ಯಾದಗಿರಿ | ಜೂ.5 ರಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ಲಾಸ್ಟಿಕ್ ಮಾಲಿನ್ಯ ಕೊನೆಗೊಳಿಸಲು ಜಾಗೃತಿ ಅಭಿಯಾನ : ಸಿಇಓ ಲವೀಶ್ ಒರಡಿಯಾ

ಲವೀಶ್ ಒರಡಿಯಾ
ಯಾದಗಿರಿ : ಪ್ರತಿ ವರ್ಷ ಜೂ.5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದ್ದು, “ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು" (Ending Plastic Pollution Globally) ಎಂಬ ಘೋಷ ವಾಕ್ಯದೊಂದಿಗೆ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವ ಮಹತ್ವವನ್ನು ತಿಳಿಸುವ ಉದ್ದೇಶದೊಂದಿಗೆ ಮೇ 22 ರಿಂದ ಜೂ.5ರವರೆಗೆ ಪೂರ್ವ ಅಭಿಯಾನವನ್ನು ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯು ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಘನ ತ್ಯಾಜ್ಯ ನಿರ್ವಹಣಾ ಪ್ರಯತ್ನಗಳ ಪ್ರಮುಖ ಭಾಗವಾಗಿದ್ದು, ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜೂ.5 ರವರೆಗೆ ಜಾಗೃತಿ ಅಭಿಯಾನದಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುವ ದುಷ್ಪರಿಣಾಮಗಳು ಹಾಗೂ ಇದರ ನಿರ್ಮೂಲನೆ ಮಾಡುವ ಸಂಬಂಧ ವಿವಿಧ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮ/ಚಟುವಟಿಕೆ ಶ್ರಮದಾನ, ಸಂವಾದ ಸಭೆಗಳನ್ನು ಆಯೋಜನೆ ಮಾಡಿ ಜನರಲ್ಲಿ ಜಾಗೃತಿ ಮೂಡಿಸುವುದಾಗಿದೆ.
ಈ ಅಭಿಯಾನದಲ್ಲಿ ವಿಶೇಷವಾಗಿ ಜಲಮೂಲಗಳ ಸುತ್ತು- ಮುತ್ತ ಸ್ವಚ್ಚಗೊಳಿಸುವುದು, ಗ್ರಾಮದಲ್ಲಿ ಬ್ಲಾಕ್ ಸ್ಪಾಟ್ ( ಕಸ ಎಸೆಯುವ ಸ್ಥಳ) ಗುರುತಿಸಿ ಸ್ವಚ್ಚಗೊಳಿಸುವುದು, ಚರಂಡಿ ಸ್ವಚ್ಛಗೊಳಿಸುವುದು, ಅದರಲ್ಲಿ ಪ್ಲಾಸ್ಟಿಕ್ ಮತ್ತು ಇತರೆ ವಸ್ತುಗಳನ್ನು ಎಸೆಯದಂತೆ ತಿಳಿಸುವುದು, ಏಕ ಬಳಕೆಯ ಪ್ಲಾಸ್ಟಿಕ್ ವಸ್ತು, ಕವರ್,ಗಳನ್ನು ಉತ್ಪಾದಿಸುವ, ಮಾರಾಟ ಮಾಡುವ, ಗ್ರಾಹಕರಿಗೆ ನೀಡುವ ಅಂಗಡಿ ಹೊಟೇಲ್, ಬೇಕರಿ, ಇತರೆ ವಾಣಿಜ್ಯಮಳಿಗೆಗಳಿಗೆ ತಪಾಸಣೆ ಮಾಡುವುದು, ಬಳಕೆಯಾದ ಪ್ಲಾಸ್ಟಿಕ್ ವಸ್ತುಗಳನ್ನು ಸೂಕ್ತ ವಿಲೇವಾರಿ ಮಾಡುವುಂತೆ ಪ್ರೇರೆಣೆ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆಯ ಮಾಡಿ ವಿಂಗಡಿಸಿ ವೈಜ್ಞಾನಿಕ ವಿಲೇವಾರಿ ಮಾಡುವುದಾಗಿದೆ ಎಂದು ಹೇಳಿದರು.
ಅಭಿಯಾನದಲ್ಲಿ ಗ್ರಾಮ ಪಂಚಾಯತಿಯ ಚುನಾಯಿತ ಪ್ರತಿನಿಧಿಗಳು, ಯುವಕರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಮತ್ತು ಸ್ವಯಂ ಸೇವಕರು, ಗ್ರಾಮದ ಮುಖಂಡರು ಅಭಿಯಾನದಲ್ಲಿ ಭಾಗವಹಿಸಿ ಪ್ಲಾಸ್ಟಿಕ್ ಮುಕ್ತ ಗ್ರಾಮಗಳನ್ನಾಗಿ ರೂಪಿಸಲು ಸಹಕರಿಸಲು ಮನವಿ ಮಾಡಿದರು.







