Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಸಗರನಾಡಿಗೆ ಹಿರಿದಾದ...

ಯಾದಗಿರಿ | ಸಗರನಾಡಿಗೆ ಹಿರಿದಾದ ಇತಿಹಾಸವಿದೆ : ಸಾಹಿತಿ ರಾಜಶೇಖರ ಮಠಪತಿ

ವಾರ್ತಾಭಾರತಿವಾರ್ತಾಭಾರತಿ17 Dec 2024 4:05 PM IST
share
Photo of Program

ಯಾದಗಿರಿ : ಸಗರನಾಡಿಗೆ ಹಿರಿದಾದ ಇತಿಹಾಸ ಭವ್ಯ ಪರಂಪರೆ, ಮಹತ್ತರವಾದ ಸಂಸ್ಕೃತಿ ಇದೆ ಎಂದು ನಾಡಿನ ಹಿರಿಯ ಸಾಹಿತಿ ರಾಜಶೇಖರ ಮಠಪತಿ (ರಾಗಂ) ಹೇಳಿದರು.

ಸುರಪುರ ಪಟ್ಟಣದ ಗರುಡಾದ್ರಿ ಕಲಾ ಮಂದಿರದಲ್ಲಿ ಸಗರನಾಡು ಸೇವಾ ಪ್ರತಿಷ್ಠಾನ ದಶಮಾನೋತ್ಸವ ಸಮಾರಂಭದ ಸಮಾರೋಪ ಭಾಷಣ ಮಾಡಿದ ಅವರು ನಾಡಿನ ಕಲೆ, ಸಂಸ್ಕೃತಿ ಸಂಶೋಧನೆ, ಪರಂಪರೆ ಇತಿಹಾಸಕ್ಕೆ ಸಗರನಾಡಿನ ಕೊಡುಗೆ ಮಹತ್ತರವಾಗಿದೆ. ವಚನ ಸಾಹಿತ್ಯದ ಉಗಮ ಈ ನಾಡಿನದು, ಇಲ್ಲಿ ಭಕ್ತಿ ಇದೆ, ಭಾವೈಕ್ಯತೆ ಇದೆ, ಕಲೆ, ಸಂಸ್ಕೃತಿ ಸಾಹಿತ್ಯದ ತವನಿಧಿಯಾಗಿದೆ ಎಂದು ಹೇಳಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಹಿರಿಯ ಉಪಾಧ್ಯಕ್ಷ ಅಪ್ಪಾರಾವ ಅಕ್ಕೋಣ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು, ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಹೆಚ್ ನಿರಗುಡಿ ಸಗರನಾಡು ಸೇವಾ ಪ್ರತಿಷ್ಠಾನದ ವಿಶೇಷ ಸಂಚಿಕೆ ಬಿಡುಗಡೆ ಮಾಡಿದರು.

ದಶಮಾನೋತ್ಸವ ಆಚರಣಾ ಸಮಿತಿಯ ಅಧ್ಯಕ್ಷ ಡಾ.ಸುರೇಶ ಆರ್.ಸಜ್ಜನ್ ಸಗರನಾಡ ಅವರು ಸಿರಿ ಸ್ಮರಣ ಗ್ರಂಥದ ಎಲ್ಲಾ ಲೇಖಕರಿಗೆ ಗೌರವ ಪ್ರತಿ ವಿತರಿಸಿದರು, ಸುರಪುರದ ನಿಷ್ಠಿ ಕಡ್ಲೆಪ್ಪನವರ ಮಠದ ಪೂಜ್ಯ. ಪ್ರಭುಲಿಂಗ ಮಹಾಸ್ವಾಮಿಗಳು ಸಾನಿಧ್ಯವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ತಾಲ್ಲೂಕು ಕ.ಸಾ.ಪ ಮಾಜಿ ಅಧ್ಯಕ್ಷ ಬಸವರಾಜ ಜಮದ್ರಖಾನಿ, ಬಸವರಾಜ ನಿಷ್ಠಿ ದೇಶಮುಖ, ಶ್ರೀನಿವಾಸ ಜಾಲವಾದಿ, ಲಿಂಗಣ್ಣ ಪಡಶೆಟ್ಟಿ ಸಗರ, ವಿವಿಧ ತಾಲ್ಲೂಕು ಕ.ಸಾ.ಪ ಅಧ್ಯಕ್ಷ ವೆಂಕಟಗಿರಿ ದೇಶಪಾಂಡೆ ಹುಣಸಗಿ, ರವಿಂದ್ರ ಹೊಸಮನಿ ಶಹಾಪೂರ, ಶರಣಬಸಪ್ಪ ಯಾಳವಾರ ಸುರಪುರ, ಮಲ್ಲಿಕಾರ್ಜುನ ಕರಕಳ್ಳಿ ವಡಗೇರಿ, ಬಸವರೆಡ್ಡಿ ಎಂ.ಟಿ.ಪಲ್ಲಿ ಗುರುಮಿಠಕಲ್, ವೆಂಕಟೇಶ ಕಲಕಂಬ ಯಾದಗಿರಿ ಹಾಗೂ ಪ.ಮಾನು ಸಗರ, ನಿಂಗಣ್ಣಗೌಡ ದೇಸಾಯಿ, ಕನಕಪ್ಪ ವಾಗನಗೇರಿ, ಹೆಚ್.ರಾಠೋಡ್, ಪ್ರಕಾಶ ಚಂದ್ ಜೈನ್, ಚಂದ್ರಕಾಂತ ಮಾರ್ಗಲ್, ವಸಂತ ಬಣಗಾರ ಸೇರಿದಂತೆ ಇತರರಿದ್ದರು.

ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ಡಾ.ಯಂಕಣ್ಣ ದೊಣ್ಣೆಗೌಡರು, ಡಾ.ವಾಸುದೇವ ಸೇಡಂ, ಡಾ.ಚಿ.ಸಿ.ನಿಂಗಣ್ಣ, ಡಾ.ಶರಣಬಸಪ್ಪ ವಡ್ಡನಕೇರಿ, ಡಾ.ಕೆ.ಗಿರಿಮಲ್ಲ, ಡಾ.ಎಸ್.ಎಸ್.ನಾಯಕ, ಡಾ.ಜಗದೀಶ ನೂಲಿನ್, ನಾಗರಾಜ ಜಮದ್ರಖಾನಿ, ನರಸಿಂಗರಾವ್ ಹೆಮನೂರ, ಗಣೇಶ ಚಿನ್ನಾಕಾರ, ಜನಾರ್ಧನ ಪಾಣ ಭಾತೆ, ಅಮರಪ್ರೀಯ ಹಿರೇಮಠ, ಶಿವಕುಮಾರ ಮಸ್ಕಿ, ನವೀನ ಜುಜಾರೆ ಸೇರಿದಂತೆ 50 ಜನ ವಿವಿಧ ಸಾಧಕರುಗಳಿಗೆ ಸನ್ಮಾನಿಸಲಾಯಿತು.

ದೇವು ಹೆಬ್ಬಾಳ ನಿರೂಪಿಸಿದರು. ಹಣಮಂತ್ರಯ ದೇವತ್ಕಲ್ ಸ್ವಾಗತಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X