Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ನಾಗರಬಂಡ ಗ್ರಾಮದಲ್ಲಿ...

ಯಾದಗಿರಿ | ನಾಗರಬಂಡ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ

ವಾರ್ತಾಭಾರತಿವಾರ್ತಾಭಾರತಿ20 Oct 2025 5:15 PM IST
share
ಯಾದಗಿರಿ | ನಾಗರಬಂಡ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ
ಮಹಾತ್ಮರು ಯಾವುದೇ ಒಂದು ಜಾತಿಗೆ ಸೀಮಿತವಲ್ಲ : ಶಾಸಕ ಶರಣಗೌಡ ಕಂದಕೂರ

ಯಾದಗಿರಿ : ಸಮಾಜದ ಒಳತಿಗಾಗಿ ಶ್ರಮಿಸಿದ ಮಹಾತ್ಮರು ಯಾವುದೇ ಒಂದು ಜಾತಿಗೆ ಸೀಮಿತವಲ್ಲ. ಬದಲಿಗೆ ಅವರು ಎಲ್ಲಾ ಜನಾಂಗಕ್ಕೂ ಆದರ್ಶವಾಗಿದ್ದಾರೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಅಭಿಪ್ರಾಯ ಪಟ್ಟರು.

ತಾಲೂಕಿನ ನಾಗರಬಂಡ ಗ್ರಾಮದಲ್ಲಿ ಮಹರ್ಷಿ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಮಹಾತ್ಮರ ಪುತ್ಥಳಿಗಳ ಪ್ರತಿಷ್ಠಾಪನೆ ಎಲ್ಲೆಡೆ ನಡೆಯುತ್ತಿದ್ದು, ಅದರಂತೆ ಅವರ ತತ್ವಾದರ್ಶಗಳನ್ನು ಪಾಲನೆ ಮಾಡುವ ಅಗತ್ಯವಿದೆ. ದೇವರ ಹೆಸರಲ್ಲಿ ದುಂದುವೆಚ್ಚ ಮಾಡಿ ಸಾಲಗಾರರಾಗದೆ ಮಕ್ಕಳಿಗೆ ಶಿಕ್ಷಣ ಕೊಡುವತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಹೊಟ್ಟೆಪಾಡಿಗಾಗಿ ಬೆಂಗಳೂರು, ಹೈದರಾಬಾದ್‌, ಮುಂಬಯಿಯಂತಹ ಮಹಾನಗರಗಳಿಗೆ ಹೋಗಿ ದುಡಿಯುವ ಶ್ರಮಿಕರು ಸಹ ಲಕ್ಷಾಂತರ ರೂಪಾಯಿಗಳನ್ನು ದೇವರ ಹೆಸರಲ್ಲಿ ಖರ್ಚು ಮಾಡುತ್ತಿರುವುದು ಅತ್ಯಂತ ಬೇಸರದ ಸಂಗತಿ. ದೇವರ ಆರಾಧನೆ ಮಾಡಿ. ಆದರೆ, ಸಾಲ ಶೂಲ ಮಾಡಿಕೊಂಡು ಕುಟುಂಬವನ್ನು ಆರ್ಥಿಕವಾಗಿ ಹಾಳು ಮಾಡಿಕೊಳ್ಳದೆ ಹಣವನ್ನು ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳಬೇಕು ಎಂದು ತಿಳಿ ಹೇಳಿದರು.

ಯುವಕರು ಜೀವನ ರೂಪಿಸಿಕೊಳ್ಳಬೇಕಾದ ವಯಸ್ಸಲ್ಲಿ ದುಶ್ಚಟಗಳಿಗೆ ಒಳಗಾಗಿ ಜೀವನ ಹಾಳು ಮಾಡಿಕೊಳ್ಳದೆ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನ ಹರಿಸಬೇಕು ಎಂದು ಹೇಳಿದರು.

ಪತ್ರಕರ್ತ ಎಸ್.ಎಸ್ ನಾಯಕ ಅವರು ಮಾತನಾಡಿ, ದೇವರ ಹೆಸರಲ್ಲಿ ಪ್ರಾಣಿ ಬಲಿ ಸಂಸ್ಕೃತಿಯನ್ನು ಬಿಟ್ಟು ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವಲ್ಲಿ ಗಮನಹರಿಸಬೇಕು. ಇದಲ್ಲದೆ ನಮ್ಮ ಸಮಾಜ ಬಂಧುಗಳು ಕುಡಿತಕ್ಕೆ ದಾಸರಾಗದೇ ಸಾಂಸಾರಿಕ ಸುಧಾರಣೆಯತ್ತ ಸಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗೊಲ್ಲಪಲ್ಲಿ ವಾಲ್ಮೀಕಿ ಗುರುಪೀಠದ ಪೀಠಾಧಿಪತಿ ವರದಾನಂದೇಶ್ವರ ಸ್ವಾಮಿಜಿ, ಹಣಮೇಗೌಡ ಬೀರನಕಲ್, ಸುದರ್ಶನ ನಾಯಕ ವರ್ಕನಳ್ಳಿ, ಮರೆಪ್ಪ ನಾಯಕ ಮಗ್ದಂಪುರ, ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ಗೌಡಪ್ಪಗೌಡ ಆಲ್ದಾಳ ಭೀಮರಾಯ ಠಾಣಗುಂದಿ, ರವಿಗೌಡ ಕಾರಡ್ಡಿ ಮಲ್ಹಾರ, ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ, ಮಹಿಪಾಲರಡ್ಡಿ ಮಲ್ಹಾರ, ಸಿದ್ದಲಿಂಗರೆಡ್ಡಿಗೌಡ, ಸುಭಾಷ ನಾಯಕ ಹೆಡಗಿಮದ್ರಾ, ಮಲ್ಲಮ್ಮ ಕೋಮಾರ, ಪಿಎಸ್ಐ ಭೀಮರಾಯ ನಾಯಕ, ಭೀಮರಾಯ ಹೊಸಮನಿ, ದೇವಿಂದ್ರ ನಾಯಕ ಕೂಡ್ಲೂರು, ಬಸರೆಡ್ಡಿಗೌಡ ಹೆಗ್ಗಣಗೇರಾ, ರವೀಂದ್ರ ಮಲ್ಲೋರ, ಲಕ್ಷ್ಮಣ ನಾಯಕ ಕೂಡ್ಲೂರು, ಮಲ್ಲೇಶ ನಾಯಕ, ಸಾಹೇಬಗೌಡ ಗೌಡಗೇರಾ, ಆಂಜನೇಯ ಮಲ್ಹಾರ ಸೇರಿದಂತೆ ಇತರರಿದ್ದರು.


ವಾಲ್ಮೀಕಿ ಆದರ್ಶ ಪಾಲಿಸಿ :

ಜಗತ್ತಿಗೆ ಶ್ರೀರಾಮನನ್ನು ಪರಿಚಯಿಸಿದ ಶ್ರೇಷ್ಠ ಗುರು ವಾಲ್ಮೀಕಿ ಮಹರ್ಷಿ ಅವರಾಗಿದ್ದು, ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಾತಿನಲ್ಲಿ ಬದಲಾವಣೆ ಆಗದೆ ಕೃತಿಯಲ್ಲಿ ಬದಲಾಗಬೇಕು, ಶಿಕ್ಷಣ ಪಡೆದು ವಿದ್ಯಾವಂತರಾಗಿ ವಿಚಾರಶೀಲರಾಗಬೇಕು, ಸರ್ವ ಸಮಾಜದ ಬಂಧುಗಳ ಜತೆಗೆ ಸಹಬಾಳ್ವೆ ಜೀವನ ಸಾಗಿಸಿ, ಎಲ್ಲರೊಂದಿಗೆ ಪ್ರೀತಿಯಿಂದ ನಡೆದುಕೊಳ್ಳಬೇಕು. ಯಾರನ್ನು ವೈಯಕ್ತಿಕವಾಗಿ ವಿರೋಧಿಸಬೇಡಿ ಎಂದು ಗೊಲ್ಲಪಲ್ಲಿ ವಾಲ್ಮೀಕಿ ಗುರುಪೀಠದ ಪೀಠಾಧಿಪತಿ ವರದಾನಂದೇಶ್ವರ ಸ್ವಾಮಿಜಿ ಸಲಹೆ ನೀಡಿದರು.


ಮಹರ್ಷಿ ವಾಲ್ಮೀಕಿ ಅವರ ಚಿಂತನೆಗಳು ನಮಗೆಲ್ಲ ಸ್ಪೂರ್ತಿಯಾಗಿದ್ದು, ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ನಡೆಯೋಣ. ಸೈದಾಪುರದಲ್ಲಿ ವಾಲ್ಮೀಕಿ ಭವನ ನಿರ್ಮಾಣ ಮಾಡಲು ಬದ್ಧನಾಗಿರುವೆ, ಸಮಾಜದ ಮುಖಂಡರು ನಿವೇಶನ ಕಲ್ಪಿಸಿಕೊಡಬೇಕು.

- ಶರಣಗೌಡ ಕಂದಕೂರ ಶಾಸಕರು, ಗುರುಮಠಕಲ್




share
ವಾರ್ತಾಭಾರತಿ
ವಾರ್ತಾಭಾರತಿ
Next Story
X