Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಕೆಯುಡಬ್ಲ್ಯೂ ಸಂಘದ...

Yadgiri | ಕೆಯುಡಬ್ಲ್ಯೂ ಸಂಘದ ರಾಜ್ಯಾಧ್ಯಕ್ಷರ ವಿರುದ್ಧ ನೀಡಿರುವ ದೂರು ಸತ್ಯಕ್ಕೆ ದೂರ: ಪತ್ರಕರ್ತರ ಸಂಘ

ವಾರ್ತಾಭಾರತಿವಾರ್ತಾಭಾರತಿ3 Sept 2026 7:24 PM IST
share
Yadgiri | ಕೆಯುಡಬ್ಲ್ಯೂ ಸಂಘದ ರಾಜ್ಯಾಧ್ಯಕ್ಷರ ವಿರುದ್ಧ ನೀಡಿರುವ ದೂರು ಸತ್ಯಕ್ಕೆ ದೂರ: ಪತ್ರಕರ್ತರ ಸಂಘ

ಯಾದಗಿರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ವಿರುದ್ಧ ನೀಡಿರುವ ಸತ್ಯಕ್ಕೆ ದೂರವಾದ ದೂರನ್ನು ಮಾನ್ಯ ಮಾಡಬಾರದು ಎಂದು ಆಗ್ರಹಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಡಿವಿಜಿ ಅವರು ಸಂಸ್ಥಾಪಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 95 ವರ್ಷಗಳ ಇತಿಹಾಸವಿದ್ದು, ರಾಜ್ಯದ ಎಲ್ಲ ಜಿಲ್ಲೆ ಹಾಗೂ ತಾಲೂಕು ಘಟಕಗಳನ್ನು ಹೊಂದಿರುವ, 10 ಸಾವಿರಕ್ಕೂ ಅಧಿಕ ಸಕ್ರಿಯ ಪತ್ರಕರ್ತರನ್ನು ಸದಸ್ಯರನ್ನಾಗಿ ಹೊಂದಿರುವ ದೇಶದ ಬೃಹತ್ ಪತ್ರಕರ್ತರ ಸಂಘಟನೆಯಾಗಿದೆ ಎಂದು ತಿಳಿಸಿದರು.

ಚುನಾವಣಾ ಪ್ರಕ್ರಿಯೆ ಮೂಲಕ ಆಯ್ಕೆಯಾಗಿರುವ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ವಿರುದ್ಧ ಇತ್ತೀಚೆಗೆ ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ’ ಹೆಸರಿನಲ್ಲಿ ದೂರು ನೀಡಿರುವುದು ಖಂಡನೀಯ. ಸದಸ್ಯತ್ವ ನೀಡಲು ನಿರಾಕರಿಸಲ್ಪಟ್ಟ ಕೆಲವರು ಗುಂಪು ಕಟ್ಟಿಕೊಂಡು ಸಂಘದ ವಿರುದ್ಧ ಕುತಂತ್ರ ನಡೆಸುತ್ತಿದ್ದಾರೆ. ಹೀಗಾಗಿ ಇಂತಹವರ ಆರೋಪಗಳಿಗೆ ಕವಡೆ ಕಾಸಿನ ಕಿಮ್ಮತ್ತೂ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.

ರಂಗಭೂಮಿ ನೆಲೆಯಿಂದ ಬೆಳೆದುಬಂದಿರುವ ಶಿವಾನಂದ ತಗಡೂರು ಅವರಿಗೆ ನಾಟಕ ಅಕಾಡೆಮಿ ಪ್ರಶಸ್ತಿ ದೊರೆತಿರುವುದನ್ನು ಸಹಿಸದೆ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ದೂರಿದರು. ಸಂಘವು ಕಾರ್ಮಿಕ ಕಾಯ್ದೆಯಂತೆ ಸಂಘಟನಾತ್ಮಕ ಚಟುವಟಿಕೆಗಳನ್ನು ನಡೆಸುತ್ತಿದ್ದು, ಕಾಲಕಾಲಕ್ಕೆ ಲೆಕ್ಕಪತ್ರ ಹಾಗೂ ವಹಿವಾಟುಗಳನ್ನು ಪಾರದರ್ಶಕವಾಗಿ ನಿರ್ವಹಿಸಲಾಗುತ್ತಿದೆ. ರಾಜ್ಯ ಸಮಿತಿ ಸಭೆಗಳು ಹಾಗೂ ಪ್ರತಿ ವರ್ಷ ಸಾಮಾನ್ಯ ಸಭೆಗಳನ್ನು ನಿಯಮಿತವಾಗಿ ನಡೆಸಲಾಗುತ್ತಿದೆ ಎಂದರು.

ಶಿವಾನಂದ ತಗಡೂರು ಅವರ ಅವಧಿಯಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 1.10 ಕೋಟಿ ರೂ. ಠೇವಣಿ ಮಾಡಲಾಗಿದೆ. ಕೋವಿಡ್‌ನಿಂದ ಮೃತಪಟ್ಟ ನೂರಾರು ಪತ್ರಕರ್ತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ದೊರಕಿಸುವಲ್ಲಿ ತಗಡೂರು ಅವರ ಪ್ರಯತ್ನ ಮಹತ್ವದ್ದಾಗಿದೆ. ಪತ್ರಕರ್ತರ ಕುಟುಂಬಗಳ ಪರವಾಗಿ ಹೋರಾಡಿರುವ ಅವರ ಸೇವೆಯನ್ನು ಯಾರೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸರ್ಕಾರದ ಹಲವು ಕಾರ್ಯಕ್ರಮಗಳಲ್ಲಿ ಸಹಯೋಗ ಹೊಂದಿದ್ದು, ಸರ್ಕಾರದ ಮಾನ್ಯತೆ ಪಡೆದ ಪತ್ರಕರ್ತರ ಏಕೈಕ ಸಂಘಟನೆಯಾಗಿದೆ. ನೈಜ ಪತ್ರಕರ್ತರ ಸಂಘಟನೆಯಾಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾಯಿತ ಅಧ್ಯಕ್ಷರ ವಿರುದ್ಧ ನೀಡಿರುವ ದೂರನ್ನು ಮಾನ್ಯ ಮಾಡಬಾರದು. ಉದ್ದೇಶಪೂರ್ವಕವಾಗಿ ತೇಜೋವಧೆ ಮಾಡಲು ಯತ್ನಿಸುತ್ತಿರುವವರ ವಿರುದ್ಧ ಸೂಕ್ತ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.

ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್, ಹನುಮಂತ ಪಿ., ಮಹೇಶ್ ಕಲಾಲ್, ಗಣೇಶ್ ಪಾಟೀಲ್ , ಮಹೇಶ್ ಗಣೇರ್ , ನಾಗಪ್ಪ ನಾಯ್ಕಲ್, ಬಸವರಾಜ ಕರೆಗಾರ, ರಾಘವೇಂದ್ರ ಹಾರಣಗೇರಾ, ಕೆ.ಬಿ. ರಾಘವೇಂದ್ರ, ದೇವರಾಜ ನಾಯಕ, ರವಿರಾಜ ಕಂದಳ್ಳಿ, ಶರಬು ನಾಟೇಕಾರ್, ನಾಗರಾಜ ಬೀರನೂರ, ಮಾನಯ್ಯ ಗಾಳಿನೋರ, ಸುಧೀರ್ ಕೋಟೆ, ಬೀರಲಿಂಗಪ್ಪ ಕಿಲ್ಲನಕೇರಾ, ಮಲ್ಲಿಕಾಜು೯ನ, ಭೀಮಣ್ಣ ವಡವಟ್ ಇದ್ದರು.

Tags

Yadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X