Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಸತೀಶ್ ಜಾರಕಿಹೊಳಿ ನಿವಾಸದ...

ಸುರಪುರ | ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ಈಡಿ ದಾಳಿ ಖಂಡಿಸಿ ರಸ್ತೆ ತಡೆ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 Sept 2026 5:01 PM IST
share
ಸುರಪುರ | ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ಈಡಿ ದಾಳಿ ಖಂಡಿಸಿ ರಸ್ತೆ ತಡೆ ಪ್ರತಿಭಟನೆ

ಸುರಪುರ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಈಡಿ) ದಾಳಿ ನಡೆಸಿರುವುದನ್ನು ಖಂಡಿಸಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಮುಖಂಡರು ಪಟ್ಟಣದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.

ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಮುಖಂಡರು, ಸಿಬಿಐ ಮತ್ತು ಇ.ಡಿ. ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು.

ಸತೀಶ್ ಜಾರಕಿಹೊಳಿ ಅವರು ಪ್ರಗತಿಪರ ಚಿಂತನೆ ಹೊಂದಿರುವ ಹಿಂದುಳಿದ ವರ್ಗಗಳ ನಾಯಕರು. ಸರಳ ಜೀವನದ ಮೂಲಕ ಸಮಾಜದ ಅನೇಕ ಜನರಿಗೆ ನೆರವಾಗಿರುವ ಅವರ ಏಳಿಗೆಯನ್ನು ಸಹಿಸದೆ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಇ.ಡಿ. ದಾಳಿಗಳನ್ನು ನಡೆಸಿ ಅವರನ್ನು ಕುಗ್ಗಿಸಲು ಪ್ರಯತ್ನಿಸುತ್ತಿದೆ ಎಂದು ದೂರಿದರು.

ಸತೀಶ್ ಜಾರಕಿಹೊಳಿ ಯಾವುದೇ ಬೆದರಿಕೆಗೆ ಮಣಿಯುವ ವ್ಯಕ್ತಿಯಲ್ಲ. ದಲಿತ ಮತ್ತು ಹಿಂದುಳಿದ ಸಮುದಾಯದ ನಾಯಕರನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ಇಂತಹ ಕ್ರಮಗಳನ್ನು ಅನುಸರಿಸುತ್ತಿದ್ದು, ಇದನ್ನು ವಾಲ್ಮೀಕಿ ನಾಯಕ ಸಮುದಾಯ ಸಹಿಸುವುದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದರು.

ಇಂತಹ ಉದ್ದೇಶಪೂರ್ವಕ ದಾಳಿಗಳಿಗೆ ಕಡಿವಾಣ ಹಾಕುವಂತೆ ರಾಷ್ಟ್ರಪತಿಗಳು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ಬಳಿಕ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಉದ್ದೇಶಿಸಿ ಬರೆದ ಮನವಿ ಪತ್ರವನ್ನು ಗ್ರೇಡ್-2 ತಹಶೀಲ್ದಾರ್ ಮಲ್ಲಯ್ಯ ದಂಡು ಅವರ ಮೂಲಕ ಸಲ್ಲಿಸಲಾಯಿತು.

ಸುಮಾರು ಅರ್ಧ ಗಂಟೆ ರಸ್ತೆ ತಡೆ ನಡೆದ ಪರಿಣಾಮ ಪ್ರಮುಖ ರಸ್ತೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಂಡು ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು.

ಪ್ರತಿಭಟನೆಯಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಭೀಮನಗೌಡ ಹೇಮನೂರ, ರಮೇಶ ದೊರೆ ಆಲ್ದಾಳ, ವೆಂಕಟೇಶ ಬೇಟೆಗಾರ,ಕನಕಾಚಲ ಜಾಗಿರದಾರ, ನಾಗರಾಜ ಪ್ಯಾಪ್ಲಿ,ಭೀಮು ನಾಯಕ ಮಲ್ಲಿಬಾವಿ, ಬಸವರಾಜ ಪಾಟೀಲ,ರಂಗಣ್ಣ ದೊರೆ, ವೆಂಕಟಪ್ಪ ನಾಯಕ ದೇಸಾಯಿ, ನಿಂಗನಗೌಡ ಗುಳಬಾಳ, ಹಣಮಂತ ಕಟ್ಟಿಮನಿ ಬೊಮ್ಮನಹಳ್ಳಿ, ಹುಲಗಪ್ಪ ಗೌಡ ಶಖಾಪುರ, ನಾರಾಯಣಗೌಡ ಶಖಾಪುರ, ಮರೆಪ್ಪ ಗೌಡ ಶಖಾಪುರ, ಭೀಮಣ್ಣ ಶಖಾಪುರ, ರಾಜಶೇಖರ ನಾಯಕ, ಕೃಷ್ಣ ಪೂಜಾರಿ, ಯಲ್ಲಪ್ಪ, ಮಾನಪ್ಪ ಬಾದ್ಯಾಪುರ, ಮೌನೇಶ ಬೇಟೆಗಾರ, ಬಸವರಾಜ ದೊರೆ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags

Satish JarkiholiprotestRoadblockSurapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X