Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಹತ್ತಿಕುಣಿ–ಸೌದಾಗರ್ ಜಲಾಶಯಗಳ...

Yadgiri | ಹತ್ತಿಕುಣಿ–ಸೌದಾಗರ್ ಜಲಾಶಯಗಳ ಆಧುನೀಕರಣಕ್ಕೆ ಶಾಸಕ ಶರಣಗೌಡರಿಂದ ಒತ್ತಾಯ : ಸಚಿವರಿಂದ ಭರವಸೆ

ವಾರ್ತಾಭಾರತಿವಾರ್ತಾಭಾರತಿ25 March 2026 7:47 PM IST
share
Yadgiri | ಹತ್ತಿಕುಣಿ–ಸೌದಾಗರ್ ಜಲಾಶಯಗಳ ಆಧುನೀಕರಣಕ್ಕೆ ಶಾಸಕ ಶರಣಗೌಡರಿಂದ ಒತ್ತಾಯ : ಸಚಿವರಿಂದ ಭರವಸೆ

ಯಾದಗಿರಿ : ತಮ್ಮ ಮತಕ್ಷೇತ್ರದ ರೈತರ ಜೀವನಾಡಿಯಾಗಿರುವ ಹತ್ತಿಕುಣಿ ಮತ್ತು ಸೌದಾಗರ್ ಜಲಾಶಯಗಳ ನಾಲೆಗಳ ಆಧುನೀಕರಣಕ್ಕೆ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಶರಣಗೌಡ ಕಂದಕೂರು ಒತ್ತಾಯಿಸಿದರು.

ವಿಧಾನಸಭೆಯ ಅಧಿವೇಶನದಲ್ಲಿ ಮಂಗಳವಾರ ಮಾತನಾಡಿದ ಅವರು, ಈ ಎರಡೂ ಜಲಾಶಯಗಳು ಹಲವು ದಶಕಗಳ ಹಿಂದೆ ನಿರ್ಮಾಣಗೊಂಡಿದ್ದು ರೈತರಿಗೆ ಪ್ರಮುಖ ನೀರಾವರಿ ಮೂಲಗಳಾಗಿವೆ ಎಂದು ತಿಳಿಸಿದರು.

ಹತ್ತಿಕುಣಿ ಜಲಾಶಯವು ಸುಮಾರು 0.352 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದರೂ, 2025-26ನೇ ಸಾಲಿನಲ್ಲಿ ಕೇವಲ 12.87 ಲಕ್ಷ ರೂ. ಮಾತ್ರ ನಿರ್ವಹಣೆಗೆ ಅನುದಾನ ನೀಡಲಾಗಿದೆ ಎಂದು ಹೇಳಿದರು. ಇದೇ ರೀತಿ ಸೌದಾಗರ್ ಡ್ಯಾಂ (0.288 ಟಿಎಂಸಿ ಸಾಮರ್ಥ್ಯ) ನಿರ್ವಹಣೆಗೆ 8.50 ಲಕ್ಷ ರೂ. ಮಾತ್ರ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಈ ಎರಡೂ ಯೋಜನೆಗಳಿಂದ ಒಟ್ಟು ಸುಮಾರು 9,000 ಎಕರೆ ಕೃಷಿಭೂಮಿಗೆ ನೀರು ಪೂರೈಕೆ ಆಗುತ್ತಿದ್ದು, 12 ಗ್ರಾಮಗಳ ರೈತರು ಅವಲಂಬಿತರಾಗಿದ್ದಾರೆ. ಹತ್ತಿಕುಣಿ ನಾಲೆ ಉದ್ದ ಸುಮಾರು 14 ಕಿಮೀ ಹಾಗೂ ಸೌದಾಗರ್ ನಾಲೆ 11 ಕಿಮೀ ಇದ್ದರೂ, ಇಂತಹ ಮಹತ್ವದ ಯೋಜನೆಗಳಿಗೆ ಕೇವಲ 20 ಲಕ್ಷ ರೂ. ಅನುದಾನ ನೀಡಿರುವುದು ಅಪರ್ಯಾಯವಾಗಿದೆ ಎಂದು ಸರ್ಕಾರದ ಗಮನ ಸೆಳೆದರು.

ಹತ್ತಿಕುಣಿ ಜಲಾಶಯ ಆಧುನೀಕರಣಕ್ಕೆ ಕೇಂದ್ರ ಸರ್ಕಾರದ ಎಂ-ಕ್ಯಾಡ್ ಯೋಜನೆಯಡಿ 72 ಕೋಟಿ ರೂ. ಮಂಜೂರಾಗಿದ್ದು, ರಾಜ್ಯ ಸರ್ಕಾರವು ಕ್ಯಾಬಿನೆಟ್ ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದರು. ಇದೇ ರೀತಿ ಸೌದಾಗರ್ ಡ್ಯಾಂ ಆಧುನೀಕರಣಕ್ಕೂ ಸಿದ್ಧಪಡಿಸಿರುವ ಅಂದಾಜು ವೆಚ್ಚದ ವರದಿಗೆ ಅನುಮೋದನೆ ನೀಡುವಂತೆ ಕೋರಿದರು.

ಸಚಿವ ಪ್ರಿಯಾಂಕ್ ಖರ್ಗೆ ಭರವಸೆ :

ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಹತ್ತಿಕುಣಿ ಮತ್ತು ಸೌದಾಗರ್ ಜಲಾಶಯಗಳು ಜನಹಿತದ ಯೋಜನೆಗಳಾಗಿದ್ದು, ಗುರುಮಠಕಲ್ ಭಾಗದ ಅಭಿವೃದ್ಧಿಯನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಹತ್ತಿಕುಣಿ ಡ್ಯಾಂ ಆಧುನೀಕರಣಕ್ಕೆ 72 ಕೋಟಿ ರೂ. ಅನುದಾನಕ್ಕಾಗಿ ಡೀಟೈಲ್ಡ್ ಡಿಸೈನ್ ರಿಪೋರ್ಟ್ ಕೇಂದ್ರಕ್ಕೆ ಸಲ್ಲಿಸಲಾಗಿದ್ದು, ರಾಜ್ಯ ಸರ್ಕಾರವು ಶೀಘ್ರದಲ್ಲೇ ಕ್ಯಾಬಿನೆಟ್ ಅನುಮೋದನೆ ನೀಡಲಿದೆ ಎಂದು ಭರವಸೆ ನೀಡಿದರು.

ಸೌದಾಗರ್ ಡ್ಯಾಂ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ವರದಿ ಪಡೆದು ಉಪಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದರು.

“ಗುರುಮಠಕಲ್ ಅಭಿವೃದ್ಧಿಗೆ ಸಚಿವರ ಗಮನ ಇರಲಿ” :

ಶಾಸಕ ಶರಣಗೌಡ ಕಂದಕೂರು ಅವರು ಮಾತನಾಡಿ, ಸಚಿವರು ಗುರುಮಠಕಲ್ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಒಲವು ತೋರಬೇಕು. “ನಿಮ್ಮ ಒಂದು ಕಣ್ಣು ನಮ್ಮ ಕ್ಷೇತ್ರದ ಅಭಿವೃದ್ಧಿಯತ್ತ ಇರಲಿ” ಎಂದು ಮನವಿ ಮಾಡಿದರು.

“ಐ ವಿತ್ ಯೂ ಶರಣಗೌಡ” :

ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ, ಗುರುಮಠಕಲ್ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಎರಡು ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲಾಗುತ್ತದೆ ಎಂದು “ಐ ವಿತ್ ಯೂ ಶರಣಗೌಡ” ಎಂದು ಭರವಸೆ ನೀಡಿದರು.

ಸಚಿವರ ಭರವಸೆಯಿಂದ ನಿರೀಕ್ಷೆ ಹೆಚ್ಚಳ :

ಸಚಿವರ ಭರವಸೆಗೆ ಪ್ರತಿಕ್ರಿಯಿಸಿದ ಶಾಸಕ ಕಂದಕೂರು, ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಮತ್ತೊಮ್ಮೆ ಮನವಿ ಮಾಡಿ ಧನ್ಯವಾದ ಸಲ್ಲಿಸಿದರು. ಸಚಿವರ ಮಾತುಗಳಿಂದ ಜನರಲ್ಲಿ ನಿರೀಕ್ಷೆ ಹೆಚ್ಚಾಗಿದೆ ಎಂದು ಹೇಳಿದರು.

Tags

yadagir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X