Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಸಾಧನೆಗೆ ಶಿಕ್ಷಣ, ಸಹಕಾರ ಬಹಳ...

ಯಾದಗಿರಿ | ಸಾಧನೆಗೆ ಶಿಕ್ಷಣ, ಸಹಕಾರ ಬಹಳ ಮುಖ್ಯ: ಸೀಮಾ ಫಾರೂಕಿ

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ, ಮಹಿಳಾ ವಿಚಾರಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ6 April 2025 6:58 PM IST
share
Photo of Program

ಯಾದಗಿರಿ : ಮಹಿಳೆ ಇಂದು ಸಾಧನೆಗಳ ಎಲ್ಲ ಹಾದಿಗಳಲ್ಲೂ ತನ್ನ ಛಾಪು ಮೂಡಿಸಿದ್ದಾಳೆ. ಇದಕ್ಕೆ ಮುಖ್ಯವಾಗಿ ಶಿಕ್ಷಣ ಮತ್ತು ಸಹಕಾರವೇ ಕಾರಣವೆಂದು ಸಹಕಾರ ಸಂಘಗಳ ಇಲಾಖೆ ಸಹಾಯಕ ನಿಬಂಧಕಿ ಸೀಮಾ ಫಾರೂಕಿ ಅಭಿಪ್ರಾಯಪಟ್ಟರು.

ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಭಾನುವಾರ ಇಲ್ಲಿನ ಕಸಾಪ ಸಭಾಂಗಣದಲ್ಲಿ ಅಂತರರಾಷ್ಟ್ರಿಯ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಮಹಿಳಾ ವಿಚಾರಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಒಂದು ಮನೆಯಲ್ಲಿ‌ ಓರ್ವ ಮಹಿಳೆ ಅಕ್ಷರವಂತೆ ಆಗಿದ್ದಳು ಎಂದರೇ ಆ ಮನೆ ಸರ್ವ ರೀತಿಯಿಂದಲ್ಲೂ ಉತ್ತಮವಾಗುತ್ತದೆ ಮತ್ತು ದೇಶದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದರು.

ಸನ್ಮಾನ ಸ್ವಿಕರಿಸಿ ಮಾತನಾಡಿದ ಜಿಲ್ಲಾ ಸರ್ಜನ್ ಡಾ.ರಿಜ್ವಾನಾ ಅಫ್ರೀನ್, ಮಹಿಳೆ ಮಾನವ ಜನಾಂಗದ ಮೊದಲ ಶಿಕ್ಷಕಿ.‌ ಆಕೆ ಕೇವಲ ಹೆಣ್ಣಲ್ಲ, ಬಾಲಕಿ, ಯುವತಿ, ಹೆಂಡತಿ, ತಾಯಿ, ಅಜ್ಜಿ ಹೀಗೆ ವಿವಿಧ ರೀತಿಯಿಂದ ಕೌಟುಂಬಿಕವಾಗಿ ಯಶಸ್ಸಿ ಮಹಿಳೆಯಾದರೇ, ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಂಕಾಗದಲ್ಲೂ ಉತ್ತಮ ಕೆಲಸ ಮಾಡುವ ಮೂಲಕ ಸಾಧಕಳಾಗುತ್ತಾಳೆ ಎಂದರು.

ಪೂರ್ಣಿಮಾ ವಿ.ಗಡ್ಡಿಮನಿ ಮಾತನಾಡಿ, ಮಹಿಳೆ ಮನಸ್ಸು ಮಾಡಿದರೇ ಏನೆಲ್ಲಾ ಸಾಧನೆ ಮಾಡಬಲ್ಲಳು, ಆದರೇ ಆಕೆಯ ಕನಸುಗಳನ್ನು ಹೊಸಕಿ ಹಾಕುವ ಕೆಲಸವಾಗಬಾರದು, ವಿದ್ಯಾರ್ಥಿನಿಯರು ಉತ್ತಮ ಸಂಸ್ಕಾರದೊಂದಿಗೆ ಸಾಧಕರಾಗಬೇಕೆಂದರು.

ಹಿರಿಯ ಸಾಹಿತಿ ಹನುಮಾಕ್ಷೀ ಗೋಗಿ ಮಾತನಾಡಿ, ಒಳ್ಳೆಯ ಸಂಕಲ್ಪ ಮಾಡಿ ಆ ನಿಟ್ಟಿನಲ್ಲಿ ಸಾಗಿದರೇ ಮಹಿಳೆ ಜೀವನದಲ್ಲಿ ಯಶಸ್ಸಿಯಾಗುವುದರಲ್ಲಿ ಸಂಶಯವೇ ಇಲ್ಲ ಎಂದರು.

ತ್ರಿವೇಣಿ ಅವರ ಕಾದಂಬರಿಗಳಲ್ಲಿ ಸ್ತ್ರೀ ಸಂವೇಧನೆ ಕುರಿತು ಸುರಪುರದ ಡಾ.ಬಿ.ಆರ್.ಅಂಬೇಡ್ಕರ್ ಪದವಿ ಕಾಲೇಜಿನ ಪ್ರಾಚಾರ್ಯರಾದ ಡಾ.ಉಮಾದೇವಿ ಮಟ್ಟಿ ಉಪನ್ಯಾಸ ನೀಡಿದರು.

ಕಸಾಪ ಮಹಿಳಾ ಪ್ರತಿನಿಧಿ ರಮಾದೇವಿ ಕಾವಲಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಎಸ್ ಹೊಟ್ಟಿ ಪ್ರಾಸ್ತಾವಿಕ ಮಾತನಾಡಿದರು.

ಕಾರ್ಯಕ್ರಮದಲ್ಲಿ ಹತ್ತಿಕುಣಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಪ್ರಾಚಾರ್ಯರಾದ ರಮಾದೇವಿ ಮೋಟಾರ್, ಅಯ್ಯಣ್ಣ ಹುಂಡೇಕಾರ, ಡಾ.ಸುಭಾಷಚಂದ್ರ ಕೌಲಗಿ, ಬಸವರಾಜ ಮೋಟ್ನಳ್ಳಿ, ಡಾ.ಭೀಮರಾಯ ಲಿಂಗೇರಿ, ಡಾ.ಎಸ್ ಎಸ್ ನಾಯಕ, ವೆಂಕಟೇಶ ಕಲಕಂಭ, ಬಸವಂತ್ರಾಯಗೌಡ ಮಾಲಿ ಪಾಟೀಲ್, ಚೆನ್ನಪ್ಪ ಸಾಹುಕಾರ, ನಾಗೇಂದ್ರ ಜಾಜಿ, ಡಾ.ಗಾಳೆಪ್ಪ ಪೂಜಾರಿ, ರಾಜಶೇಖರ ಕಿಲ್ಲನಕೇರ, ಸಿ ಎಮ್ ಪಟ್ಟೆದರ್, ದೇವರಾಜ ವರ್ಕನಳ್ಳಿ ಸೇರಿದಂತೆಯೇ ಅನೇಕರು ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ನಾಗರತ್ನ ಅನಪುರ ಸ್ವಾಗತಿಸಿದರು, ಡಾ.ಜ್ಯೋತಿಲತಾ ತಡಿಬಡಿಮಠ ನಿರೂಪಿಸಿದರು. ಕಲಾವಿದ ಶರಣು ನಾಡಗೀತೆ ಹಾಡಿದರು.

ಸಾಧಕ ಮಹಿಳೆಯರಿಗೆ ಸನ್ಮಾನ :

ವಿವಿಧ ಕ್ಷೇತ್ರಗಳ ಸಾಧಕರಾದ ಹನುಮಾಕ್ಷಿ ಗೋಗಿ, ಪೂರ್ಣಿಮಾ ಗಡ್ಡಿಮನಿ, ಡಾ.ರಿಜ್ವಾನಾ ಅಫ್ರೀನಾ, ನಿರ್ಮಾಲಾ ರಾಜಗುರು ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

Tags

YadgirEducationcooperation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X