Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ರಾಷ್ಟ್ರಮಟ್ಟದ...

ಯಾದಗಿರಿ | ರಾಷ್ಟ್ರಮಟ್ಟದ ಯುವಜನೋತ್ಸವಕ್ಕೆ ಆಯ್ಕೆಯಾದ ಬಂಜಾರ ನೃತ್ಯ ತಂಡಕ್ಕೆ ಭವ್ಯ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ8 Jan 2026 9:48 PM IST
share
ಯಾದಗಿರಿ | ರಾಷ್ಟ್ರಮಟ್ಟದ ಯುವಜನೋತ್ಸವಕ್ಕೆ ಆಯ್ಕೆಯಾದ ಬಂಜಾರ ನೃತ್ಯ ತಂಡಕ್ಕೆ ಭವ್ಯ ಸನ್ಮಾನ
ಮನೆ ಬಾಗಿಲಿಗೆ ಬಂದು ಸಾಧಕರನ್ನು ಗೌರವಿಸಿದ ಉಮೇಶ್ ಮುದ್ನಾಳ

ಯಾದಗಿರಿ: ಜಿಲ್ಲಾ ಹಾಗೂ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಮುದ್ನಾಳ ದೊಡ್ಡ ತಾಂಡಾದ (ಭೀಮನಗರ) ಬಂಜಾರ ಜನಪದ ನೃತ್ಯ ತಂಡಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ್ ಕೆ.ಮುದ್ನಾಳ ಅವರು ಭವ್ಯ ಸನ್ಮಾನ ಮಾಡಿದರು.

ನೃತ್ಯ ತಂಡವು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಉಮೇಶ್ ಕೆ. ಮುದ್ನಾಳ ಅವರು ತಂಡದ ಸದಸ್ಯರ ಮನೆ ಬಾಗಿಲಿಗೆ ಭೇಟಿ ನೀಡಿದರು. ರೈತರು ಬೆಳೆದ ಕಲ್ಲಂಗಡಿ ಹಣ್ಣುಗಳನ್ನು ಕತ್ತರಿಸಿ ಸವಿಯುವ ಮೂಲಕ ವಿಭಿನ್ನ ಹಾಗೂ ಅದ್ದೂರಿಯಾಗಿ ತಂಡದ ಸಾಧನೆಯನ್ನು ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ಅವರು, ನಮ್ಮ ಭಾಗದ ಬಂಜಾರ ಸಂಸ್ಕೃತಿ ಮತ್ತು ಜನಪದ ನೃತ್ಯವು ರಾಷ್ಟ್ರಮಟ್ಟದಲ್ಲಿ ಪ್ರದರ್ಶನಗೊಳ್ಳುತ್ತಿರುವುದು ಹೆಮ್ಮೆಯ ವಿಷಯ. ತಂಡವು ಅಲ್ಲಿಯೂ ಅತ್ಯುತ್ತಮ ಸಾಧನೆ ಮಾಡಿ ಗೆದ್ದು ಬರಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಆನಂದ ಎಸ್. ರಾಠೋಡ ಅವರ ಮನೆಯಿಂದ ಕಳಸ ಹಾಗೂ ವಿವಿಧ ಪೂಜಾ ಸಾಮಗ್ರಿಗಳೊಂದಿಗೆ ಸೇವಾಲಾಲ್ ಮತ್ತು ಮರಿಯಮ್ಮ ದೇವಿ ಮಂದಿರದವರೆಗೆ ಬಾಜಾ-ಭಜಂತ್ರಿ ವಾದ್ಯಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಿ ತಂಡದ ಯಶಸ್ಸಿಗಾಗಿ ಪ್ರಾರ್ಥಿಸಲಾಯಿತು.

ಬಂಜಾರ ಜನಪದ ನೃತ್ಯ ತಂಡದಲ್ಲಿ ಕಾವೇರಿ, ಸವಿತಾ ಆರ್., ಕರೀಷ್ಮಾ ವಿಜಯಬಾಯಿ, ರೋಷನಿ, ಮೇನುಕಾ, ಪ್ರಿಯಾಂಕಾ, ಬೇಬಿ, ಜಗದೀಶ್ ಪುನಿಬಾಯಿ, ಸವಿತಾ ಎ. ರಾಠೋಡ ಪಾಲ್ಗೊಂಡಿದ್ದರು. ತಂಡದ ವ್ಯವಸ್ಥಾಪಕರಾಗಿ ಆನಂದ ಎಸ್. ರಾಠೋಡ ಕಾರ್ಯನಿರ್ವಹಿಸಿದ್ದಾರೆ.

ಕಾರ್ಯಕ್ರಮದಲ್ಲಿ ದೇವಸ್ಥಾನದ ಪೂಜಾರಿ ಅಂಬು ಪವಾರ, ಶಂಕರ ಬೋಪಾ ರಾಠೋಡ, ಗೋಪಾಲ್, ಸುನಿತಾ, ಅನುಶಾಬಾಯಿ, ದೇವಿಬಾಯಿ, ಸೋನಿಬಾಯಿ, ಶಾರುಬಾಯಿ ಹಾಗೂ ಊರಿನ ಹಿರಿಯರು, ನಾಗರಿಕರು ಉಪಸ್ಥಿತರಿದ್ದು ತಂಡಕ್ಕೆ ಶುಭ ಹಾರೈಸಿದರು.

Tags

Youth Festivalfestivalyadagir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X