Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಮಾಜಿ ಶಾಸಕ...

ಯಾದಗಿರಿ | ಮಾಜಿ ಶಾಸಕ ದಿ.ವೀರಬಸವಂತರೆಡ್ಡಿ ಮುದ್ನಾಳ್ ಹುಟ್ಟು ಹಬ್ಬದ ಪ್ರಯುಕ್ತ ಡಿ.31ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ29 Dec 2024 4:15 PM IST
share
ಯಾದಗಿರಿ | ಮಾಜಿ ಶಾಸಕ ದಿ.ವೀರಬಸವಂತರೆಡ್ಡಿ ಮುದ್ನಾಳ್ ಹುಟ್ಟು ಹಬ್ಬದ ಪ್ರಯುಕ್ತ ಡಿ.31ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಯಾದಗಿರಿ : ಉತ್ತರ ಕರ್ನಾಟಕ ಭಾಗದ ಹೆಸರಾಂತ ವೈದ್ಯರಾಗಿದ್ದ ಹಾಗೂ ಯಾದಗಿರಿ ಮತಕ್ಷೇತ್ರದ ಮಾಜಿ ಶಾಸಕರೂ ಆಗಿದ್ದ ದಿ.ವೀರಬಸವಂತರಡ್ಡಿ ಮುದ್ನಾಳ್ ಅವರ 73ನೇ ಹುಟ್ಟು ಹಬ್ಬದ ಪ್ರಯುಕ್ತ ಡಿ.31ರಂದು ಇಲ್ಲಿನ ವಿಬಿಆರ್ ಮುದ್ನಾಳ್ ಮಲ್ಟಿ ಸ್ಟೇಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಡಾ.ಅಮೋಘ ಬಿ.ಎನ್. ತಿಳಿಸಿದ್ದಾರೆ.

ಭಾನುವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3ಗಂಟೆವರೆಗೆ ಶಿಬಿರ ನಡೆಯಲಿದೆ. ಸಾಮಾನ್ಯ ಶಸ್ತ್ರತಜ್ಞರು, ಸಲಹಾ, ಡರ್ಮಟಾಲಜಿ, ಸ್ತ್ರೀ ರೋಗ, ಎಲಬು ಮತ್ತು ಕೀಲು, ಪೀಡಿಯಾಟ್ರಿಕ್ಸ್ ಹೀಗೆ ವಿವಿಧ ಕಾಯಿಲೆಗಳಿಗೆ ತಜ್ಞ ವೈದ್ಯರು ತಪಾಸಣೆ ಮಾಡಲಿದ್ದಾರೆಂದು ಅವರು ಹೇಳಿದರು.

ಶಿಬಿರದಲ್ಲಿ ನುರಿತ ವೈದ್ಯರಾದ ಡಾ.ಸಂಗಮ್ಮ ವಿ.ಮುದ್ನಾಳ್, ಡಾ.ಬಸವರಾಜ ನರಸಣಗಿ, ಡಾ.ಉಮಾಮಹೇಶ್ವರಿ, ಡಾ.ಕ್ಷೀತಿಜ್, ಡಾ.ಶ್ರೀಧರ, ಡಾ.ಅಲ್ತಾಫ್, ಡಾ.ವೀರೇಶ ಜಾಕಾ ಸೇರಿದಂತೆಯೇ ಅನೇಕ ತಜ್ಞ ವೈದ್ಯರ ತಂಡ ಅಂದು ಶಿಬಿರದಲ್ಲಿ ರೋಗಿಗಳಿಗೆ ತಪಾಸಣೆ ಮಾಡಲಿದ್ದಾರೆಂದರು.

ಬಡತನದ ರೇಖೆಗಿಂತ ಕಡಿಮೆ ಇರುವ ಜನರಿಗೆ ( ಬಿಪಿಎಲ್ ಕಾರ್ಡ್ ಹೊಂದಿದವರಿಗೆ) ಉಚಿತ ಶಸ್ತ್ರ ಚಿಕಿತ್ಸೆ ಮಾಡಲಾಗುವುದು. ಈ ವೇಳೆ ಪ್ರಯೋಗಾಲಯದ ಶುಲ್ಕದಲ್ಲಿ ಶೇ.20ರಷ್ಟು, ಔಷಧಿಗಳ ಶುಲ್ಕದಲ್ಲಿ ಶೇ.10 ಮತ್ತು ಶಸ್ತ್ರಚಿಕಿತ್ಸೆ ಶುಲ್ಕದಲ್ಲಿ ( ಎಪಿಎಲ್ ಕಾರ್ಡ್ ಇದ್ದವರಿಗೆ) ಶೇ.50ರಷ್ಟು ರಿಯಾಯಿತಿ ನೀಡಲಾಗುವುದೆಂದು ಡಾ.ಅಮೋಘ ವಿವರಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆ ಹಾಗೂ ಬೇರೆ ಜಿಲ್ಲೆಗಳ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಕಿ ಮಾರುತಿ ಕಲಾಲ್ ಇದ್ದರು.

ಶಿಬಿರದ ನಿಮಿತ್ಯ ಈಗಾಗಲೇ ಜಿಲ್ಲೆಯಲ್ಲಿ ಜನರಲ್ಲಿ ಜಾಗೃತಿ ಮತ್ತು ಪ್ರಚಾರ ಮಾಡಲಾಗುತ್ತಿದ್ದು, ನಗರ ಸೇರಿದಂತೆಯೇ ಸುಮಾರು 80ಕ್ಕೂ ಹೆಚ್ಚು ಹಳ್ಳಿಗಳ ಜನರು ಅಂದು ಭಾಗವಹಿಸಿ ತಪಾಸಣೆ ಮಾಡಿಕೊಳ್ಳಲಿದ್ದಾರೆ. ಜನರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿದೆ. ರೋಗ ಬಂದ ಮೇಲೆ ವೈದ್ಯರನ್ನು ಕಾಣುವ ಬದಲಿಗೆ ಆಗಾಗ ತಪಾಸಣೆ ಮಾಡಿಕೊಂಡರೇ ಮುಂದಿನ ಅನಾಹುತ ತಪ್ಪಿಸಬಹುದು ಮತ್ತು ಹಣವೂ ಉಳಿಸಬಹುದು.

ಡಾ.ಕ್ಷೀತಿಜ್, ವಿಆರ್ ಬಿ ಆಸ್ಪತ್ರೆ ಯಾದಗಿರಿ.

ರೈತರು, ರೈತ ಕಾರ್ಮಿಕರು ಹೊಲಗಳಲ್ಲಿ ಕ್ರಿಮಿನಾಶಕ ಔಷಧಿ ಸಿಂಪಡಿಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕಾರಣ, ವಿಷದ ವಾಸನೆ ಸಹಜವಾಗಿ ದೇಹದೊಳಗೆ ರವಾನೆಯಾಗುತ್ತದೆ. ಆಗ ಅಂತಹವರು ಅಸ್ತವ್ಯಸ್ತಗೊಂಡು ಗಾಬರಿಯಾಗಿ ಆಸ್ಪತ್ರೆಗೆ ಬರುತ್ತಾರೆ. ಇದನ್ನು ಗಮನಿಸಿದ ನಾವುಗಳು ಅನೇಕ ಕಡೆ ಕ್ರೀಮಿನಾಶಕ ಔಷಧಿಗಳನ್ನು ಮಾರುವ ಅಂಗಡಿ ಮಾಲಕರಿಗೆ ಆಸ್ಪತ್ರೆಯಿಂದ ಮಾಸ್ಕ್ ಗಳನ್ನು ಕೊಟ್ಟು ರೈತರಿಗೆ ಮುಟ್ಟಿಸುವಂತೆಯೇ ಹೇಳಿದ್ದೆವೆ.

ಡಾ. ಬಸವರಾಜ ನರಸಣಗಿ ಹಿರಿಯ ವೈದ್ಯರು, ಯಾದಗಿರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X