Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ವೈದ್ಯಕೀಯ, ರಾಜಕೀಯದಲ್ಲಿ ಡಾ. ಮುದ್ನಾಳ...

ವೈದ್ಯಕೀಯ, ರಾಜಕೀಯದಲ್ಲಿ ಡಾ. ಮುದ್ನಾಳ ಸೇವೆ ಸ್ಮರಣೀಯ: ಸಚಿವ ಎಂ.ಬಿ. ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ23 July 2026 12:05 AM IST
share
ವೈದ್ಯಕೀಯ, ರಾಜಕೀಯದಲ್ಲಿ ಡಾ. ಮುದ್ನಾಳ ಸೇವೆ ಸ್ಮರಣೀಯ: ಸಚಿವ ಎಂ.ಬಿ. ಪಾಟೀಲ್

ಯಾದಗಿರಿ: ಕಾಯಕನಿಷ್ಠೆ, ಶಿಸ್ತು ಹಾಗೂ ಜನಸೇವೆಯ ಮೂಲಕ ವೈದ್ಯಕೀಯ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಡಾ. ವೀರಬಸವಂತರೆಡ್ಡಿ ಮುದ್ನಾಳ ಅವರು ಮಾದರಿ ವ್ಯಕ್ತಿತ್ವವಾಗಿ ಗುರುತಿಸಿಕೊಂಡಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದರು.

ನಗರದಲ್ಲಿ ಸೋಮವಾರ ಆಯೋಜಿಸಿದ್ದ ಮಾಜಿ ಶಾಸಕ ದಿವಂಗತ ಡಾ. ವೀರಬಸವಂತರೆಡ್ಡಿ ಮುದ್ನಾಳ ಅವರ 2ನೇ ಪುಣ್ಯಸ್ಮರಣೆ ಹಾಗೂ ಸಾಹಿತಿ ಡಾ. ಸುಭಾಷಚಂದ್ರ ಕೌಲಗಿ ಸಂಪಾದಿತ ಗ್ರಂಥ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿಜಯಪುರದ ಬಿಎಲ್‌ಡಿ ವೈದ್ಯಕೀಯ ಕಾಲೇಜಿನಲ್ಲಿ ಸುಮಾರು ಎರಡು ದಶಕಗಳ ಕಾಲ ಸೇವೆ ಸಲ್ಲಿಸಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಬಳಿಕ ರಾಜಕೀಯ ಪ್ರವೇಶಿಸಿ ಪಕ್ಷೇತರ ಶಾಸಕರಾಗಿ ಜನಪರ ಕಾರ್ಯಗಳಿಂದ ಜನಮಾನಸದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದರು ಎಂದು ಹೇಳಿದರು.

ಸಮಾಜದ ಒಳಿತಿಗಾಗಿ ದುಡಿದವರು ದೈಹಿಕವಾಗಿ ಅಗಲಿದರೂ ಜನರ ನೆನಪಿನಲ್ಲಿ ಶಾಶ್ವತವಾಗಿ ಉಳಿಯುತ್ತಾರೆ. ನೇರ ನುಡಿ, ಸರಳ ವ್ಯಕ್ತಿತ್ವ ಹಾಗೂ ಹಾಸ್ಯಪ್ರಿಯ ಸ್ವಭಾವದಿಂದ ಡಾ. ಮುದ್ದಾಳ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ತಾವು ಇಲ್ಲಿ ಸಚಿವರಾಗಿ ಅಲ್ಲ, ಬಿಎಲ್‌ಡಿ ಸಂಸ್ಥೆಯ ಅಧ್ಯಕ್ಷರಾಗಿ ಬಂದಿರುವುದಾಗಿ ಹೇಳಿ ಅವರೊಂದಿಗಿನ ಒಡನಾಟವನ್ನು ಮೆಲುಕು ಹಾಕಿದರು.

ಶಾಸಕರಾದ ಶರಣಬಸಪ್ಪ ದರ್ಶನಾಪುರ, ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಶರಣಗೌಡ ಕಂದಕೂರ ಹಾಗೂ ಮಾಜಿ ಸಚಿವ ಅಮರೇಗೌಡ ಭಯ್ಯಾಪುರ ಮಾತನಾಡಿ, ಡಾ. ಮುದ್ನಾಳ ಅವರು ಜನಸಾಮಾನ್ಯರ ಶಾಸಕರಾಗಿದ್ದು, ಬಡ ರೋಗಿಗಳಿಗೆ ಸರಳ ಚಿಕಿತ್ಸೆಯ ಮೂಲಕ ಆಶಾಕಿರಣವಾಗಿದ್ದರು ಎಂದು ಸ್ಮರಿಸಿದರು.

ಅಬ್ಬೆತುಮಕೂರಿನ ವಿಶ್ವಾರಾಧ್ಯ ಮಠದ ಪೀಠಾಧಿಪತಿ ಡಾ. ಗಂಗಾಧರ ಸ್ವಾಮೀಜಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಮಠಗಳ ಸ್ವಾಮೀಜಿಗಳು ಸಾನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಂಥ ಸಂಪಾದಕ ಡಾ. ಸುಭಾಷಚಂದ್ರ ಕೌಲಗಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ, ಬಸವ ಸಮಿತಿ ಉಪಾಧ್ಯಕ್ಷ ಹಣಮಂತರೆಡ್ಡಿ ಮುದ್ನಾಳ, ಡಾ. ಸಂಗಮ್ಮ ಮುದ್ನಾಳ, ಡಾ. ಅಮೋಘ ಸಿದ್ದೇಶ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ಮುದ್ನಾಳ, ಭೀಮನಗೌಡ ಕ್ಯಾತನಾಳ, ಡಾ. ಬಸವರಾಜ ನರಸಣಗಿ, ಸಿದ್ದಪ್ಪ ಹೊಟ್ಟಿ, ಮಾರುತಿ ಕಲಾಲ, ಚನ್ನಪ್ಪಗೌಡ ಮೊಸಂಬಿ, ವಿಶ್ವನಾಥ ಸಿರವಾರ, ಮಹಾದೇವಪ್ಪ ಆರ್. ಅಬ್ಬೆತುಮಕೂರು, ಸುರೇಶ ರಾಠೋಡ, ಡಾ. ಕ್ಷೀತಿಜ್ ನರಸಣಗಿ, ರಮೇಶ ದೊಡ್ಡಮನಿ, ಗುಂಡಪ್ಪ ಇಟಕಲ್ ಮುದ್ನಾಳ ಕುಟುಂಬದ ಸದಸ್ಯರು, ಅಭಿಮಾನಿಗಳು ಸೇರಿದಂತೆಯೇ ಇತರರಿದ್ದರು.

ಈ ವೇಳೆ ಗ್ರಂಥ ಸಂಪಾದಕ ಡಾ. ಕೌಲಗಿ ಅವರನ್ನು ಸನ್ಮಾನಿಸಲಾಯಿತು. ಸಾಹಿತಿ ಡಾ. ಸಿದ್ದರಾಜರೆಡ್ಡಿ ನಿರೂಪಿಸಿದರು. ಸ್ವಾಗತ ವೀರಾರಡ್ಡಿ ಮುದ್ನಾಳ ಸ್ವಾಗತಿಸಿದರು. ಡಾ. ಶರಣಮ್ಮ ನರಸಣಗಿ ವಂದಿಸಿದರು.

Tags

Dr. MudnalM.B. Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X