Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಕೂಲಿ ಕಾರ್ಮಿಕರು ಕಡ್ಡಾಯವಾಗಿ...

ಸುರಪುರ | ಕೂಲಿ ಕಾರ್ಮಿಕರು ಕಡ್ಡಾಯವಾಗಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು : ಬಸವರಾಜ ಸಜ್ಜನ್

ವಾರ್ತಾಭಾರತಿವಾರ್ತಾಭಾರತಿ4 Oct 2025 7:52 PM IST
share
ಸುರಪುರ | ಕೂಲಿ ಕಾರ್ಮಿಕರು ಕಡ್ಡಾಯವಾಗಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು : ಬಸವರಾಜ ಸಜ್ಜನ್

ಸುರಪುರ: ಗ್ರಾಮೀಣ ಉದ್ಯೋಗ ಖಾತರೀಕರಣ ಕಾಯ್ದೆ (ನರೇಗಾ) ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರು ತಮ್ಮ ವೈಯಕ್ತಿಕ ಮಾಹಿತಿ ಹಾಗೂ ಹಾಜರಾತಿ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ದಾಖಲಿಸಲು NMMS (National Mobile Monitoring System) – e-KYC ಅಪ್ಲಿಕೇಶನ್ ನಲ್ಲಿ ಮಾಹಿತಿಯನ್ನು ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ ಎಂದು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಸಜ್ಜನ್ ರವರು ತಿಳಿಸಿದ್ದಾರೆ.

ನರೇಗಾ ಯೋಜನೆಯ ಉದ್ದೇಶ ಗ್ರಾಮೀಣ ಪ್ರದೇಶದ ಬಡ ಕುಟುಂಬಗಳಿಗೆ ಕನಿಷ್ಠ 100 ದಿನಗಳ ವೇತನಾಧಾರಿತ ಉದ್ಯೋಗ ಒದಗಿಸುವುದಾಗಿದೆ. ಈ ಯೋಜನೆಯಡಿ ಪ್ರತಿ ಕಾರ್ಮಿಕರ ಕೆಲಸದ ವಿವರ, ಹಾಜರಾತಿ ಹಾಗೂ ಪಾವತಿ ಪ್ರಕ್ರಿಯೆ ಈಗ ಸಂಪೂರ್ಣ ಡಿಜಿಟಲ್ ಆಗಿ ನಡೆಯುತ್ತಿದ್ದು, ಇದರ ಅಸಲೀಯತೆಯನ್ನು ಖಚಿತಪಡಿಸಲು ಸರ್ಕಾರವು NMMS ಅಪ್ಲಿಕೇಶನ್ ಮೂಲಕ e-KYC (Electronic Know Your Customer) ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಿದೆ.

ನರೇಗಾ ಯೋಜನೆಯಡಿ ಕೆಲಸ ಮಾಡುವ ಪ್ರತಿಯೊಬ್ಬ ಕಾರ್ಮಿಕನಿಗೂ ಆಧಾರ್ ನಂಬರಿನ ಆಧಾರದ ಮೇಲೆ NMMS ಅಪ್ಲಿಕೇಶನ್‌ನಲ್ಲಿ e-KYC ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇದು ಕೆಲಸದ ನಿಖರ ದಾಖಲೆ, ವೇತನ ಪಾವತಿ ಪಾರದರ್ಶಕತೆ ಹಾಗೂ ನಕಲಿ ಹಾಜರಾತಿ ತಡೆಗೆ ಸಹಾಯಕವಾಗುತ್ತದೆ.ಯಾವ ಕಾರ್ಮಿಕರು NMMS – e-KYC ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ, ಅವರ ಕೆಲಸದ ಹಾಜರಾತಿ ದಾಖಲಾಗುವುದಿಲ್ಲ ಹಾಗೂ ವೇತನ ಪಾವತಿ ವಿಳಂಬವಾಗುವ ಸಾಧ್ಯತೆ ಇದೆ. ಆದ್ದರಿಂದ ಎಲ್ಲಾ ಕಾರ್ಮಿಕರು ತಕ್ಷಣ ತಮ್ಮ ಗ್ರಾಮ ಪಂಚಾಯಿತ್‌ ಕಚೇರಿಯಲ್ಲಿ e-KYC ಪ್ರಕ್ರಿಯೆ ಪೂರ್ಣಗೊಳಿಸಬೇಕು.

ಪ್ರತಿ ಕಾರ್ಮಿಕರು ತಮ್ಮ ಆಧಾರ್ ಕಾರ್ಡ್, ಜಾಬ್ ಕಾರ್ಡ್, ಬ್ಯಾಂಕ್ ಖಾತೆ ವಿವರಗಳನ್ನು ಕಡ್ಡಾಯವಾಗಿ ತಮ್ಮೊಂದಿಗೆ ತರಬೇಕೆಂದು ಅವರು ವಿನಂತಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾಂತ್ರಿಕ ಸಹಾಯಕರು,‌ ಬಿ ಎಪ್ ಟಿ, ಗ್ರಾಮ ಕಾಯಕ ಮಿತ್ರರರು ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸ್ಥಳಮಟ್ಟದಲ್ಲಿ ಸಹಕಾರ ನೀಡಬೇಕೆಂದು ಸೂಚಿಸಲಾಯಿತು.

ನರೇಗಾ ಯೋಜನೆಯು ಗ್ರಾಮೀಣ ಪ್ರದೇಶದ ಜನರ ಜೀವನಮಟ್ಟವನ್ನು ಸುಧಾರಿಸಲು ಮಹತ್ವದ ಪಾತ್ರವಹಿಸುತ್ತಿದ್ದು, ಡಿಜಿಟಲ್ ಪಾರದರ್ಶಕತೆ ಮತ್ತು ತಂತ್ರಜ್ಞಾನ ಬಳಕೆಯಿಂದ ಯೋಜನೆಯ ವಿಶ್ವಾಸಾರ್ಹತೆ ಮತ್ತಷ್ಟು ಹೆಚ್ಚುತ್ತಿದೆ. e-KYC ಪ್ರಕ್ರಿಯೆ ಪೂರ್ಣಗೊಂಡ ನಂತರ ಕಾರ್ಮಿಕರಿಗೆ ತಕ್ಷಣವೇ ಅವರ ಕೆಲಸದ ದಾಖಲೆ ಮತ್ತು ಪಾವತಿ ವಿವರಗಳನ್ನು NMMS ಯ್ಯಾಪ್ ಮೂಲಕ ವೀಕ್ಷಿಸಲು ಅವಕಾಶವಿರುತ್ತದೆ.

ನರೇಗಾ ಯೋಜನೆಯ ಯಶಸ್ಸು ಕಾರ್ಮಿಕರ ಭಾಗವಹಿಸುವಿಕೆ ಮತ್ತು ಪಾರದರ್ಶಕ ಆಡಳಿತದ ಮೇಲೆ ಅವಲಂಬಿತವಾಗಿದೆ. ಎಲ್ಲಾ ಕಾರ್ಮಿಕರು ಸಮಯದಲ್ಲಿ NMMS – e-KYC ಪ್ರಕ್ರಿಯೆ ಪೂರ್ಣಗೊಳಿಸಿ ಸರ್ಕಾರದ ಈ ಉಪಕ್ರಮಕ್ಕೆ ಸಹಕರಿಸಬೇಕು ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X