Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸೇಡಂ-ಯಾದಗಿರಿ ಬಸ್ ಅವ್ಯವಸ್ಥೆ ಖಂಡಿಸಿ...

ಸೇಡಂ-ಯಾದಗಿರಿ ಬಸ್ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳ ರಸ್ತೆ ತಡೆ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 July 2026 12:07 PM IST
share
ಸೇಡಂ-ಯಾದಗಿರಿ ಬಸ್ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳ ರಸ್ತೆ ತಡೆ ಪ್ರತಿಭಟನೆ
ಹೆಚ್ಚುವರಿ ಬಸ್‌ಗಳ ವ್ಯವಸ್ಥೆಗೆ ಆಗ್ರಹ

ಯಾದಗಿರಿ: ಸೇಡಂ-ಯಾದಗಿರಿ ಮಾರ್ಗದಲ್ಲಿ ಸಂಚರಿಸುವ ಸರ್ಕಾರಿ ಬಸ್‌ಗಳು ಸಮಯಕ್ಕೆ ಸರಿಯಾಗಿ ಬಾರದಿರುವುದು, ವಿದ್ಯಾರ್ಥಿಗಳಿಗೆ ಸಮರ್ಪಕ ಆಸನ ವ್ಯವಸ್ಥೆ ಇಲ್ಲದಿರುವುದು ಹಾಗೂ ಸಾರಿಗೆ ಇಲಾಖೆಯ ನಿರ್ಲಕ್ಷ್ಯವನ್ನು ಖಂಡಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯಡಹಳ್ಳಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ರಸ್ತೆ ತಡೆದು ತೀವ್ರ ಪ್ರತಿಭಟನೆ ನಡೆಸಿದರು.

ಹತ್ತುಕುಣಿ, ಯಡಹಳ್ಳಿ, ಹೊರುಂಚ-ಹೊರುಂಚ ತಾಂಡಾ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು ಪ್ರತಿದಿನ ಇದೇ ಮಾರ್ಗದ ಬಸ್‌ಗಳನ್ನು ಅವಲಂಬಿಸಿ ಶಾಲೆ ಹಾಗೂ ಕಾಲೇಜುಗಳಿಗೆ ತೆರಳುತ್ತಿದ್ದಾರೆ. ಆದರೆ ಬಸ್‌ಗಳು ನಿಗದಿತ ವೇಳೆಗೆ ಬಾರದಿರುವುದು, ಬಂದ ಬಸ್‌ಗಳಲ್ಲಿ ಅತಿಯಾದ ಜನಸಂದಣಿಯಿಂದ ವಿದ್ಯಾರ್ಥಿಗಳಿಗೆ ಕೂರಲು ಆಸನ ಸಿಗದಿರುವುದು ಸಾಮಾನ್ಯವಾಗಿದ್ದು, ಅನೇಕ ವಿದ್ಯಾರ್ಥಿಗಳು ಜೀವದ ಹಂಗು ತೊರೆದು ನಿಂತುಕೊಂಡೇ ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಬೆಳಿಗ್ಗೆ 8.00 ಗಂಟೆಯಿಂದ 10.30 ಗಂಟೆಯವರೆಗೆ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ಸೇಡಂ ಕಡೆಗೆ ತೆರಳುತ್ತಿದ್ದ ಐದು ಬಸ್‌ಗಳು ಹಾಗೂ ಯಾದಗಿರಿ ಕಡೆಗೆ ಸಂಚರಿಸುತ್ತಿದ್ದ ಮೂರು ಬಸ್‌ಗಳನ್ನು ಸಂಪೂರ್ಣವಾಗಿ ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಎರಡೂ ದಿಕ್ಕಿನ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.

ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳಾದ ಯೋಹಾನ, ಆಕಾಶ್, ಜಾಕ್ಸನ್, ಮುರಳಿ ಹಾಗೂ ಬಾಬು ಮಾತನಾಡಿ, ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳನ್ನು ಒದಗಿಸಿ, ನಿಗದಿತ ವೇಳೆಗೆ ಬಸ್‌ಗಳನ್ನು ಸಂಚರಿಸುವಂತೆ ಮಾಡಬೇಕು ಎಂದು ಆಗ್ರಹಿಸಿದರು.

ಸುಮಾರು ಎರಡೂವರೆ ಗಂಟೆಗಳ ಕಾಲ ಪ್ರತಿಭಟನೆ ನಡೆದರೂ ಸ್ಥಳಕ್ಕೆ ಯಾವುದೇ ಸಂಬಂಧಪಟ್ಟ ಸಾರಿಗೆ ಇಲಾಖೆ ಅಥವಾ ಆಡಳಿತದ ಅಧಿಕಾರಿಗಳು ಆಗಮಿಸದಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಮತ್ತಷ್ಟು ಕಾರಣವಾಯಿತು ಎನ್ನಲಾಗಿದೆ. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದರು ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X