ಸುರಪುರ | ವಿದ್ಯಾರ್ಥಿ ವಸತಿ ನಿಲಯದಲ್ಲಿ ಸೌಲಭ್ಯ ಕಲ್ಪಿಸಲು ಮನವಿ

ಸುರಪುರ : ತಾಲೂಕಿನ ವಿದ್ಯಾರ್ಥಿಗಳ ವಸತಿ ನಿಲಯಗಳಲ್ಲಿ ಎಲ್ಲಾ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ವೇಣುಗೋಪಾಲ ನಾಯಕ ಸುರಪುರ ಅಭಿಮಾನಿಗಳ ವೇದಿಕೆ ಉತ್ತರ ಕರ್ನಾಟಕ ಸಂಘದಿಂದ ಒತ್ತಾಯಿಸಿದರು.
ನಗರದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಮುಖಂಡರು, ವಿದ್ಯಾರ್ಥಿಗಳ ವಸತಿ ನಿಲಯಗಳಲ್ಲಿ ಸರಕಾರ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿಲ್ಲ, ವಿದ್ಯಾರ್ಥಿಗಳು ಅಧಿಕಾರಿಗಳಿಗೆ ಕೇಳಲಾಗದ ಸ್ಥಿತಿ ಇದೆ. ಅಲ್ಲದೆ ವಸತಿ ನಿಲಯಕ್ಕೆ ಎಲ್ಲಾ ವಿದ್ಯಾರ್ಥಿಗಳಿಗೆ ಸೇರ್ಪಡೆ ಮಾಡಿಕೊಳ್ಳುತ್ತಿಲ್ಲ, ಕೆಲವು ವಿದ್ಯಾರ್ಥಿಗಳನ್ನು ತೆಗೆದುಕೊಂಡು ಇನ್ನುಳಿದ ವಿದ್ಯಾರ್ಥಿಗಳಿಗೆ ಏನಾದರು ನೆಪ ಹೇಳಿ ನೊಂದಣಿ ಮಾಡಿಕೊಳ್ಳುವುದಿಲ್ಲ, ಆದ್ದರಿಂದ ವಸತಿ ನಿಲಯಕ್ಕಾಗಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ನೊಂದಣಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಕಚೇರಿ ಸಿರಸ್ತೆದಾರ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಪೇದೆ ಅಮರೇಶ ಸಿಂಪಿ, ಸಂಘದ ಅಧ್ಯಕ್ಷ ಬಸವರಾಜ ಕನಕಗಿರಿ, ಕಾರ್ಯದರ್ಶಿ ಲಾಳೆಪಟೇಲ್, ಶೋಷೊತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ, ತಾಲೂಕು ಅಧ್ಯಕ್ಷ ನಾಗರಾಜ ದರಬಾರಿ, ಮುಖಂಡರಾದ ಗೋಪಾಲ ಬಾಗಲಕೋಟೆ, ಶಿವು ಹೆಚ್, ಅಂಬರೀಶ, ದೇವಪ್ಪ ರತ್ತಾಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.