Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಮನುಷ್ಯರಿಗೆ ಸೂಕ್ಷ್ಮ ಜ್ಞಾನ,...

ಯಾದಗಿರಿ | ಮನುಷ್ಯರಿಗೆ ಸೂಕ್ಷ್ಮ ಜ್ಞಾನ, ಸಾಮಾಜಿಕ ವಿನಯ ಅಗತ್ಯ : ಗೊ.ರು.ಚನ್ನಬಸಪ್ಪ

ವಾರ್ತಾಭಾರತಿವಾರ್ತಾಭಾರತಿ1 Jan 2026 11:21 PM IST
share
ಯಾದಗಿರಿ | ಮನುಷ್ಯರಿಗೆ ಸೂಕ್ಷ್ಮ ಜ್ಞಾನ, ಸಾಮಾಜಿಕ ವಿನಯ ಅಗತ್ಯ :  ಗೊ.ರು.ಚನ್ನಬಸಪ್ಪ

ಯಾದಗಿರಿ : ಮನುಷ್ಯನಿಗೆ ಒಳ್ಳೆಯದನ್ನು ಗುರುತಿಸುವ ಸೂಕ್ಷ್ಮ ಜ್ಞಾನ, ಒಳ್ಳೆಯದನ್ನು ಸಾಧಿಸುವ ಛಲ, ಲೋಕ ವ್ಯವಹಾರದಲ್ಲಿ ಪಾಕ್ವತೆ ಹಾಗೂ ಸಾಮಾಜಿಕ ವಿನಯ ಅವಶ್ಯಕವಾಗಿವೆ ಎಂದು ವಿದ್ವಾಂಸ ಗೊ.ರು. ಚನ್ನಬಸಪ್ಪ ಹೇಳಿದರು.

ನಗರದ ಪಾಟೀಲ ಕನ್ವೆನ್ಷನ್ ಹಾಲ್‌ನಲ್ಲಿ ಬುಧವಾರ ಸಿದ್ದಪ್ಪ ಎಸ್ ಹೊಟ್ಟಿ ಅಭಿನಂದನಾ ಸಮಿತಿ ಆಯೋಜಿಸಿದ್ದ ಅಭಿನಂದನಾ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜನಿಸಿದ ದಿನವಷ್ಟೇ ಅಲ್ಲ, ನಾವು ಏಕೆ ಜನಿಸಿದ್ದೇವೆ ಎಂಬುದನ್ನು ಸ್ಮರಣೆಯಲ್ಲಿ ಇಟ್ಟುಕೊಂಡು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡಿದಾಗ ಸಮಸ್ಯೆಗಳು, ಸವಾಲುಗಳು, ನಷ್ಟ–ಕಷ್ಟಗಳು, ದೂರು–ಆರೋಪಗಳು ಬರುವುದು ಸಹಜ. ಅವುಗಳಿಗೆ ಹೆದರಿ ಸುಮ್ಮನೆ ಕುಳಿತುಕೊಳ್ಳದೆ, ನಮ್ಮಿಂದ ಸಾಧ್ಯವಾದ ಕ್ಷೇತ್ರದಲ್ಲಿ ಸಾಧಿಸಿ ತೋರಿಸಬೇಕು ಎಂದು ಸಲಹೆ ನೀಡಿದರು.

ಒಬ್ಬ ವ್ಯಕ್ತಿಗೆ ಘನತೆ ಮತ್ತು ಗೌರವ ಬರುವುದು ಅವನ ಬಳಿ ಇರುವ ಅಧಿಕಾರದಿಂದಲ್ಲ, ಸಮಾಜಕ್ಕೆ ಸಲ್ಲಿಸಿದ ಸೇವೆಯಿಂದ. ಅಧಿಕಾರ ಹಾಗೂ ಸ್ಥಾನಮಾನಗಳ ಅಹಂಕಾರ ಮನಸ್ಸನ್ನು ವಿಕೃತಗೊಳಿಸುತ್ತದೆ ಎಂಬ ಅರಿವು ಇರಬೇಕು ಎಂದು ಹೇಳಿದರು.

ಭಾಲ್ಕಿಯ ಗುರುಬಸವ ಪಟ್ಟದ್ದೇವರು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಸೋಮಶೇಖರ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಿದ್ದಪ್ಪ ಎಸ್.ಹೊಟ್ಟಿ ದಂಪತಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ‘ದಣಿವರಿಯದ ಧೀಮಂತ’ ಅಭಿನಂದನಾ ಗ್ರಂಥ, ‘ಧೀಮಂತ ಚೇತನಿ’ ಗ್ರಂಥ, ಧ್ವನಿಸುರಳಿ ಹಾಗೂ ದಿನದರ್ಶಿಕೆ ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಅಬ್ಬೆ ತುಮಕೂರಿನ ವಿಶ್ವಾರಾಧ್ಯ ಮಠದ ಪೀಠಾಧಿಪತಿ ಗಂಗಾಧರ ಶಿವಾಚಾರ್ಯರು, ಖಾಸಾ ಮಠದ ಶಾಂತವೀರ ಗುರುಮುರಘರಾಜೇಂದ್ರ ಸ್ವಾಮೀಜಿ, ಹೆಡಗಿಮದ್ರಾದ ಶಾಂತ ಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯರು, ನಟ ದೊಡ್ಡಣ್ಣ, ಬಸವ ಸಮಿತಿ ಉಪಾಧ್ಯಕ್ಷ ಹಣಮಂತರೆಡ್ಡಿ ಮುದ್ನಾಳ, ನಫೆಡ್ ಉಪಾಧ್ಯಕ್ಷ ತರಲೋಕ್ ಸಿಂಗ್, ನಿರ್ದೇಶಕ ಅಶೋಕ ರಾಠೋಡ, ಮುಖಂಡರಾದ ವಿಶ್ವನಾಥರೆಡ್ಡಿ ದರ್ಶನಾಪುರ, ಶಿವಾನಂದ ಮಾನಕರ್, ಸುರೇಶ್ ಆರ್. ಸಜ್ಜನ್, ಲಿಂಗಾರೆಡ್ಡಿ ಬಾಸರೆಡ್ಡಿ, ಸುಭಾಷಚಂದ್ರ ಕೌಲಗಿ, ಮಹೇಶ್ ರೆಡ್ಡಿ ಮುದ್ನಾಳ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X