Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ರಾಮಸಮುದ್ರದಲ್ಲಿ 688 ಲಕ್ಷ...

ಯಾದಗಿರಿ | ರಾಮಸಮುದ್ರದಲ್ಲಿ 688 ಲಕ್ಷ ರೂ. ವೆಚ್ಚದ ಮೂರು ಕಾಮಗಾರಿ ಉದ್ಘಾಟನೆ

ಯಾದಗಿರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಮೂಲಗುರಿ : ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು

ವಾರ್ತಾಭಾರತಿವಾರ್ತಾಭಾರತಿ14 Feb 2025 6:43 PM IST
share
ಯಾದಗಿರಿ | ರಾಮಸಮುದ್ರದಲ್ಲಿ 688 ಲಕ್ಷ ರೂ. ವೆಚ್ಚದ ಮೂರು ಕಾಮಗಾರಿ ಉದ್ಘಾಟನೆ

ಯಾದಗಿರಿ : ನಗರ ಸೇರಿದಂತೆಯೇ ಮತಕ್ಷೇತ್ರದ ಪ್ರತಿ ಹಳ್ಳಿಗಳ ಅಭಿವೃದ್ಧಿಯೇ ನನ್ನ ಮೂಲ ಉದ್ದೇಶವಾಗಿದ್ದು, ಇನ್ನೂ ಮೂರು ವರ್ಷಗಳಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುವ ಮೂಲಕ ಮತದಾರರ ಋಣ ತೀರಿಸುವ ಕೆಲಸ ಮಾಡುವೆ ಎಂದು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಭರವಸೆ ನೀಡಿದರು.

ತಾಲೂಕಿನ ರಾಮಸಮುದ್ರ ಗ್ರಾಮದಲ್ಲಿ ಶುಕ್ರವಾರ ಲೋಕೋಪಯೋಗಿ ಇಲಾಖೆ ಏರ್ಪಡಿಸಿದ್ದ ಕೆಕೆಆರ್ ಡಿಬಿ 2023-24ನೇ ಸಾಲಿನ ಕೆಕೆಆರ್ ಡಿಬಿ ಮೈಕ್ರೋ ಅನುದಾನದ ಅಡಿಯಲ್ಲಿ ಒಟ್ಟು 688.01 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು.

ಬರುವ ದಿನಗಳಲ್ಲಿ ಕೆಕೆಆರ್ ಡಿಬಿ, ರಾಜ್ಯ ಸರ್ಕಾರದಿಂದ ಅತಿ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಹೇಳಿದ ಶಾಸಕರು, ಸಿಎಂ ಸಿದ್ದರಾಮಯ್ಯ ನೇತ್ವತೃದ ಸರ್ಕಾರ ಅನೇಕ ಹೊಸ, ಹೊಸ ಯೋಜನೆಗಳನ್ನು ಜಾರಿ ಮಾಡಿದೆ. ಪಂಚ ಗ್ಯಾರಂಟಿಗಳು ಹಳ್ಳಿಗರ ಮನಸ್ಸು ಮುಟ್ಟಿವೆ. ಜನಪರ ಸರ್ಕಾರದಿಂದ ಅಭಿವೃದ್ಧಿಯ ಹೊಳೆ ಹರಿಯಲಿದೆ ಎಂದರು.

ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶ್ರೀಧರ್ ಮಾತನಾಡಿ, ಕಾಲಮಿತಿ ಒಳಗೆ ಗುಣ್ಣಮಟ್ಟದ ಕಾಮಗಾರಿ ಕೈಗೊಳಲು ಶಾಸಕರು ಸೂಚನೆ ನೀಡಿದ್ದಾರೆ. ಕಾಮಗಾರಿ ಗುಣಮಟ್ಟದಿಂದ ಮಾಡಲಾಗುವುದು ಎಂದರು.

ಗ್ರಾಮದ ಮುಖಂಡ ಬಸವರಾಜ ಬಾಗ್ಲಿ ಮಾತನಾಡಿ, ಸರ್ಕಾರ ಬಡ ಜನರಿಗಾಗಿ ಅನೇಕ ಜನಪರ ಯೋಜನೆ ಜಾರಿಗೆ ತರುವ ಮೂಲಕ ಬಡವರ ಪಾಲಿಗೆ ವರದಾನವಾಗಿದೆ ಎಂದರು.

ಈ ವೇಳೆ ಶಾಸಕರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಹಂತ, ಹಂತವಾಗಿ ಬಗೆ ಹರಿಸುವುದಾಗಿ ಹೇಳಿದರು.

ರಾಮಸಮುದ್ರ ಗ್ರಾಮ ಪಂಚಾಯತ್ ಅಧ್ಯಕ್ಷೆ ಆನಂದಮ್ಮ, ಕಾಂಗ್ರೆಸ್ ಹಿರಿಯ ಮುಖಂಡರೂ ಆದ ಗುತ್ತೀಗೆದಾರ ಚಿದಾನಂದ ಕಾಳೆಬೆಳಗುಂದಿ, ಸುದರ್ಶನ ನಾಯಕ, ಉಮೇಶ ಮುದ್ನಾಳ, ಲಚಮರೆಡ್ಡಿ, ಪಿಡಿಓ ರೇಣುಕಾ, ಮಲ್ಲಿಕಾರ್ಜುನ ಈಟೆ, ಮರಿಲಿಂಗಪ್ಪ, ಶಿವಲಿಂಗಪ್ಪ, ಸಿದ್ದಲಿಂಗಪ್ಪ ಗುನಕಿ, ಮಲ್ಲಿಕಾರ್ಜುನ ರಾಮಸಮುದ್ರ, ಕೇಶವ ಪವಾರ್ ಸೇರಿದಂತೆಯೇ ಇತರರಿದ್ದರು.

ಮೂರು ಕಾಮಗಾರಿ, 688 ಲಕ್ಷ ರೂ. ವೆಚ್ಚ :

ಈ ವೇಳೆ ತಾಲೂಕಿನ ಸಿಂದಗಿ-ಕೊಡಂಗಲ್ ರಾಜ್ಯ ಹೆದ್ದಾರಿ ರಸ್ತೆ 4.15 ಕೋಟಿ ರೂ. ವೆಚ್ಚದಲ್ಲಿ ಮರು ಡಾಂಬರೀಕರಣ, 2023-24ನೇ ಸಾಲಿನ ಕೆ.ಕೆ.ಆರ್.ಡಿ.ಬಿ. ಮೈಕ್ರೋ 180 ಲಕ್ಷ ರೂ. ಅನುದಾನದಲ್ಲಿ ತಾಲೂಕಿನ ಮುಂಡರಗಿ-ಅಚ್ಚೋಲ ರಸ್ತೆ ಸೇತುವೆ ನಿರ್ಮಾಣ ಹಾಗೂ 93.01ಲಕ್ಷ ರೂ. ಅನುದಾನದಲ್ಲಿ ತಾಲೂಕಿನ ಅರಿಕೇರಾ (ಕೆ) ದಿಂದ ಮೋಟಳ್ಳಿ (ಜಿ.ಮು.ರ) ರಸ್ತೆ ಸುಧಾರಣೆ ಕಾಮಗಾರಿ ಉದ್ಘಾಟಿಸಿದರು.

ಹೋರಾಟಕ್ಕೆ ಸ್ಪಂದಿಸಿ ಸಿಂದಗಿ ಮತ್ತು ಕೊಡಂಗಲ್ ರಾಜ್ಯ ಹೆದ್ದಾರಿಗೆ 1 ಕೋಟಿ 40 ಲಕ್ಷ ರೂ. ಅನುದಾನ ನೀಡಿ ಕಾಮಗಾರಿ ಆರಂಭಿಸಿದ ಹಿನ್ನಲೆಯಲ್ಲಿ ಕಾರ್ಯಕ್ರಮದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರಿಗೆ ಹೋರಾಟಗಾರ ಉಮೇಶ ಮುದ್ನಾಳ ವಿಶೇಷ ಸನ್ಮಾನ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X