Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಹುಣಸಗಿ | ಒಗ್ಗಟ್ಟಿನಿಂದಲೇ ಗಾಣಿಗ ಸಮಾಜದ...

ಹುಣಸಗಿ | ಒಗ್ಗಟ್ಟಿನಿಂದಲೇ ಗಾಣಿಗ ಸಮಾಜದ ಅಭಿವೃದ್ಧಿ ಸಾಧ್ಯ: ಡಾ. ಸುರೇಶ ಸಜ್ಜನ್

ವಾರ್ತಾಭಾರತಿವಾರ್ತಾಭಾರತಿ2 July 2026 7:41 PM IST
share
ಹುಣಸಗಿ | ಒಗ್ಗಟ್ಟಿನಿಂದಲೇ ಗಾಣಿಗ ಸಮಾಜದ ಅಭಿವೃದ್ಧಿ ಸಾಧ್ಯ: ಡಾ. ಸುರೇಶ ಸಜ್ಜನ್
ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಹುಣಸಗಿ: ಗಾಣಿಗ ಸಮಾಜವು ಸಂಘಟಿತವಾಗಿ ಒಗ್ಗಟ್ಟಿನಿಂದ ಮುನ್ನಡೆದಾಗ ಮಾತ್ರ ರಾಜಕೀಯ ಸ್ಥಾನಮಾನ, ಶೈಕ್ಷಣಿಕ ಪ್ರಗತಿ ಹಾಗೂ ಆರ್ಥಿಕ ಸಬಲೀಕರಣ ಸಾಧ್ಯವಾಗಲಿದೆ ಎಂದು ಗಾಣಿಗ ಸಮಾಜದ ರಾಜ್ಯಾಧ್ಯಕ್ಷ ಡಾ. ಸುರೇಶ ಆರ್. ಸಜ್ಜನ್ ಹೇಳಿದರು.

ಪಟ್ಟಣದಲ್ಲಿ ಗಾಣಿಗ ಸಮಾಜದ ವತಿಯಿಂದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಡಾ. ಸುರೇಶ ಆರ್. ಸಜ್ಜನ್ ಅವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವೀರಶೈವ–ಲಿಂಗಾಯತ ಸಮುದಾಯದ ವಿವಿಧ ಒಳಪಂಗಡಗಳು ತಮ್ಮದೇ ಸಂಘಟನೆಗಳನ್ನು ಕಟ್ಟಿಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿವೆ. ಅದೇ ಮಾದರಿಯಲ್ಲಿ ಗಾಣಿಗ ಸಮಾಜವನ್ನು ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಬಲಿಷ್ಠಗೊಳಿಸುವ ಉದ್ದೇಶದಿಂದ ರಾಜ್ಯಾಧ್ಯಕ್ಷರ ಜವಾಬ್ದಾರಿ ವಹಿಸಿಕೊಂಡಿದ್ದೇನೆ ಎಂದು ಹೇಳಿದರು.

ಈ ಹಿಂದೆ ವೀರಶೈವ ಸಮಾಜದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅನುಭವವನ್ನು ಗಾಣಿಗ ಸಮಾಜದ ಅಭಿವೃದ್ಧಿಗೂ ಬಳಸಿಕೊಳ್ಳುವ ಸಂಕಲ್ಪ ಹೊಂದಿದ್ದೇನೆ. ಸಮಾಜದ ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ, ಶಿಸ್ತು ಹಾಗೂ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಯುವಕರು ರಾಜಕೀಯ, ಶಿಕ್ಷಣ, ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಅವಕಾಶಗಳನ್ನು ಪಡೆದುಕೊಳ್ಳಬೇಕು. ಜೊತೆಗೆ ಇತರೆ ಸಮಾಜಗಳೊಂದಿಗೆ ಸೌಹಾರ್ದತೆ, ಪ್ರೀತಿ ಹಾಗೂ ಸಹಬಾಳ್ವೆಯ ಮನೋಭಾವದಿಂದ ಸಮಾಜ ಮುನ್ನಡೆಯಬೇಕು ಎಂದು ಕರೆ ನೀಡಿದರು.

ಮುಖಂಡ ಗುರುಲಿಂಗಪ್ಪ ಸಜ್ಜನ್ ಮಾತನಾಡಿ, ಡಾ. ಸುರೇಶ ಸಜ್ಜನ್ ಅವರು ಸಹಕಾರ ಕ್ಷೇತ್ರ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ವೀರಶೈವ ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸಿದರು. ಸಮಾಜದ ಮುಖಂಡರಾದ ಬಸವರಾಜ್ ಸಜ್ಜನ್ ಹಾಗೂ ರಾಜು ಸಾಲವಾಡಗಿ ಸಹ ಮಾತನಾಡಿದರು.

ಈ ಸಂದರ್ಭದಲ್ಲಿ ಎಸೆಸೆಲ್ಸಿ, ಪಿಯುಸಿ, ಸೈನಿಕ ಹಾಗೂ ವೈದ್ಯಕೀಯ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ನಂತರ ಗಾಣಿಗ ಸಮಾಜದ ನೂತನ ಅಧ್ಯಕ್ಷ ಡಾ.ಸುರೇಶ ಸಜ್ಜನ್ ಅವರನ್ನು ಸಮಾಜದ ವತಿಯಿಂದ ಅದ್ಧೂರಿಯಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಸಮಾಜದ ಮುಖಂಡರಾದ ಚಂದ್ರಶೇಖರ ಬೋರಮಗುಂಡ್, ನಿಂಗನಗೌಡ ಕಲ್ಲದೇವನಹಳ್ಳಿ, ಚಂದ್ರಶೇಖರ ಸಜ್ಜನ್, ಪ್ರಕಾಶ ಸಜ್ಜನ್, ಪರಮಣ್ಣ ಕಮತಗಿ ಕಕ್ಕೇರಾ, ವಿಜಯಕುಮಾರ ಗುಡಗುಂಟಿ, ಬಸವರಾಜ್ ಸಜ್ಜನ್, ಪ್ರಕಾಶ್ ಸಜ್ಜನ್, ಪರಮಾನಂದ ಚಟ್ಟಿ, ನಾಗಪ್ಪ ಸಜ್ಜನ್, ಬಸವರಾಜ್ ಕಮತಗಿ ಕಕ್ಕೇರಾ ಸೇರಿದಂತೆ ಸಮಾಜದ ಇತರರಿದ್ದರು. ಸಂಗಮ್ಮ ಸಜ್ಜನ್ ಸ್ವಾಗತಿಸಿ ನಿರೂಪಿಸಿದರು. ಶ್ರೀಶೈಲ್ ಸಜ್ಜನ್ ವಂದಿಸಿದರು.

Tags

Hunasagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X