Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ವಡಗೇರಾ | ವಿವಿಧ ಗ್ರಾಮದ ನರೇಗಾ ಕಾಮಗಾರಿ...

ವಡಗೇರಾ | ವಿವಿಧ ಗ್ರಾಮದ ನರೇಗಾ ಕಾಮಗಾರಿ ಸ್ಥಳಕ್ಕೆ ಜಿಪಂ ಯೋಜನಾ ನಿರ್ದೇಶಕರ ಭೇಟಿ

ವಾರ್ತಾಭಾರತಿವಾರ್ತಾಭಾರತಿ14 May 2026 5:53 PM IST
share
ವಡಗೇರಾ | ವಿವಿಧ ಗ್ರಾಮದ ನರೇಗಾ ಕಾಮಗಾರಿ ಸ್ಥಳಕ್ಕೆ ಜಿಪಂ ಯೋಜನಾ ನಿರ್ದೇಶಕರ ಭೇಟಿ
ನರೇಗಾ ಯೋಜನೆಯ 100 ದಿನಗಳ ಉದ್ಯೋಗ ಸೌಲಭ್ಯ ಬಳಸಿಕೊಳ್ಳಿ : ಸಿಬಿ ದೇವರಮನಿ

ವಡಿಗೇರಾ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿ ನೋಂದಾಯಿತ ಗ್ರಾಮೀಣ ಕೂಲಿ ಕಾರ್ಮಿಕರ ಕುಟುಂಬಗಳು ಪ್ರತಿ ವರ್ಷ ಗ್ರಾಮ ಪಂಚಾಯಿತಿಯಿಂದ ನೀಡಲಾಗುವ 100 ದಿನಗಳ ಅಕುಶಲ ಕೂಲಿ ಕೆಲಸದ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಸಿಬಿ ದೇವರಮನಿ ಮನವಿ ಮಾಡಿದರು.

ಮೇ 14ರಂದು ವಡಗೇರಾ ತಾಲೂಕಿನ ಗುಲಸರಂ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿದ್ದ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ಭೌತಿಕ ಸ್ಥಿತಿಯನ್ನು ಪರಿಶೀಲಿಸಿ ಅವರು ಮಾತನಾಡಿದರು.

ಕೂಲಿಕಾರ್ಮಿಕರಿಗೆ ಸಕಾಲದಲ್ಲಿ ಕೂಲಿ ಪಾವತಿಯಾಗುತ್ತಿದೆಯೇ, ಕೆಲಸದ ಸ್ಥಳದಲ್ಲಿ ಕುಡಿಯುವ ನೀರು, ನೆರಳು, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳಿವೆಯೇ ಎಂಬುದನ್ನು ಪರಿಶೀಲಿಸಿದ ಅವರು, ಕಾರ್ಮಿಕರ ಮಸ್ಟರ್ ರೋಲ್ ಹಾಗೂ ಫೋಟೋ ಆಧಾರಿತ ಹಾಜರಾತಿಯನ್ನೂ ವೀಕ್ಷಿಸಿದರು.

“ನರೇಗಾ ಯೋಜನೆ ಗ್ರಾಮೀಣ ಪ್ರದೇಶದ ದುಡಿಯುವ ಕೈಗಳಿಗೆ ಆಸರೆಯಾಗಬೇಕು. ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಜಾಬ್ ಕಾರ್ಡ್ ಹೊಂದಿರುವ ಪ್ರತಿಯೊಂದು ಕುಟುಂಬಕ್ಕೂ ವರ್ಷದಲ್ಲಿ 100 ದಿನಗಳ ಕೂಲಿ ಕೆಲಸ ನೀಡುವ ಖಾತರಿ ಇರಬೇಕು” ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಹಿಂದಿನ ವರ್ಷಗಳಲ್ಲಿ ಆರಂಭಿಸಿ ಅಪೂರ್ಣವಾಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ಉಳಿದ ಅನುದಾನದ ಅನುಗುಣವಾಗಿ ಪೂರ್ಣಗೊಳಿಸಿ, ಕೂಲಿಕಾರ್ಮಿಕರಿಗೆ ಕೆಲಸ ಒದಗಿಸಬೇಕು. “ನರೇಗಾ ಯೋಜನೆಯಲ್ಲಿ ಕೆಲಸ ಇಲ್ಲ” ಎಂದು ಹೇಳಬಾರದು ಎಂದು ತಿಳಿಸಿದರು.

2025-26ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಅನುಮೋದನೆಯಾದ ಸಮುದಾಯ ಕಾಮಗಾರಿಗಳನ್ನು ಗ್ರಾಮ ಪಂಚಾಯಿತಿಗಳಲ್ಲಿ ಕೂಲಿ ಬೇಡಿಕೆಗೆ ಅನುಗುಣವಾಗಿ ಆರಂಭಿಸಬೇಕು ಎಂದರು.

“ನರೇಗಾ ಯೋಜನೆ ಬಂದ್ ಆಗಿದೆ ಎಂಬ ತಪ್ಪು ಮಾಹಿತಿ ಜನರಲ್ಲಿ ಹರಡುತ್ತಿದೆ. ಇದು ಸರಿಯಲ್ಲ. ಬೇಸಿಗೆ ಸಮಯದಲ್ಲಿ ರೈತರ ಹೊಲಗಳಲ್ಲಿ ಕೂಲಿಕಾರರಿಗೆ ಕೆಲಸ ಸಿಗುವುದಿಲ್ಲ. ಹೀಗಾಗಿ ಗ್ರಾಮ ಪಂಚಾಯಿತಿಗೆ ಕೆಲಸಕ್ಕಾಗಿ ಬರುವವರಿಗೆ ಸೂಕ್ತ ಮಾಹಿತಿ ನೀಡಿ, ನಗರಗಳಿಗೆ ವಲಸೆ ಹೋಗದಂತೆ ಗ್ರಾಮದಲ್ಲೇ ಉದ್ಯೋಗ ಒದಗಿಸಬೇಕು” ಎಂದು ಹೇಳಿದರು.

ಈ ವೇಳೆ ಯಾದಗಿರಿ ಜಿಲ್ಲಾ ಪಂಚಾಯಿತಿ ನರೇಗಾ ಯೋಜನೆಯ ಎಡಿಪಿಸಿ ಬನ್ನಪ್ಪ ಬೈಟಪುಲ್ಲಿ ಜಿಲ್ಲಾ ಐಇಸಿ ಸಂಯೋಜಕ ಪರಶುರಾಮ ಜೀನಕೇರಾ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಕಾಯಕ ಬಂದುಗಳು ಹಾಗೂ ಕೂಲಿ ಕಾರ್ಮಿಕರು ಇದ್ದರು.

Tags

Vadagera
share
ವಾರ್ತಾಭಾರತಿ
ವಾರ್ತಾಭಾರತಿ
Next Story
X