Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadagiri | ಬರ ಘೋಷಣೆಗೆ ಆಗ್ರಹಿಸಿ...

Yadagiri | ಬರ ಘೋಷಣೆಗೆ ಆಗ್ರಹಿಸಿ ನಡೆಸಲು ಮುಂದಾಗಿದ್ದ ಕೆಕೆ ವಿಮೋಚನಾ ದಿನದ ಪ್ರತಿಭಟನೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ16 Sept 2026 8:42 PM IST
share
Yadagiri | ಬರ ಘೋಷಣೆಗೆ ಆಗ್ರಹಿಸಿ ನಡೆಸಲು ಮುಂದಾಗಿದ್ದ ಕೆಕೆ ವಿಮೋಚನಾ ದಿನದ ಪ್ರತಿಭಟನೆ ಮುಂದೂಡಿಕೆ

ಯಾದಗಿರಿ: ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸುವಂತೆ ಒತ್ತಾಯಿಸಿ ಸೆ.17ರಂದು ಕಲ್ಯಾಣ ಕರ್ನಾಟಕ ವಿಮೋಚನಾ ದಿನದಂದು ಪ್ರತ್ಯೇಕ ಧ್ವಜ ಹಾರಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಸರ್ವ ಸಂಘಟನೆಗಳ ಹೋರಾಟ ಸಮಿತಿಯ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಬುಧವಾರ ಸಂಜೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರು ಸಮಿತಿ ಪದಾಧಿಕಾರಿಗಳೊಂದಿಗೆ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದರು. ಕೆಕೆ ವಿಮೋಚನಾ ದಿನದ ಕಾರ್ಯಕ್ರಮಕ್ಕೆ ಆಗಮಿಸಲಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರನ್ನು ಸಮಿತಿ ಪದಾಧಿಕಾರಿಗಳಿಗೆ ಭೇಟಿ ಮಾಡಿಸಿ, ಬರ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಲು ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದರು.

ಈ ಹಿನ್ನೆಲೆಯಲ್ಲಿ ಗುರುವಾರ ನಿಗದಿಯಾಗಿದ್ದ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಜಲ್ಲಪ್ಪನೋರ್ ತಿಳಿಸಿದ್ದಾರೆ.

ಕಳೆದ ಹತ್ತು ದಿನಗಳ ಹಿಂದೆ ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸುವಂತೆ ಆಗ್ರಹಿಸಿ ಸರ್ವ ಸಂಘಟನೆಗಳ ಸಮಿತಿ ವತಿಯಿಂದ ಯಾದಗಿರಿ ಬಂದ್ ನಡೆಸಿ ಪ್ರತಿಭಟನೆ ಮಾಡಲಾಗಿತ್ತು. ಬಳಿಕ ಜಿಲ್ಲೆಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಗಿತ್ತು.

ಸೆ.16ರೊಳಗೆ ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸದಿದ್ದರೆ ಸೆ.17ರಂದು ಪ್ರತ್ಯೇಕ ಧ್ವಜ ಹಾರಿಸಿ ಹೋರಾಟ ನಡೆಸುವುದಾಗಿ ಸಮಿತಿ ಎಚ್ಚರಿಕೆ ನೀಡಿತ್ತು. ಆದರೆ, ಸೆ.16ರ ಸಂಜೆವರೆಗೂ ಸರ್ಕಾರದಿಂದ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಹೋರಾಟಕ್ಕೆ ಸಜ್ಜಾಗಿತ್ತು.

ಈ ವಿಷಯ ತಿಳಿದ ಎಸ್‌ಪಿ ಪೃಥ್ವಿಕ್ ಶಂಕರ್ ಅವರು ಸಮಿತಿ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಹೋರಾಟ ಕೈಬಿಡುವಂತೆ ಮನವಿ ಮಾಡಿದರು. ಆರಂಭದಲ್ಲಿ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ನಿಗದಿಯಂತೆ ಹೋರಾಟ ನಡೆಸುವುದಾಗಿ ಸಮಿತಿ ತಿಳಿಸಿತ್ತು.

ಬಳಿಕ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಬೇಡಿಕೆಗಳ ಕುರಿತು ಚರ್ಚಿಸಲು ಅವಕಾಶ ಕಲ್ಪಿಸುವುದಾಗಿ ಎಸ್‌ಪಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಸಮಿತಿ ತಿಳಿಸಿದೆ.

ಸಭೆಯಲ್ಲಿ ಮಾರೆಪ್ಪ ನಾಯಕ, ಅಶೋಕ ಐಕೂರ, ಎಂ.ಡಿ. ತಾಜಾ, ಸೈದಪ್ಪ ಕೂಲುರಕರ್, ರಾಜಶೇಖರ ಎದುರುಮನಿ, ನಿಜಲಿಂಗಪ್ಪ ಪೂಜಾರಿ, ಸಿದ್ದು ಪಾಟೀಲ್ ತಂಗಡಗಿ, ಶಿವರಾಜ ದಾಸನಕೇರಿ, ರುದ್ರಾಂಭೀಕ ಪಾಟೀಲ್, ಅಜಯ ಮಾಸನ್, ಭೀಮು ಪೂಜಾರಿ, ವೀರೇಶ ಸಜ್ಜನ, ಬಸ್ಸುಗೌಡ ಚಟ್ಟನಳ್ಳಿ, ಶಂಕರ ಸೋನಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

droughtyadagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X