Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಖುರೇಷಿ ಮೊಹಲ್ಲಾ ಶಾದಿ ಮಹಲ್...

ಯಾದಗಿರಿ | ಖುರೇಷಿ ಮೊಹಲ್ಲಾ ಶಾದಿ ಮಹಲ್ ಕಾಮಗಾರಿಗೆ ಅಡಿಗಲ್ಲು

ಕ್ಷೇತ್ರದ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಬದ್ಧನಾಗಿರುವೆ : ಶಾಸಕ ಆರ್.ವಿ.ನಾಯಕ್

ವಾರ್ತಾಭಾರತಿವಾರ್ತಾಭಾರತಿ4 Jan 2025 7:43 PM IST
share
Photo of Program

ಯಾದಗಿರಿ/ ಸುರಪುರ : ಕ್ಷೇತ್ರದ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಬದ್ಧನಾಗಿದ್ದು, ಶಾಸಕನಾಗಿ ಆಯ್ಕೆಗೊಂಡ ನಂತರ ಕ್ಷೇತ್ರದಲ್ಲಿ ಹಿಂದೆ ಶಾಸಕರಾಗಿದ್ದ ನಮ್ಮ ತಾತಾನವರಾದ ದಿ.ರಾಜಾ ಕುಮಾರ ನಾಯಕ ಹಾಗೂ ತಂದೆಯವರಾದ ದಿ.ರಾಜಾ ವೆಂಕಟಪ್ಪ ನಾಯಕ ಅವರು ಹಾಕಿಕೊಟ್ಟ ಮಾರ್ಗದಂತೆ ನಡೆಯುತ್ತೇನೆ ನಿಮ್ಮ ಯಾವುದೇ ಕೆಲಸ ಕಾರ್ಯಗಳಿಗೆ ಸ್ಪಂದಿಸುತ್ತೇನೆ ಅಭಿವೃದ್ಧಿ ಕೈಗೊಳ್ಳಲು ಎಲ್ಲರ ಸಹಕಾರವಿರಲಿ ಎಂದು ಶಾಸಕ ರಾಜಾ ವೇಣುಗೊಪಾಲ ನಾಯಕ ತಿಳಿಸಿದರು.

ನಗರದ ಖುರೇಷಿ ಮೊಹಲ್ಲಾದಲ್ಲಿ ಶಾಸಕರ ಅನುದಾನದಲ್ಲಿ 25ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವ ಶಾದಿ ಮಹಲ್ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿ, ಹಿಂದೆ ನಮ್ಮ ತಂದೆ ಶಾಸಕರಾಗಿದ್ದಾಗ ಶಾಸಕರ ಅನುದಾನದಲ್ಲಿ ಶಾದಿ ಮಹಲ್ಗಾಗಿ 50ಲಕ್ಷ ರೂ. ಅನುದಾನ ಒದಗಿಸಲಾಗಿತ್ತು ಕಟ್ಟಡ ನಿರ್ಮಿಸಿದ್ದು, ಇದೇ ಕಟ್ಟಡದ ಮೊದಲನೇ ಅಂತಸ್ತು ನಿರ್ಮಾಣಕ್ಕಾಗಿ ಶಾಸಕರ ಅನುದಾನದಲ್ಲಿ 25ಲಕ್ಷ ರೂ. ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದ ಅವರು, ಅಲ್ಪಸಂಖ್ಯಾತರ ಮೌಲಾನಾ ಅಬುಲ್ ಕಲಾಂ ಅಝಾದ್ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರಿಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರಕಾರ ಅಧಿಕಾರಕ್ಕೆ ಬಂದ ನಂತರ ಚುನಾವಣೆಯಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಇದರಿಂದ ರಾಜ್ಯದ ಲಕ್ಷಾಂತರ ಜನರು ಪ್ರಯೋಜನ ಪಡೆದುಕೊಂಡಿದ್ದಾರೆ ಕಾಂಗ್ರೆಸ್ ಪಕ್ಷದ ಸರಕಾರದಿಂದ ಮಾತ್ರ ಎಲ್ಲಾ ವರ್ಗಗಳ ಜನರ ಅಭಿವೃದ್ಧಿ ಸಾಧ್ಯ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ ಮಾತನಾಡಿದರು. ಸುರಪುರ ಸಂಸ್ಥಾನದ ಅರಸು ವಂಶಸ್ಥರಾದ ರಾಜಾ ಕೃಷ್ಣಪ್ಪ ನಾಯಕ, ರಾಜಾ ವಾಸುದೇವ ನಾಯಕ, ಯೂಥ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ ನಾಯಕ, ಮುಖಂಡರುಗಳಾದ ಅಬ್ದುಲ್ ಗಫಾರ ನಗನೂರಿ, ಮಹಿಬೂಬ ಒಂಟಿ, ಮಲ್ಲಣ್ಣ ಸಾಹುಕಾರ ನರಸಿಂಗಪೇಟ, ದುರ್ಗಪ್ಪ ಗೋಗಿಕೇರಾ, ಖಾಲೀದ್ ಅಹ್ಮದ ತಾಳಿಕೋಟಿ, ಶಕೀಲ್ ಅಹ್ಮದ, ಉಸ್ಮಾನಸಾಬ ಬಡೇಖುರೇಷಿ, ಉಸ್ಮಾನ ಪಾಶಾ, ಖಾಜಾ ಖಲೀಲ್ ಅಹ್ಮದ ಅರಕೇರಿ, ವೆಂಕಟರೆಡ್ಡಿ ಬೋಯಿ, ನಗರಸಭೆ ಎಇಇ ಶಾಂತಪ್ಪ ಹೂಸುರು, ಖುರೇಷಿ ಸಮಾಜದ ಅಧ್ಯಕ್ಷ ಅಬ್ದುಲ್ ಮಜೀದಸಾಬ, ನಗರಸಭೆ ಸದಸ್ಯರಾದ ನಾಸೀರ್ ಕುಂಡಾಲೆ, ಖಮರುದ್ದಿನ್, ಜುಮ್ಮಣ್ಣ ಕೆಂಗೂರಿ, ಶಿವಕುಮಾರ ಕಟ್ಟಿಮನಿ, ಸುವರ್ಣಾ ಸಿದ್ರಾಮ ಎಲಿಗಾರ, ಲಕ್ಷಿ ಮಲ್ಲು ಬಿಲ್ಲವ್, ಧರ್ಮರಾಜ ಮಡಿವಾಳರ ಹಾಗೂ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಹ್ಮದ ಪಠಾಣ ಹಾಗೂ ಮಹ್ಮದ ಜಹೀರ ಅಹ್ಮದ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X