Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. 2.12 ಕೋಟಿ ರೂ. ಪರಿಹಾರ ನೀಡದ ಪ್ರಕರಣ :...

2.12 ಕೋಟಿ ರೂ. ಪರಿಹಾರ ನೀಡದ ಪ್ರಕರಣ : ಯಾದಗಿರಿ ನಗರಸಭೆಯ ಕಚೇರಿ ಸಾಮಗ್ರಿ ಜಪ್ತಿ

ವಾರ್ತಾಭಾರತಿವಾರ್ತಾಭಾರತಿ28 July 2026 7:57 PM IST
share
2.12 ಕೋಟಿ ರೂ. ಪರಿಹಾರ ನೀಡದ ಪ್ರಕರಣ : ಯಾದಗಿರಿ ನಗರಸಭೆಯ ಕಚೇರಿ ಸಾಮಗ್ರಿ ಜಪ್ತಿ

ಯಾದಗಿರಿ: ನಗರದ ನಿವಾಸಿಯೊಬ್ಬರಿಗೆ ನೀಡಬೇಕಿದ್ದ 2.12 ಕೋಟಿ ರೂ. ಪರಿಹಾರ ಪಾವತಿಸದ ಹಿನ್ನೆಲೆಯಲ್ಲಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ವಾರಂಟ್ ಆಧರಿಸಿ ನ್ಯಾಯಾಲಯದ ಸಿಬ್ಬಂದಿ ಮಂಗಳವಾರ ಯಾದಗಿರಿ ನಗರಸಭೆ ಕಚೇರಿಯಲ್ಲಿನ ಕಂಪ್ಯೂಟರ್, ಸಿಸಿಟಿವಿ ಕ್ಯಾಮೆರಾ, ಟೇಬಲ್, ಕುರ್ಚಿಗಳು ಸೇರಿದಂತೆ ವಿವಿಧ ಸಾಮಗ್ರಿಗಳನ್ನು ಜಪ್ತಿ ಮಾಡಿಕೊಂಡರು.

ನಗರದ ನಿವಾಸಿ ಸರಸ್ವತಿ ನಾರಾಯಣರಾವ್ ಅವರಿಗೆ ಸೇರಿದ ಜಾಗವನ್ನು ಸುಮಾರು 40 ವರ್ಷಗಳ ಹಿಂದೆ ನಗರಸಭೆ ಸ್ವಾಧೀನಪಡಿಸಿಕೊಂಡಿತ್ತು. ಆರಂಭದಲ್ಲಿ ಭಾಗಶಃ ಪರಿಹಾರ ನೀಡಲಾಗಿದ್ದರೂ, ಬಾಕಿ ಪರಿಹಾರಕ್ಕಾಗಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ಸರಸ್ವತಿ ಅವರಿಗೆ 2.12 ಕೋಟಿ ರೂ. ಪರಿಹಾರ ನೀಡುವಂತೆ ನಗರಸಭೆಗೆ ಆದೇಶಿಸಿತ್ತು. ಆದೇಶ ಪಾಲಿಸದಿದ್ದಲ್ಲಿ ನಗರಸಭೆ ಕಚೇರಿಯಲ್ಲಿನ ಸಾಮಗ್ರಿಗಳನ್ನು ಜಪ್ತಿ ಮಾಡುವಂತೆ ವಾರಂಟ್ ಹೊರಡಿಸಿತ್ತು.

ಈ ಹಿನ್ನೆಲೆಯಲ್ಲಿ ಸೋಮವಾರವೇ ಲಾರಿಯೊಂದಿಗೆ ನಗರಸಭೆ ಕಚೇರಿಗೆ ಆಗಮಿಸಿದ್ದ ನ್ಯಾಯಾಲಯದ ಸಿಬ್ಬಂದಿಗೆ ಪೌರಾಯುಕ್ತ ಉಮೇಶ್ ಚವ್ಹಾಣ ಅವರು, ಎಸ್‌ಐಆರ್‌ಗೆ ಸಂಬಂಧಿಸಿದ ದಾಖಲೆಗಳು ಕಂಪ್ಯೂಟರ್‌ಗಳಲ್ಲಿ ಇರುವುದರಿಂದ ಸ್ವಲ್ಪ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದರು. ಮಾತುಕತೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಸಿಬ್ಬಂದಿ ಹಿಂದಿರುಗಿ, ಮಂಗಳವಾರ ಮತ್ತೆ ಬಂದು ಕಚೇರಿಯಲ್ಲಿನ ವಿವಿಧ ಸಾಮಗ್ರಿಗಳನ್ನು ಜಪ್ತಿ ಮಾಡಿಕೊಂಡು ಹೋದರು.

ಪೌರಾಯುಕ್ತ ಉಮೇಶ್ ಚವ್ಹಾಣ ಮಾತನಾಡಿ, ನ್ಯಾಯಾಲಯದ ಆದೇಶದಂತೆ ಸರಸ್ವತಿ ಅವರಿಗೆ ಪರಿಹಾರ ನೀಡಬೇಕಾಗಿದೆ. ಆದರೆ ಒಂದೇ ಬಾರಿಗೆ ಅಷ್ಟು ಮೊತ್ತ ಪಾವತಿಸಲು ನಗರಸಭೆಯ ಬಳಿ ಹಣದ ಕೊರತೆ ಇದೆ. ಈಗಾಗಲೇ 20 ಲಕ್ಷ ರೂ. ಪಾವತಿಸಲಾಗಿದ್ದು, ಮತ್ತಷ್ಟು 5 ಲಕ್ಷ ರೂ. ನೀಡುವುದಾಗಿ ಪ್ರಸ್ತಾಪಿಸಿದ್ದರೂ ಅದಕ್ಕೆ ಒಪ್ಪಿಗೆ ಸಿಗಲಿಲ್ಲ. ನ್ಯಾಯಾಲಯದ ಆದೇಶವನ್ನು ಪಾಲಿಸುವ ಅನಿವಾರ್ಯತೆಯಿಂದ ಕಚೇರಿ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

Tags

YadgirYadgir City Municipal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X