Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಅವಳಿ ಗ್ರಾಮಗಳ ಅಭಿವೃದ್ಧಿಗೆ...

ಯಾದಗಿರಿ | ಅವಳಿ ಗ್ರಾಮಗಳ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯ : ಸಚಿವ ಶರಣಬಸಪ್ಪ ದರ್ಶನಾಪುರ

ವಾರ್ತಾಭಾರತಿವಾರ್ತಾಭಾರತಿ22 Sept 2025 7:51 PM IST
share
ಯಾದಗಿರಿ | ಅವಳಿ ಗ್ರಾಮಗಳ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯ : ಸಚಿವ ಶರಣಬಸಪ್ಪ ದರ್ಶನಾಪುರ
ʼಸರಕಾರ ಇರುವವರೆಗೆ ಗ್ಯಾರಂಟಿ ಯೋಜನೆ ನಿಲ್ಲದುʼ

ಯಾದಗಿರಿ : ನಿಮ್ಮೆಲ್ಲರ ಸಹಕಾರದಿಂದ ಮಾತ್ರ ಅವಳಿ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.

ಕೆಂಭಾವಿ ಸಮೀಪದ ಹೆಗ್ಗಣದೊಡ್ಡಿ ಮತ್ತು ಗೋಡ್ರಿಹಾಳ ಅವಳಿ ಗ್ರಾಮಗಳಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಧರ್ಮರ ಮಠದ ನೂತನ ಕಟ್ಟಡ, 20 ಲಕ್ಷ ರೂ. ವೆಚ್ಚದ ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆ ಹಾಗೂ 5 ಕೋಟಿ ರೂ. ವೆಚ್ಚದ ಪ್ರಾಥಮಿಕ ಆರೋಗ್ಯ ಕೇಂದ್ರ ಅಡಿಗಲ್ಲು ಪೂಜೆ ನೆರವೇರಿಸಲಾಯಿತು.

ನಂತರ ಮಾತನಾಡಿದ ಅವರು, ಸರಕಾರ ಅಧಿಕಾರಕ್ಕೆ ಬಂದ ಎರಡು-ಮೂರು ತಿಂಗಳಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಸರಕಾರ ಇರುವವರೆಗೆ ಗ್ಯಾರಂಟಿ ಯೋಜನೆ ನಿಲ್ಲದು ಎಂದರು.

ಗ್ರಾಮಾಭಿವೃದ್ಧಿಗೆ ಜನರ ಸಹಕಾರ ಅಗತ್ಯವಿದೆ ಎಂದು ತಿಳಿಸಿದ ಸಚಿವರು, ಗೊಡ್ರಿಹಾಳದಲ್ಲಿ 50 ಮನೆಗಳು, ಹೈಸ್ಕೂಲ್ ಕಟ್ಟಡ, ಹಾಸ್ಟೆಲ್, ಮಾಲಗತ್ತಿಯಿಂದ ಬೇರ್ಪಟ್ಟ ಗ್ರಾಮ ಪಂಚಾಯತಿ ಕಟ್ಟಡ ಸೇರಿದಂತೆ ಹಲವಾರು ಕೆಲಸಗಳನ್ನು ಮಾಡಿರುವ ಸಂತೋಷವಿದೆ ಎಂದರು.

ಚರಂಡಿ ಮತ್ತು ಸಿಸಿ ರಸ್ತೆಗೆ 90 ಲಕ್ಷ ರೂ. ಮಂಜೂರು ಮಾಡಲಾಗಿದ್ದು, ಭೂಮಿಗಾಗಿ ಸ್ಥಳೀಯರು 20 ಲಕ್ಷ ರೂ. ದೇಣಿಗೆ ನೀಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕೆಂಭಾವಿಯಿಂದ ಸುರಪುರದವರೆಗೆ 12 ಕೋಟಿ ರೂ. ಅನುದಾನದಲ್ಲಿ ರಸ್ತೆ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದ್ದು, ಕೂಡಲಗಿ–ಕರಡಕಲ್ಲ ಹಾಗೂ ಕೆಂಭಾವಿ–ಮಲ್ಲಾ ರಸ್ತೆ ಕಾಮಗಾರಿಗೂ ಚಾಲನೆ ದೊರಕಲಿದೆ ಎಂದರು.

ಧರ್ಮರ ಮಠದ ಮಾತೋಶ್ರೀ ನಿಜಲಿಂಗಮ್ಮ ತಾಯಿ ಅವರ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ ಒರಡಿಯಾ, ಡಿಹೆಚ್ಓ ಮಹೇಶ ಬಿರಾದಾರ್, ಟಿಹೆಚ್ಒ ಆರ್.ವಿ. ನಾಯಕ್, ಶಹಾಪೂರ ಬ್ಲಾಕ್ ಅಧ್ಯಕ್ಷ ಶಿವಮಾಂತ ಚಂದಾಪೂರ, ಶರಣಪ್ಪ ಸಲಾದಪೂರ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಾಪುಗೌಡ ಪಾಟೀಲ್, ಧರ್ಮರ ಮಠದ ಆರ್.ಎಸ್. ಪಾಟೀಲ್, ಮಹಿಪಾಲರಡ್ಡಿ ಡಿಗ್ಗಾವಿ, ಶಿವರಾಜ ಬೂದೂರ, ಬಸವರಾಜ ಚಿಂಚೋಳಿ, ಹಣಮಂತ್ರಾಯ ದೊರಿ, ತಾ.ಪಂ ಪ್ರಚಾರ ಸಮಿತಿ ಅಧ್ಯಕ್ಷ ಮಾನಪ್ಪ ಸೂಗೂರ್, ತಾ.ಪಂ ಇಒ ಬಸವರಾಜ ಸಜ್ಜನ, ಹಣಮಂತ್ರಾಯ ಮಾನಸುಣಗಿ, ಲಾಳೆಪಟೇಲ್ ಹೆಗ್ಗಣದೊಡ್ಡಿ, ಸಿದ್ದನಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಮಡಿವಾಳಪ್ಪ ಪಾಟೀಲ್ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X