Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಪ್ಲಾಸ್ಟಿಕ್ ಬಳಕೆಯಿಂದ ಪರಿಸರ...

ಯಾದಗಿರಿ | ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಹಾನಿ ; ಜೀವನ ಕಟ್ಟೀಮನಿ

ವಾರ್ತಾಭಾರತಿವಾರ್ತಾಭಾರತಿ19 March 2025 9:42 PM IST
share
Photo of Program

ಸುರಪುರ : ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಸಾಕಷ್ಟು ಹಾನಿಯಾಗುತ್ತದೆ, ಆದ್ದರಿಂದ ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು ಮತ್ತು ಪ್ರತಿಯೊಬ್ಬ ವ್ಯಾಪಾರಿ ತಮ್ಮ ಅಂಗಡಿಯ ಮುಂದೆ ಪ್ಲಾಸ್ಟಿಕ್ ಚೀಲ ಬೇಡ ಬಟ್ಟೆ ಚೀಲ ತನ್ನಿ ಎಂದು ನಾಮಫಲಕ ಅಳವಡಿಸಬೇಕು ಎಂದು ನಗರಸಭೆ ಪೌರಾಯುಕ್ತ ಜೀವನ ಕುಮಾರ್ ಕಟ್ಟೀಮನಿ ಹೇಳಿದರು.

ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಪ್ಲಾಸ್ಟಿಕ್ ಸುಟ್ಟಾಗ ಅದರಿಂದ ಹೊರಬರುವ ವಿಷಾಕಾರಿ ಅನಿಲಗಳು ವಾತಾವರಣಕ್ಕೆ ವಾಯುಮಾಲಿನ್ಯ ಉಂಟುಮಾಡುತ್ತವೆ. ಪ್ಲಾಸ್ಟಿಕ್ ಮಣ್ಣಲ್ಲಿ ಸೇರಿಕೊಂಡು ನೀರು ಇಂಗಲು ಅಡ್ಡಿ ಮಾಡಿ, ಕೆರೆ ಕಟ್ಟೆ ಬಾವಿಗಳಿಗೆ ಬರುವ ನೀರನ್ನು ತಡೆಯುತ್ತದೆ. ಪ್ಲಾಸ್ಟಿಕ್ ಇರುವ ಮಣ್ಣಿನಲ್ಲಿ ಎರೆಹುಳುಗಳು ಬೆಳೆಯದೆ ಮಣ್ಣಿನ ಫಲವತ್ತತೆ ಕಡಿಮೆಯಾಗುತ್ತದೆ. ಪ್ಲಾಸ್ಟಿಕ್ ಸಸ್ಯಗಳ ಬೇರುಗಳು ಮಣ್ಣಿನಲ್ಲಿ ಫಸರಿಸಲು ಅಡ್ಡಿ ಮಾಡುತ್ತದೆ. ಪ್ಲಾಸ್ಟಿಕ್ ಹುಲ್ಲು ಮೇವಿನ ಜೊತೆ ಬೆರೆತು ದನಕರುಗಳು ಮತ್ತು ಇನ್ನಿತರೆ ಪ್ರಾಣಿಗಳ ಸಾವಿಗೆ ಕಾರಣವಾಗುತ್ತದೆ. ಪ್ಲಾಸ್ಟಿಕ್‌ ಚರಂಡಿಗಳಲ್ಲಿ ಸೇರಿ ನೀರಿನ ಹರಿಯುವಿಕೆ ಅಡ್ಡಿಯುಂಟು ಮಾಡುವುದಲ್ಲದೆ ಹಲವಾರು ಕಾಯಿಲೆಗಳು ಹರಡುತ್ತವೆ.

ಇನ್ನು ಮುಂದೆ ಯಾವುದೇ ರೀತಿಯ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ತಟ್ಟೆ, ಲೋಟ, ಚಮಚ ಸೇರಿದಂತೆ ಪ್ಲಾಸ್ಟಿಕ್ ಬಳಕೆ ನಿಷೇಧವಿರುವ ಕಾರಣ ಅಂಗಡಿಯಲ್ಲಿ ಉಪಯೋಗಿಸುವುದು ಕಂಡು ಬಂದಲ್ಲಿ ದಂಡದ ಜೊತೆಗೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಆದಕಾರಣ ಎಲ್ಲರೂ ಸಹಕಾರ ನೀಡಿ ಪ್ಲಾಸ್ಟಿಕ್ ಬಳಕೆಗೆ ಮುಕ್ತಿಗೆ ಇತಿಶ್ರೀ ಹಾಡಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ನಗರಸಭೆ ಸದಸ್ಯರಾದ ನಾಸೀರ್ ಹುಸೇನ್ ಕುಂಡಾಲೆ, ಮಾನಪ್ಪ ಚಳ್ಳಿಗಿಡ, ಶಕೀಲ್ ಅಹಮದ್ ಖುರೇಷಿ, ಎಇಇ ಶಾಂತಪ್ಪ ಹೊಸೂರು, ಇಂಜಿನೀಯರ್ ಗಳಾದ ಮಹೇಶ ಮಾಳಗಿ, ವಿಶ್ವನಾಥ್ ಯಾದವ, ಮಲ್ಲಿಕಾರ್ಜುನ ವಾಲಿ, ವ್ಯವಸ್ಥಾಪಕ ಯಲ್ಲಪ್ಪ ನಾಯಕ ಡೊಣ್ಣಿಗೇರಿ, ನೈರ್ಮಲ್ಯ ಅಧಿಕಾರಿಗಳಾದ ಗುರುಸ್ವಾಮಿ ಹೀರೆಮಠ, ಹಣಮಂತ ಯಾದವ, ಮೈನುದ್ದೀನ್, ದುರ್ಗಪ್ಪ ನಾಯಕ, ಸಂಗಮ್ಮ ಸಜ್ಜನ್,ರತ್ನಮ್ಮ,ಸುರೇಖಾ, ಶರಣಪ್ಪ ತೇಲ್ಕರ್, ದುರ್ಗಪ್ಪ ಸೇರಿದಂತೆ ಅನೇಕ ಸಿಬ್ಬಂದಿಗಳಿದ್ದರು. ನಗರದಲ್ಲಿ ಅಭಿಯಾನ ನಡೆಸಿ ಜನ ಜಾಗೃತಿ ಮೂಡಿಸಿದರು‌.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X