Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಯಾವುದೇ ಗ್ರಾಮದಲ್ಲಿಯೂ...

ಯಾದಗಿರಿ | ಯಾವುದೇ ಗ್ರಾಮದಲ್ಲಿಯೂ ಕುಡಿಯುವ ನೀರು ಕೊರತೆಯಾಗಬಾರದು : ಜಿಲ್ಲಾಧಿಕಾರಿ ಡಾ.ಸುಶೀಲ ಬಿ.

ವಾರ್ತಾಭಾರತಿವಾರ್ತಾಭಾರತಿ19 March 2025 9:38 PM IST
share
Photo of Metting

ಯಾದಗಿರಿ : ಕುಡಿಯುವ ನೀರು, ಬಿಸಿಗಾಳಿ, ಸಿಡಿಲು ಹಾಗೂ ಕೃಷಿ ಬೆಳೆಗಳಿಗೆ ನೀರಿನ ಅವಶ್ಯಕತೆ ಕುರಿತಂತೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಕಾರ್ಯಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಕುಡಿಯುವ ನೀರು, ಬಿಸಿಗಾಳಿ ಹಾಗೂ ಪೂರ್ವ ಮುಂಗಾರು ಕುರಿತು ಸಭೆ ನಡೆಸಿ ಅವರು ಮಾತನಾಡಿದರು.

ಬಿಸಿಲಿನ ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ನಿರ್ವಹಣೆ ಅತ್ಯಂತ ಮಹತ್ವದ್ದಾಗಿದೆ. ವಿವಿಧ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಪ್ಪದೆ ನೀರಿನ ಗುಣಮಟ್ಟ ಪರೀಕ್ಷಿಸಬೇಕು. ಯೋಗ್ಯವಿಲ್ಲದ ನೀರಿರುವ ಕಡೆಗಳಲ್ಲಿ ನೋಟಿಸ್ ಹಾಗೂ ಡಂಗುರದ ಮೂಲಕ ಅರಿವು ಮೂಡಿಸಬೇಕು. ಈ ಕುರಿತು ಗ್ರಾಮ ಪಂಚಾಯತ್ ವಾರು ಹಾಗೂ ನಗರ, ಪಟ್ಟಣಗಳ ವಾರ್ಡವಾರು ಅರಿವು ಮೂಡಿಸಿದ ಬಗ್ಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯ ಸಂಬಂಧಪಟ್ಟ ತಹಶೀಲ್ದಾರ್‌, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರು, ತಾಲೂಕು ಆರೋಗ್ಯ ಅಧಿಕಾರಿಗಳು, ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ನೀರಿನ ಮೂಲಗಳಿಗೆ ಹಾಗೂ ಪೈಪ್ ಲೈನ್ ಗಳಿಗೆ ಕಲುಷಿತ ನೀರು ಸೇರ್ಪಡೆಯಾಗದಂತೆ ನಿಗಾವಹಿಸಿ, ಈ ಕುರಿತು ಖುದ್ದಾಗಿ ಪರಿಶೀಲನೆ ಮತ್ತು ಸರ್ವೆ ನಡೆಸಿ ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೇಸಿಗೆ ತಾಪಮಾನ ದೃಷ್ಟಿಯಲ್ಲಿಟ್ಟುಕೊಂಡು ವಿವಿಧ ಬೆಳೆಗಳಿಗೆ ಬೆಳೆ ಕಟಾವು ಆಗುವವರೆಗೆ ನೀರಿನ ಅವಶ್ಯಕತೆ, ಸಂಗ್ರಹ ಪ್ರಮಾಣ ಕುರಿತು ಪ್ರಸ್ತಾವನೆ ಸಲ್ಲಿಸಬೇಕು. ಕಾಲುವೆಗಳ ಮೂಲಕ ಜಿಲ್ಲೆಯ ಕೊನೆಯ ಭಾಗಕ್ಕೆ ನೀರು ಬೇಕಾದ ಪ್ರಮಾಣ ಹಾಗೂ ಭೀಮಾ ನದಿ ಸುತ್ತಮುತ್ತಲಿನ ಬೆಳೆಗಳಿಗೆ ಬೇಕಾದ ನೀರಿನ ಪ್ರಮಾಣದ ಕುರಿತಂತೆ ಸಂಬಂಧಿಸಿದ ಅಧಿಕಾರಿಗಳು ಸಮನ್ವಯತೆ ಸಾಧಿಸಿ ಪರಿಶೀಲನಾ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಮುಂದಿನ 56 ವಾರಗಳವರೆಗೆ ಮೇವಿನ ಕೊರತೆ ಇಲ್ಲ. ತೀವ್ರ ಬೇಸಿಗೆ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಪ್ರಾಣಿ ಪಕ್ಷಿಗಳಿಗೂ ನೀರಿನ ಸೌಲಭ್ಯ ಕಲ್ಪಿಸಲು ಗಮನ ನೀಡುವಂತೆ ಅವರು ಸೂಚನೆ ನೀಡಿದರು.

ಮುಂಬರುವ ಮೇವರೆಗೆ ಯಾವೊಂದು ಗ್ರಾಮದಲ್ಲಿಯೂ ಕುಡಿಯುವ ನೀರು ಕೊರತೆಯಾಗಬಾರದು. ಅಧಿಕಾರಿಗಳ ಕೆಳಸಿಬ್ಬಂದಿಗಳ ಮಧ್ಯ ಸಮನ್ವಯತೆ ಇರಬೇಕು. ವಿದ್ಯುತ್ ಅವಘಡಯಾಗದಿರಲು ಲೈನ್ಮನ್ಗಳಿಂದ ಅವಶ್ಯಕ ಸೇವೆ ಪಡೆಯುವಂತೆ ಜೆಸ್ಕಾಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಅವರು ಕುಡಿಯುವ ನೀರು ಪೂರೈಕೆ ಸಂದರ್ಭದಲ್ಲಿ ಕಡ್ಡಾಯವಾಗಿ ನೀರಿನ ಗುಣಮಟ್ಟ ಪರಿಶೀಲಿಸಿ ಪೂರೈಸಲು ಸೂಚಿಸಲಾಗಿದೆ. ಸಮರ್ಪಕ ನೀರಿನ ಪೂರೈಕೆ, ಜಲಮೂಲಗಳ, ಓಹೆಚ್ ಡಿ ಟ್ಯಾಂಕ್ ಗಳ ಸ್ವಚ್ಛತೆ, ಕ್ಲೋರಿನೆಶನ್ ಗೆ ಸೂಚನೆ ನೀಡಲಾಗಿದೆ ಎಂದು ಸಭೆಗೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X