ಯಾದಗಿರಿ | ದಲಿತ ಸಾಮೂಹಿಕ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ನೀಲಿ ಧ್ವಜ ಇಳಿಸಿದವರ ಮೇಲೆ ಕ್ರಮ ಕೈಗೊಳ್ಳಲು ಮುಖಂಡರ ಒತ್ತಾಯ

ಸುರಪುರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಹಿಂಬದಿಯಲ್ಲಿನ ಮೈದಾನದಲ್ಲಿ ಏಪ್ರಿಲ್ ತಿಂಗಳಿನಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಹಾಕಲಾಗಿದ್ದ ಅಶೋಕ ಚಕ್ರವಿರುವ ನೀಲಿ ಧ್ವಜವನ್ನು ಜು.18 ರಂದು ಶ್ರೀ ಪ್ರಭು ಕಾಲೇಜಿನ ಕ್ಯಾಂಪಸ್ ಕೋ ಆರ್ಡಿನೇಟರ್ ವೇಣುಗೋಪಾಲ ನಾಯಕ ಜೇವರ್ಗಿ ಹಾಗೂ ಇತರರು ಭಾಗವಹಿಸಿ ಧ್ವಜವನ್ನು ಇಳಿಸಿರುವ ಘಟನೆ ಖಂಡಿಸಿ ನಗರದ ದಲಿತ ಸಾಮೂಹಿಕ ಸಂಘಟನೆಗಳ ಒಕ್ಕೂಟ ದಿಂದ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.
ನಗರದ ಡಾ. ಬಿ.ಆರ್ ಅಂಬೇಡ್ಕರ್ ವೃತ್ತ ದಿಂದ ಮಹಾತ್ಮ ಗಾಂಧಿ ವೃತ್ತ, ದರಬಾರ ರಸ್ತೆ, ಶ್ರೀಮಹರ್ಷಿ ವಾಲ್ಮೀಕಿ ವೃತ್ತದ ಮೂಲಕ ತಹಸಿಲ್ದಾರ್ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಭಾಗವಹಿಸಿದ್ದ ಅನೇಕ ಮುಖಂಡರು ಘೋಷಣೆಗಳನ್ನು ಕೂಗಿ ಸುರಪುರ ಠಾಣೆ ಪಿ.ಐ ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿದರು.
ನಂತರ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮಾತನಾಡಿದ ಮುಖಂಡರು, ನೀಲಿ ಧ್ವಜವನ್ನು ಕೆಳಗೆ ಇಳಿಸುವ ಮೂಲಕ ಧ್ವಜಕ್ಕೆ ಅವಮಾನಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಧ್ವಜ ಇಳಿಸುವಾಗ ಸ್ಥಳದಲ್ಲಿಯೇ ಇದ್ದ ಪಿ.ಐ ಉಮೇಶ್ ನಾಯಕ ಅವರನ್ನು ಅಮಾನತುಗೊಳಿಸಬೇಕು ಅಥವಾ ವರ್ಗಾವಣೆ ಮಾಡಬೇಕು. ನೀಲಿ ಧ್ವಜ ಹಾಕಿರುವ ಸ್ಥಳದ ಸರ್ವೇ ಮಾಡಿಸಿ 2 ಎಕರೆ 26 ಗುಂಟೆ ಭೂಮಿಯನ್ನು ಅಂಬೇಡ್ಕರ್ ಸಾಂಸ್ಕೃತಿ ಭವನ, ಗ್ರಂಥಾಲಯ ನಿರ್ಮಾಣಕ್ಕೆ ಮಂಜೂರು ಮಾಡಬೇಕು. ಬಸ್ ನಿಲ್ದಾಣದ ಮುಂಭಾಗದಲ್ಲಿನ ಮೈದಾನಕ್ಕೆ ಹೊಂದಿಕೊಂಡಿರುವ ಎಲ್ಲ ಅಂಗಡಿಗಳನ್ನು ತೆರವುಗೊಳಿಸಬೇಕು. ದಲಿತರ ಮೇಲೆ ದಾಖಲಿಸಿರುವ ಸುಳ್ಳು ಕೇಸ್ ಕೈಬಿಡಬೇಕು ಎಂದು ಆಗ್ರಹಿಸಿದರು. ಅಲ್ಲದೆ ನಮ್ಮ ಹೋರಾಟ ಯಾವುದೇ ಜಾತಿಯ ವಿರುದ್ಧವಲ್ಲ ಧ್ವಜ ಇಳಿಸಿದವರ ವಿರುದ್ಧ ಮತ್ತು ಸುರಪುರ ಠಾಣೆ ಪಿ.ಐ ವಿರುದ್ಧವಾಗಿದೆ ಎಂದು ಘೋಷಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನ ಕ್ರಾಂತಿ, ನಿವೃತ್ತ ಪ್ರೊ.ಮಾನು ಗುರಿಕಾರ, ನಾಗಣ್ಣ ಕಲ್ಲದೇವನಹಳ್ಳಿ, ಮಾನಪ್ಪ ಕಟ್ಟಿಮನಿ, ವೆಂಕಟೇಶ ಹೊಸ್ಮನಿ, ಭೀಮರಾಯ ಸಿಂದಗೇರಿ, ಚಂದ್ರಶೇಖರ ಜಡಿಮರಳ, ಆದಪ್ಪ ಹೊಸ್ಮನಿ, ರಾಹುಲ್ ಹುಲಿಮನಿ, ಮೂರ್ತಿ ಬೊಮ್ಮನಹಳ್ಳಿ, ಶ್ರೀನಿವಾಸ ನಾಯಕ ದೊರೆ ಬೊಮ್ಮನಹಳ್ಳಿ, ಮಾಳಪ್ಪ ಕಿರದಳ್ಳಿ, ನಿಂಗಣ್ಣ ಗೋನಾಲ, ಮಲ್ಲಿಕಾರ್ಜುನ ತಳ್ಳಳ್ಳಿ, ಶಿವಲಿಂಗ ಹಸನಾಪುರ ಇತರರು ಮಾತನಾಡಿದರು.
ನಂತರ ಜಿಲ್ಲಾಧಿಕಾರಿಗೆ ಬರೆದ ಮನವಿ ತಹಶೀಲ್ದಾರ್ ಹುಸೇನಸಾಬ್ ಮೂಲಕ ಸಲ್ಲಿಸಿದರು. ಡಿವೈಎಸ್ಪಿ ಜಾವಿದ್ ಇನಾಂದಾರ್,ಪಿ.ಐ ಉಮೇಶ ನಾಯಕ ಉಪಸ್ಥಿತರಿದ್ದರು.
ಪ್ರತಿಭಟನೆಯಲ್ಲಿ ಗೋಪಾಲ ವಜ್ಜಲ್, ರಾಜು ಕಟ್ಟಿಮನಿ, ಶಿವಶಂಕರ ಹೊಸ್ಮನಿ, ಮಹಾದೇವ ಚಲವಾದಿ, ತಿಪ್ಪಣ್ಣ ಶೆಳ್ಳಗಿ, ಮಾನಪ್ಪ ಶೆಳ್ಳಗಿ, ಶರಣು ತಳವಾರಗೇರ, ಶರಣು ಚಂದ್ಲಾಪುರ, ಬಸವರಾಜ ದೊಡ್ಮನಿ, ಮಹೇಶ ಯಾದಗಿರಿ, ರವಿ ಬೊಮ್ಮನಹಳ್ಳಿ, ರಾಜು ದೊಡ್ಮನಿ, ವಿಶ್ವನಾಥ ಹೊಸ್ಮನಿ, ಮಲ್ಲು ಮುಷ್ಠಳ್ಳಿ, ಹಣಮಂತ ಭದ್ರಾವತಿ, ವೀರಭದ್ರ ತಳವಾರಗೇರ, ವೈಜನಾಥ ಹೊಸ್ಮನಿ, ರವಿ ಬೊಮ್ಮನಹಳ್ಳಿ, ಪರಶು ನಾಟೇಕಾರ, ಜೆಟ್ಟೆಪ್ಪ ನಾಗರಾಳ, ಶೇಖರ ಮಂಗಳೂರ, ಮಂಜುನಾಥ ಹೊಸ್ಮನಿ, ಪ್ರಭು ಕಟ್ಟಿಮನಿ, ಜೆಟ್ಟೆಪ್ಪ ಹಾದಿಮನಿ, ಹಣಮಂತ ಮಾನಸಗಲ್, ಹಣಮಂತ ರತ್ತಾಳ, ನಾಗೂ ಗೋಗಿಕೇರ, ಗೋಪಾಲ ಗೋಗಿಕೇರ, ಭೀಮಣ್ಣ ಅಡ್ಡೊಡಗಿ, ನಾಗರಾಜ ಓಕಳಿ, ಪ್ರಕಾಶ ಕೆಂಭಾವಿ, ಶಂಕರ ಗೋನಾಲ, ಶರಣಪ್ಪ ತೆಗ್ಗೆಳ್ಳಿ, ಚಿದಾನಂದ ಹೆಬ್ಬಾಳ, ಮಲ್ಲಿಕಾರ್ಜುನ ತಳವಾರಗೇರ, ಅಂಬ್ರೇಶ ದಿಗ್ಗಿ ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು.







