Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಗುರುಮಠಕಲ್‌ನಲ್ಲಿ ಕುಡಿಯುವ ನೀರಿನ...

ಗುರುಮಠಕಲ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ; ಸಚಿವ ಪ್ರಿಯಾಂಕ್ ಖರ್ಗೆ ಯಾದಗಿರಿಗೆ ಭೇಟಿ ನೀಡಬೇಕು : ಶಾಸಕ ಶರಣಗೌಡ ಕಂದಕೂರ

ವಾರ್ತಾಭಾರತಿವಾರ್ತಾಭಾರತಿ2 Feb 2026 11:45 PM IST
share
ಗುರುಮಠಕಲ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ; ಸಚಿವ ಪ್ರಿಯಾಂಕ್ ಖರ್ಗೆ ಯಾದಗಿರಿಗೆ ಭೇಟಿ ನೀಡಬೇಕು : ಶಾಸಕ ಶರಣಗೌಡ ಕಂದಕೂರ

ಯಾದಗಿರಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತುರ್ತಾಗಿ ಯಾದಗಿರಿ ಜಿಲ್ಲೆಗೆ ಭೇಟಿ ನೀಡಿ ಇಲಾಖೆ ಮಟ್ಟದ ಸಭೆ ನಡೆಸಬೇಕು. ಜಿಲ್ಲೆ ಮತ್ತು ವಿಶೇಷವಾಗಿ ಗುರುಮಠಕಲ್ ಮತಕ್ಷೇತ್ರದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಹಾಗೂ ಆರ್‌ಒ ಪ್ಲಾಂಟ್ ಸಮಸ್ಯೆಗಳ ಗಂಭೀರತೆ ತಿಳಿದರೆ ಮಾತ್ರ ಶಾಶ್ವತ ಪರಿಹಾರ ಸಾಧ್ಯವಾಗಲಿದೆ ಎಂದು ಶಾಸಕ ಶರಣಗೌಡ ಕಂದಕೂರ ಒತ್ತಾಯಿಸಿದರು.

ಸೋಮವಾರ ನಡೆದ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, ತಮ್ಮ ಮತಕ್ಷೇತ್ರದಲ್ಲಿ ದುರಸ್ತಿ ಆಗದೇ, ನಿರ್ವಹಣೆಗೆ ಹಣವಿಲ್ಲದೆ ಅನೇಕ ಆರ್‌ಒ ಪ್ಲಾಂಟ್‌ಗಳು ಬಂದ್ ಆಗಿವೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಆತಂಕವಿದೆ ಎಂದು ಹೇಳಿದರು.

ಆರ್‌ಒ ಪ್ಲಾಂಟ್‌ಗಳ ದುರಸ್ತಿಗಾಗಿ ಈ ಹಿಂದೆ ಕೊರೆಸಿದ್ದ ಬೋರ್‌ವೆಲ್‌ಗಳಿಗೆ ಸಂಬಂಧಿಸಿದಂತೆ 1.13 ಕೋಟಿ ರೂ. ಬಿಲ್ ಇನ್ನೂ ಬಾಕಿಯಿದೆ. ಈ ಕಾರಣದಿಂದ ಕೆಲಸ ಮಾಡಿದ ಗುತ್ತಿಗೆದಾರರು ತೀವ್ರ ಸಂಕಷ್ಟದಲ್ಲಿದ್ದು, “ಬಿಲ್ ಮಾಡಿಸದಿದ್ದರೆ ವಿಷ ಕುಡಿಯುತ್ತೇವೆ” ಎಂದು ನನ್ನ ಬಳಿ ಅಳಲು ತೋಡಿಕೊಂಡಿದ್ದಾರೆ ಎಂಬ ವಿಷಯವನ್ನು ಶಾಸಕರು ಸಚಿವರ ಗಮನಕ್ಕೆ ತಂದರು.

ಇಡಿ ಜಿಲ್ಲೆಯಲ್ಲಿ ಆರ್‌ಒ ಪ್ಲಾಂಟ್‌ಗಳ ದುರಸ್ತಿಗೆ ಸುಮಾರು 9 ಕೋಟಿ ರೂ. ಅನುದಾನ ಅಗತ್ಯವಿದೆ. ಈ ಕುರಿತು ಇದುವರೆಗೂ 20 ರಿಂದ 25 ಬಾರಿ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಗುರುಮಠಕಲ್ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಅತ್ಯಂತ ತೀವ್ರವಾಗಿದ್ದು, ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಆರ್‌ಒ ಪ್ಲಾಂಟ್‌ಗಳ ದುರಸ್ತಿ ಮತ್ತು ನಿರ್ವಹಣೆಯನ್ನು ಹೇಗೆ ಸಮರ್ಪಕವಾಗಿ ನಡೆಸಬೇಕು ಎಂಬುದಕ್ಕೆ ನನಗೂ ಸ್ಪಷ್ಟ ಉತ್ತರ ಸಿಗುತ್ತಿಲ್ಲ ಎಂಬುವುದನ್ನು ಪ್ರಮಾಣಿಕವಾಗಿ ಒಪ್ಪಿಕೊಳ್ಳುತ್ತೆನೆ ಎಂದರು.

ಮುಂದುವರೆದು ಮಾತನಾಡಿದ ಅವರು, ಇಡೀ ರಾಜ್ಯದಲ್ಲೇ ಈ ಸಮಸ್ಯೆ ಇದೆ. ಆದ್ದರಿಂದ ಆರ್‌ಒ ಪ್ಲಾಂಟ್‌ಗಳ ನಿರ್ವಹಣೆಗೆ ಸಂಬಂಧಿಸಿದಂತೆ ಸ್ಪಷ್ಟ ನೀಲನಕ್ಷೆ ಹಾಗೂ ರೂಪರೇಷೆಗಳನ್ನು ಸಿದ್ಧಪಡಿಸಲಾಗುವುದು. ಅದಕ್ಕೆ ಅಗತ್ಯವಿರುವ ಅನುದಾನವನ್ನು ಒದಗಿಸಲಾಗುವುದು ಎಂದರು.

ಈಗಾಗಲೇ ಗುರುಮಠಕಲ್ ಕ್ಷೇತ್ರಕ್ಕೆ ಆರ್‌ಒ ಪ್ಲಾಂಟ್ ದುರಸ್ತಿಗಾಗಿ 56.54 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಶಾಸಕರ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬಾಕಿ ಇರುವ ಬಿಲ್‌ಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ಸದನದಲ್ಲಿ ಭರವಸೆ ನೀಡಿದರು.

ಜಲಧಾರೆ ಯೋಜನೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಯೋಜನೆಯಲ್ಲಿರುವ ಸಮಸ್ಯೆಗಳನ್ನೂ ಸರಿಪಡಿಸಲಾಗುವುದು ಎಂದು ತಿಳಿಸಿದರು.

Tags

yadagirPriyank KhargeSharanagouda KandakurGurmitkal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X