ಯಾದಗಿರಿ: ಭಗವಾನ್ ಬುದ್ಧನ ಜಯಂತಿ ಆಚರಣೆಗೆ ನಿರ್ಧಾರ

ಯಾದಗಿರಿ: ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯಲ್ಲಿ ಇದೇ ಮೇ.12ರಂದು ಭಗವಾನ್ ಬುದ್ಧ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುಶೀಲ.ಬಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಭಗವಾನ್ ಬುದ್ಧ ಅವರ ಜಯಂತಿ ಆಚರಣೆ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಇದೇ ಮೇ 12 ರ ಬೆಳಿಗ್ಗೆ 11 ಗಂಟೆಗೆ ಭಗವಾನ್ ಬುದ್ಧ ಅವರ ಜಯಂತಿಯನ್ನು ನಗರದ ಸರಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಚರಿಸಲು ನಿರ್ಧರಿಸಲಾಗಿದ್ದು, ಅವಶ್ಯಕ ಸಿದ್ಧತೆ ಮಾಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಅಂದು ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಶಿಷ್ಟಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು, ವೇದಿಕೆ, ಆಹ್ವಾನ ಪತ್ರಿಕೆ, ವೇದಿಕೆ ಸಿದ್ದತೆ ಮಾಡಿಕೊಳ್ಳುವಂತೆ ಹಾಗೂ ನುರಿತ ಉಪನ್ಯಾಸಕರನ್ನು ಆಹ್ವಾನಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಮೆರವಣಿಗೆ ಕುರಿತು ಮುಂಚಿತವಾಗಿ ತಿಳಿಸಬೇಕು.
ಜಿಲ್ಲಾ, ಗ್ರಾಮ ಪಂಚಾಯತ್, ತಾಲೂಕ ಮಟ್ಟ ಹಾಗೂ ಶಾಲಾ,ಕಾಲೇಜು, ಕಚೇರಿಯಲ್ಲಿ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಬಾರಿ ಕಾರ್ಯಕ್ರಮವು ಶಿಸ್ತುಬದ್ದವಾಗಿ ನಡೆಯಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಿರಬೇಕು. ಜಯಂತಿಯಂದು ಸೂಕ್ತ ಪೋಲಿಸ್ ಬಂದೋಬಸ್ತ್, ಮಾಡಲು ಅವರು ಸೂಚಿಸಿದರು.
ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ ರಾಹುಲ್ ಹುಲಿಮನಿ, ಮಲ್ಲಪ್ಪ ಹುಸೇನಪ್ಪ, ನೀಲಕಂಠ ಬಡಿಗೇರ್, ಬಂತೆ ಮೆತ್ತಪಾಲ್, ಶರಣು ಎಸ್ ನಾಟೇಕಾರ್, ಭೀಮರಾಯ ಶಿಂದಗೇರಿ, ಬಾಬಾರಾವ್ ಬುತ್ತಾಳೆ, ಗೋಪಾಲ ತೆಳಗೇರಿ, ಸುರೇಶ್ ಬೊಮ್ಮನ್, ಚಂದ್ರಕಾಂತ ಛಲವಾದಿ,
ನಾಗಣ್ಣ ಕಲ್ಲದೇವನಹಳ್ಳಿ, ರಾಮಲಿಂಗಪ್ಪ, ಮಹಾದೇವಪ್ಪ ಬಿಜಾಸ್ಪುರ್, ಹಾಗೂ ಸಮಾಜದ ಮುಖಂಡರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.