Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸತೀಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ...

ಸತೀಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡುವಂತೆ ವಾಲ್ಮೀಕಿ ನಾಯಕ ಸಮಾಜದ ಮುಖಂಡರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ13 Aug 2026 11:07 PM IST
share
ಸತೀಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡುವಂತೆ ವಾಲ್ಮೀಕಿ ನಾಯಕ ಸಮಾಜದ ಮುಖಂಡರ ಆಗ್ರಹ

ಸುರಪುರ: ವಾಲ್ಮೀಕಿ ಸಮುದಾಯದ ಹಿರಿಯ ರಾಜಕೀಯ ಮುಖಂಡ ಹಾಗೂ ಕರ್ನಾಟಕ ಜನತೆಯ ಅಹಿಂದ ನಾಯಕ ಎಂದು ಚಿರಪರಿಚಿತರಾಗಿರುವ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಒತ್ತಾಯಿಸಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘಟನೆಯ ನೇತೃತ್ವದಲ್ಲಿ ಅನೇಕ ಮುಖಂಡರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಆಗಬೇಕಾದವರು. ಈ ರಾಜ್ಯದಲ್ಲಿ ಸುಮಾರು 40 ರಿಂದ 50 ಜನ ಶಾಸಕರನ್ನು ಗೆಲ್ಲಿಸಿಕೊಂಡು ಬರುವ ಸಾಮರ್ಥ್ಯ ಇರುವ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದಲ್ಲಿ ರಾಜ್ಯದಲ್ಲಿರುವ ವಾಲ್ಮೀಕಿ ನಾಯಕ ಸಮಾಜಕ್ಕೆ ಒಂದು ಮಟ್ಟಿಗಿನ ಸ್ಥಾನಮಾನ ದೊರೆತಂತಾಗಲಿದೆ. ವಾಲ್ಮೀಕಿ ನಾಯಕ ಸಮಾಜದ 15 ಜನ ಶಾಸಕರಿದ್ದು ಕೇವಲ ಇಬ್ಬರಿಗೆ ಸಚಿವ ಸ್ಥಾನ ಮಾತ್ರ ನೀಡಲಾಗಿದೆ. ಸಚಿವ ಸತೀಶ ಜಾರಕಿಹೊಳಿ ಅವರು ಹಿರಿಯ ರಾಜಕೀಯ ಮುಖಂಡರು, ಬುದ್ಧ ಬಸವ ಅಂಬೇಡ್ಕರ್ ಅವರ ತತ್ವದಲ್ಲಿ ನಂಬಿಕೆಯನ್ನು ಇಟ್ಟವರು. ಮಾನವೀಯತೆಯ ಸಾಹುಕಾರ ಎಂದೇ ಖ್ಯಾತರಾಗಿರುವ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮುಖಂಡರು ಹೇಳಿದರು.

ಅದೇ ರೀತಿ ಕಾಂಗ್ರೆಸ್ ಪಕ್ಷದ ಯುವ ಶಾಸಕರಾಗಿರುವ ರಾಜಾ ವೇಣುಗೋಪಾಲ ನಾಯಕ ಅವರಿಗೆ ಕ್ಯಾಬಿನೆಟ್ ದರ್ಜೆಯ ನಿಗಮ ಮಂಡಳಿಗೆ ಅಧ್ಯಕ್ಷರನ್ನು ಮಾಡಬೇಕು. ಹಿಂದೆ ಅವರ ತಂದೆ ರಾಜಾ ವೆಂಕಟಪ್ಪ ನಾಯಕ ಅವರು ನಾಲ್ಕು ಬಾರಿ ಶಾಸಕರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ.ಅವರು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ಸಂದರ್ಭದಲ್ಲಿಯೇ ಅಕಾಲಿಕವಾಗಿ ನಿಧನರಾಗಿದ್ದು, ಈಗ ಅವರ ಸುಪುತ್ರರಾದ ರಾಜಾ ವೇಣುಗೋಪಾಲ ನಾಯಕರು ಶಾಸಕರಾಗಿರುವುದರಿಂದ ಅವರ ತಂದೆಯವರಂತೆ ಇವರಿಗೂ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಅಯ್ಯಣ್ಣ ಹಾಲಬಾವಿ, ದೇವಿಂದ್ರಪ್ಪ ಬಳಿಚಕ್ರ, ನಗರಸಭೆಯ ಮಾಜಿ ಉಪಾಧ್ಯಕ್ಷ ರಾಜಾ ಪಿಡ್ಡ ನಾಯಕ (ತಾತಾ), ಕಾಂಗ್ರೆಸ್ ಎಸ್ ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ ದೊರೆ ಆಲ್ದಾಳ,ರಾಜಾ ರಾಮಪ್ಪ ನಾಯಕ (ಜೇಜಿ) ಹಾಗೂ ಜಿಲ್ಲಾ ಎಸ್ ಟಿ ಘಟಕದ ಅಧ್ಯಕ್ಷ ವೆಂಕಟೇಶ ಬೇಟೆಗಾರ ಮತ್ತು ಸಂಜೀವ ನಾಯಕ ತಿಂಥಣಿ ಮಾತನಾಡಿದರು.

ಸುದ್ದಿಗೋಷ್ಠಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ತಾಲೂಕ ಅಧ್ಯಕ್ಷ ಭೀಮನಗೌಡ ಲಕ್ಷ್ಮೀ ಹೇಮನೂರ, ಭೀಮು ನಾಯಕ ಮಲ್ಲಿಬಾವಿ,ನಾಗರಾಜ ಪ್ಯಾಪ್ಲಿ,ಪರಮಣ್ಣ ವಡಕೇರಿ, ದೇವಿಂದ್ರಪ್ಪ ಚಿಕ್ಕನಹಳ್ಳಿ, ಕನಕಾಚಲ ಜಾಗಿರದಾರ ಯಡಿಯಾಪುರ,ಶಿವಮೋನಯ್ಯ ನಾಯಕ ದೇವರಗೋನಾಲ,ಬಸನಗೌಡ ಹಾಲಗೇರಾ, ಸಾಹೇಬಗೌಡ ಶಖಾಪುರ, ದೇವರಾಜ ಗಿರಣಿ,ಶರಣಪ್ಪ ಮಕಾಶಿ ಇದ್ದರು.

Tags

Satish JarkiholiValmiki Nayaka Community
share
ವಾರ್ತಾಭಾರತಿ
ವಾರ್ತಾಭಾರತಿ
Next Story
X