಶಿಗೆ ವರದಿ ನೀಡಿದ್ದಾರೆ.

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಪ್ರವಾಸೋದ್ಯಮ ಇಲಾಖೆಯ ಅಂಗಸಂಸ್ಥೆಯಾಗಿದೆ. ಕಳೆದ 54 ವರ್ಷಗಳಿಂದ ಆತಿಥ್ಯ ಕ್ಷೇತ್ರ ಹಾಗು ಪ್ರವಾಸೋಸದ್ಯಮ ಕ್ಷೇತ್ರಕ್ಕೆ ಸಂಬಂಧಪಟ್ಟ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ನಿಗಮವು ರಾಜ್ಯ ಮತ್ತು ಅಂತರ್‌ರಾಜ್ಯ ಮಟ್ಟದಲ್ಲಿ ದಕ್ಷಿಣ ರಾಜ್ಯಗಳನ್ನೊಳಗೊಂಡಂತೆ ಪ್ರವಾಸಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ಹೇಳಿದೆ.

ಪ್ರಮುಖವಾಗಿ ದೇಶೀಯ ಹಾಗೂ ವಿದೇಶಿಯ ಪ್ರವಾಸಿಗಳಿಗೆ ಕರ್ನಾಟಕ ವಿವಿಧ ಧಾರ್ಮಿಕ ಐತಿಹಾಸಿಕ, ಭೌಗೋಳಿಕ, ನೈಸರ್ಗಿಕ ಪ್ರವಾಸಿ ತಾಣಗಳ ಕುರಿತು ಮಾಹಿತಿ ನೀಡಲು ವಿವಿಧ ರೀತಯ 43 ವ್ಯವಸ್ಥಿತ ಪ್ರವಾಸಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ಮಾಹಿತಿ ಒದಗಿಸಿದೆ.

ಕರ್ನಾಟಕಕ್ಕೆ ಆಗಮಿಸುವ ಪ್ರವಾಸಿಗರಿಗೆ ಪ್ರಚಾರ ಪಡಿಸಲು ಮತ್ತು ನಿಗಮದ ಆದಾಯ ಹೆಚ್ಚಿಸುವ ಉದ್ದೇಶದಿಂದ 2025ರ ಅ.28ರಂದು ನಿಗಮದ ಸಾಮಾಜಿಕ ಜಾಲತಾಣದಲ್ಲಿ ಎರಡು ಫೇಜ್‌ನಲ್ಲಿ ಪ್ರವಾಸದ ವಿವರದ ಬಗ್ಗೆ ಪೋಸ್ಟ್ ಮಾಡಲಾಗಿದೆ ಎಂದು ಹೇಳಿದೆ.

ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ಪ್ರತಿಕ್ರಿಯಿಸಿ, ವಿವರಣೆ ನೀಡುವಂತೆ ಕೆಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದರು. ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ವಯನಾಡನ್ನು ಪ್ರಚಾರ ಮಾಡುವಲ್ಲಿ ವಿಶೇಷ ಆಸಕ್ತಿ ತೋರಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಈ ಪ್ರಶ್ನೆ ಉದ್ಭವಿಸುವುದೇ ಇಲ್ಲ. ಜಾಹೀರಾತನ್ನು ಯಾವ ಕಾರಣಕ್ಕೆ ನೀಡಲಾಗಿದೆ. ಜಾಹೀರಾತು ಸಂಸ್ಥೆ ಹೀಗೇಕೆ ಮಾಡಿತು ಎಂಬುದನ್ನು ತಿಳಿದುಕೊಳ್ಳಲು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ತಿಳಿಸಿದ್ದರು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X