Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಬಸವ ಗೀತೆ 9 ಸಂಪುಟ ಬಿಡುಗಡೆ

ಯಾದಗಿರಿ | ಬಸವ ಗೀತೆ 9 ಸಂಪುಟ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ12 Jan 2026 10:23 PM IST
share
ಯಾದಗಿರಿ | ಬಸವ ಗೀತೆ 9 ಸಂಪುಟ ಬಿಡುಗಡೆ
ಲೌಕಿಕ ಭೋಗ ಹಿತಾಸಕ್ತಿಗಳತ್ತ ಬದುಕಿನ ಪಯಣ : ಬಸವರಾಜಸ್ವಾಮಿ

ಯಾದಗಿರಿ, ಜ. 12: ದೈಹಿಕ ಬಯಕೆಗಳ ಹಿತಾಸಕ್ತಿಗಳತ್ತ ಎಲ್ಲರೂ ವಾಲುತ್ತಿರುವುದರಿಂದ ಅರಿವು, ಆಚಾರ ಮರೆಯಾಗುತ್ತಿದೆ. ಇದರ ಪರಿಣಾಮ ದುಃಖ ದುಮ್ಮಾನಗಳತ್ತ ಬದುಕು ಸಾಗುತ್ತಿದೆ ಎಂದು ಶರಣರು ಎಚ್ಚರಿಸಿದ್ದಾರೆ ಎಂದು ಸಾಹಿತಿ ಬಸವರಾಜ ಸ್ವಾಮಿ ಹೇಳಿದರು.

ಜಿಲ್ಲಾ ಕನ್ನಡ ಮತ್ತು ಶರಣ ಸಾಹಿತ್ಯ ಪರಿಷತ್, ಬಸವ ಕೇಂದ್ರದ ಸಹಯೋಗದಲ್ಲಿ ಕಸಾಪ ಭವನದಲ್ಲಿ ಆಯೋಜಿಸಲಾಗಿದ್ದ ತಾವೇ ರಚಿಸಿದ ಬಸವ ಗೀತೆ 9 ಸಂಪುಟಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಈ ಸಂಪುಟಗಳಲ್ಲಿ ಶರಣರ ವಚನಗಳ ಸಾರವನ್ನು ವಿವರಿಸಿ ಹೇಳುವ ಪ್ರಯತ್ನ ಮಾಡಲಾಗಿದೆ. ಕಂಬಾರ ಮಾಡಿದ್ದು ಕಬ್ಬಿಣದ ಪೀಠ. ಆದರೆ ಎಲ್ಲರೂ ಆ ಭೌತಿಕ ಪೀಠದ ಮೇಲೆ ಕೂಡಲು ಹೆಣಗುತ್ತಿದ್ದಾರೆಯೇ ಹೊರತು ಜ್ಞಾನ ಪೀಠದ ಮೇಲೆ ಕೂಡಬೇಕು ಎಂಬ ಅರಿವು ಮೂಡುತ್ತಿಲ್ಲ ಎಂದರು.

ಲಿಂಗ ಎಂದರೆ ಜ್ಞಾನ. ಆದರೆ ಇಂದು ನಾವು ಲಿಂಗಾಯತರಾಗುತ್ತಿದ್ದೇವೆಯೇ ಹೊರತು ಲಿಂಗವಾಗುತ್ತಿಲ್ಲ. ಇನ್ನಿತರರು ಬೌದ್ಧರಾಗುತ್ತಿದ್ದಾರೆ, ಆದರೆ ಬುದ್ಧರಾಗುತ್ತಿಲ್ಲ ಎಂದು ಮಾರ್ಮಿಕವಾಗಿ ನುಡಿದ ಅವರು, ಇಂದು ಅಜ್ಞಾನ ಆಳುತ್ತಿದೆ. ವಿಜ್ಞಾನದ ಮೂಲಕ ಭೌತಿಕ ಸುಖಭೋಗದ ಬದುಕಿನ ಎತ್ತರಕ್ಕೆ ಏರಿದರೂ ವಿವೇಕದ ಎತ್ತರಕ್ಕೆ ಏರಲಾಗುತ್ತಿಲ್ಲ.ಬದಲಿಗೆ ಪ್ರಪಾತಕ್ಕೆ ಜಾರುತ್ತಿದ್ದೇವೆ ಎಂದು ಬಸವರಾಜ ಸ್ವಾಮಿ ಹೇಳಿದರು.

ರಾಯಚೂರಿನ ನಿವೃತ್ತ ಉಪನ್ಯಾಸಕ ಬಿ.ಜಿ.ಹುಲಿ, ಸರಕಾರಿ ಪದವಿ ಕಾಲೇಜು ಪ್ರಾಂಶುಪಾಲ ಡಾ.ಸುಭಾಶ್ಚಂದ್ರ ಕೌಲಗಿ ಮಾತನಾಡಿದರು. ಗುರುಮಠಕಲ್ ಖಾಸಾಮಠದ ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಮಹಾಸ್ವಾಮಿ ಸಾನ್ನಿಧ್ಯ ವಹಿಸಿದ್ದರು. ಕಸಾಪ, ಶಸಾಪ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ, ಅಧ್ಯಕ್ಷತೆ ವಹಿಸಿದ್ದರು. ವಿಶ್ರಾಂತ ಜಿಲ್ಲಾ ಸರ್ಜನ್ ಡಾ. ಭಗವಂತ ಅನವಾರ, ಬಸವ ಕೇಂದ್ರದ ಅಧ್ಯಕ್ಷ ಸಿದ್ದಣ್ಣ ಬಾಡದ ಇದ್ದರು. ಉಪನ್ಯಾಸಕ ಸಿದ್ದರಾಜರೆಡ್ಡಿ ನಾಲ್ವಾರ ಕಾರ್ಯಕ್ರಮ ನಿರೂಪಿಸಿದರು.

Tags

yadagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X