Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಬಳಿಚಕ್ರ ಗ್ರಾಮಕ್ಕೆ ಕೇಂದ್ರ...

ಯಾದಗಿರಿ | ಬಳಿಚಕ್ರ ಗ್ರಾಮಕ್ಕೆ ಕೇಂದ್ರ ಸಚಿವರ ಭೇಟಿ, ಮಕ್ಕಳೊಂದಿಗೆ ಸಂವಾದ

ಮಹತ್ವಾಕಾಂಕ್ಷೆ ಜಿಲ್ಲೆ, ಬ್ಲಾಕ್‌ಗಳಲ್ಲಿ ಸುಸ್ಥಿರ ಅಭಿವೃದ್ದಿಗೆ ಕ್ರಮ : ಕೇಂದ್ರ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್‌

ವಾರ್ತಾಭಾರತಿವಾರ್ತಾಭಾರತಿ26 Dec 2024 7:36 PM IST
share
Photo of Program

ಯಾದಗಿರಿ : ದೇಶದಲ್ಲಿ ಅತ್ಯಂತ ಹಿಂದುಳಿದ ಜಿಲ್ಲೆ ಮತ್ತು ಬ್ಲಾಕ್‌ಗಳನ್ನು ಸುಸ್ಥಿರ ಅಭಿವೃದ್ದಿಪಡಿಸಿ, ಹಿಂದುಳಿವಿಕೆ ಹೋಗಲಾಡಿಸುವುದೇ ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದು ಕೇಂದ್ರದ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್‌ ಕುಮಾರ ಹೇಳಿದರು.

ಗುರುವಾರ ಯಾದಗಿರಿ ತಾಲ್ಲೂಕಿನ ಬಳಿಚಿಕ್ರ ಗ್ರಾಮಕ್ಕೆ ಭೇಟಿ ನೀಡಿ, ಇಲ್ಲಿನ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ, ಶಿಕ್ಷಣ, ಆರೋಗ್ಯ, ನೀರಾವರಿ, ಮೂಲಸೌಕರ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೌಶಲ್ಯ ಕ್ಷೇತ್ರದಲ್ಲಿ ತೀರಾ ಹಿಂದುಳಿದ ದೇಶದ 112 ಮಹತ್ವಾಕಾಂಕ್ಷೆ ಜಿಲ್ಲೆ ಮತ್ತು 500 ತಾಲ್ಲೂಕುಗಳನ್ನು ಬ್ಲಾಕ್ ಎಂದು ವಿಂಗಡಿಸಿ ಇಲ್ಲಿ ರಾಜ್ಯ-ಕೇಂದ್ರ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ತರುವ ಮೂಲಕ ಸುಸ್ಥಿರ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದರು.

ಸಂವಾದದ ವೇಳೆ ಶಾಲಾ ಮಕ್ಕಳು ಮಾತನಾಡಿ, ತಮ್ಮ ಶಾಲೆಗೆ ಆರ್.ಓ.ಪ್ಲ್ಯಾಂಟ್ ಬೇಕು, ಖಾಯಂ ಶಿಕ್ಷಕರ ಕೊರತೆ ಇದೆ, ಸಾಂಸ್ಕೃತಿಕ ವೇದಿಕೆ ದೊಡ್ಡದು ಮಾಡಬೇಕು, ನಾಲ್ಕು ಕೊಠಡಿಗಳು ಮಳೆಗೆ ಸೋರುತ್ತಿದ್ದು, ದುರಸ್ತಿ ಮಾಡಬೇಕು, ಕಂಪ್ಯೂಟರ್ ಬೇಕು, ಎಸೆಸೆಲ್ಸಿ ಸೆಂಟರ್ ಇರುವುದರಿಂದ ಎರಡ್ಮೂರು ಕೊಠಡಿ ಹೊಸದಾಗಿ ನಿರ್ಮಿಸಬೇಕು ಎಂಬಿತ್ಯಾದಿ ಬೇಡಿಕೆ ಮುಂದಿಟ್ಟರು. ನಂತರ ಸಾರ್ವಜನಿಕರು ಸಹ ಶಾಲೆಗೆ ಕಂಪೌಂಡ್, ಗ್ರಾಮದಲ್ಲಿ ರಸ್ತೆ, ಚರಂಡಿ, ಆಸ್ಪತ್ರೆ ಸಿಬ್ಬಂದಿ ಸಮಸ್ಯೆ ಬಗ್ಗೆ ಸಚಿವರ ಬಳಿ ಹೇಳಿಕೊಂಡರು.

ನಂತರ ಸಚಿವ ಬಂಡಿ ಸಂಜಯ್ ಕುಮಾರ್ ಮಾತನಾಡಿ, ಕೂಡಲೆ ಶಾಲಾ ಕೊಠಡಿ ದುರಸ್ತಿ ಕಾರ್ಯ ಮಾಡಿಸಬೇಕು. ಮುಂದಿನ ಮಾರ್ಚ್ ನಲ್ಲಿ ಮತ್ತೆ ಭೇಟಿ ನೀಡುವೆ ಅಷ್ಟರೊಳಗೆ ಕೆಲಸ ಮುಗಿಸಬೇಕೆಂದ ಅವರು, ಶಾಲೆಯ ಇನ್ನಿತರ ಸಮಸ್ಯೆಗಳನ್ಬು ಬಗೆಹರಿಸಲಾಗುವುದೆಂದು ಭರವಸೆ ನೀಡಿದರು.

ಮಕ್ಕಳು ಹೇಳಿಕೊಂಡ ಸಮಸ್ಯೆಗಳಿಗೆ ಶಾಸಕ ಶರಣಗೌಡ ಕಂದಕೂರ ಅವರು ಉತ್ತರಿಸುತ್ತಾ, ಅಕ್ಷರ ಆವಿಷ್ಕಾರ ಯೋಜನೆಯಡಿ ಪ್ರಸಕ್ತ ವರ್ಷ 50 ಶಾಲೆಗಳಲ್ಲಿ ಮೂಲಸೌಕರ್ಯ ಅವೃದ್ಧಿಪಡಿಸಲಾಗುತ್ತಿದ್ದು, ಅದರಲ್ಲಿ ಬಲಿಚಕ್ರ ಶಾಲೆ ಸಹ ಸೇರಿದೆ. ಮುಂದಿನ ಮಾರ್ಚ್-ಏಪ್ರಿಲ್ ವರೆಗೆ ಖಾಯಂ ಶಿಕ್ಷಕರು ಬರಲಿದ್ದಾರೆ. ಶಾಲೆಗೆ ಆರ್.ಓ ಪ್ಲ್ಯಾಂಟ್, ಸಾಂಸ್ಕೃತಿಕ ವೇದಿಕೆ ವಿಸ್ತರಣೆ, ಶಾಲಾ ಕೊಠಡಿ ದುರಸ್ತಿ ಮತ್ತು ಹೊಸದಾಗಿ ನಿರ್ಮಾಣಕ್ಕೆ ಕೂಡಲೆ ಅಂದಾಜು ಪಟ್ಟಿ ನೀಡುವಂತೆ ಡಿಡಿಪಿಐ ಅವರಿಗೆ ಸೂಚನೆ ನೀಡಿದರು.

ಗ್ರಂಥಾಲಯ ವೀಕ್ಷಣೆ :

ಇದಕ್ಕೂ ಮುನ್ನ ಶಾಲೆಯ ಗ್ರಂಥಾಲಯವನ್ನು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರೊಂದಿಗೆ ಸಚಿವ ಬಂಡಿ ಸಂಜಯ ಕುಮಾರ ಅವರು ವೀಕ್ಷಿಸಿ, ಅಲ್ಲಿ ಲಭ್ಯವಿರುವ ಪುಸ್ತಕಗಳ ಕುರಿತು ಶಾಲಾ ಮಕ್ಕಳಿಂದ ಮಾಹಿತಿ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರ ಆಪ್ತ ಕಾರ್ಯದರ್ಶಿ ವಂಶಿ, ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ., ಜಿಲ್ಲಾ ಪಂಚಾಯತ್ ಸಿಇಓ ಲವೀಶ್ ಓರಡಿಯಾ, ಎಸ್.ಪಿ.ಪೃತ್ವಿಕ್ ಶಂಕರ್, ಸಹಾಯಕ ಅಯುಕ್ತ ಹಂಪಣ್ಣ ಸಜ್ಜನ್, ಡಿ.ಎಚ್.ಓ ಡಾ.ಮಹೇಶ ಬಿರಾದಾರ, ಡಿ.ಡಿ.ಪಿ.ಐ ಚನ್ನಬಸಪ್ಪ ಮುಧೋಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ವೀರನಗೌಡ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ರಾಜು ದೇಶಮುಖ, ಯಾದಗಿರಿ ತಹಶೀಲ್ದಾರ್ ಸುರೇಶ ಅಂಕಲಗಿ, ಸಹಾಯಕ ಕೃಷಿ ನಿರ್ದೇಶಕ ರಾಜಕುಮಾರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಹಣಮಂತರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ವಿ.ಪಾಟೀಲ, ಸಿ.ಡಿ.ಪಿ.ಓ ವನಜಾಕ್ಷಿ, ತಾಲೂಕಾ ಪಂಚಾಯತ್ ಮಾಜಿ ಸದಸ್ಯ ಸಣ್ಣ ಹಣಮಂತ ಬೋಯಿನ್, ಎಸ್.ಡಿ.ಎಂ.ಸಿ ಅಧ್ಯಕ್ಷ ಸಿದ್ರಾಮಪ್ಪ ಬೋಯಿನ್, ಪ್ರೌಢ ಶಾಲೆಯ ಮುಖ್ಯಗುರು ಅನ್ನಪೂರ್ಣ ಬಂಡಾರಕರ್, ಸಹ ಶಿಕ್ಷಕರಾದ ಬನ್ನಪ್ಪ ಮೈಲಾಪುರ, ಚಂದ್ರಶೇಖರ, ರಂಗಮ್ಮ, ಅನುಸೂಯಾದೇವಿ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಮಕ್ಕಳಿದ್ದರು. ಶಿಕ್ಷಕ ವಿನೋದ ಕುಮಾರ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X