Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ನದಿಗೆ ಸೇತುವೆ ನಿರ್ಮಾಣದಿಂದ...

Yadgiri | ನದಿಗೆ ಸೇತುವೆ ನಿರ್ಮಾಣದಿಂದ ಭಕ್ತರಿಗೆ, ರೈತರಿಗೆ ಅನುಕೂಲವಾಗಲಿದೆ: ಶಾಸಕ ಚೆನ್ನಾರೆಡ್ಡಿ ತುನ್ನೂರು

ವಾರ್ತಾಭಾರತಿವಾರ್ತಾಭಾರತಿ16 Aug 2026 7:27 PM IST
share
Yadgiri | ನದಿಗೆ ಸೇತುವೆ ನಿರ್ಮಾಣದಿಂದ ಭಕ್ತರಿಗೆ, ರೈತರಿಗೆ ಅನುಕೂಲವಾಗಲಿದೆ: ಶಾಸಕ ಚೆನ್ನಾರೆಡ್ಡಿ ತುನ್ನೂರು
ಕೋಡಾಲದಲ್ಲಿ 5 ಕೋಟಿ ರೂ. ವೆಚ್ಚದ ಕಿರು ಸೇತುವೆಗೆ ಶಂಕುಸ್ಥಾಪನೆ

ಯಾದಗಿರಿ: ಕಳೆದ ಎರಡು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ವಡಗೇರಾ ತಾಲ್ಲೂಕಿನ ಕೋಡಾಲ ಗ್ರಾಮದ ಹೊರವಲಯದ ಕೃಷ್ಣಾ ನದಿ ದಂಡೆಯಿಂದ ಗಡ್ಡೆ ಬಸವೇಶ್ವರ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಕಿರು ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸೇತುವೆ ನಿರ್ಮಾಣದಿಂದ ಸಾವಿರಾರು ಭಕ್ತರು ಹಾಗೂ ರೈತರಿಗೆ ಅನುಕೂಲವಾಗಲಿದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.

ಕೋಡಾಲ ಗ್ರಾಮದ ಕೃಷ್ಣಾ ನದಿ ದಂಡೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 2024–25ನೇ ಸಾಲಿನ ಅಂಪೆಂಡಿಕ್ಸ್‌–ಇ 5054 ಯೋಜನೆಯಡಿ 5 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಚುನಾವಣೆ ಸಂದರ್ಭದಲ್ಲಿ ಗ್ರಾಮಕ್ಕೆ ಭೇಟಿ ನೀಡಿದಾಗ ಸ್ಥಳೀಯರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಸೇತುವೆ ನಿರ್ಮಾಣಕ್ಕೆ ಬೇಡಿಕೆ ಸಲ್ಲಿಸಿದ್ದರು. ಕಳೆದ ಮೂರು ವರ್ಷಗಳಿಂದ ಅಧಿಕಾರಿಗಳೊಂದಿಗೆ ನಿರಂತರ ಪ್ರಯತ್ನ ನಡೆಸಿದ ಪರಿಣಾಮ ಕಾಮಗಾರಿ ಮಂಜೂರಾಗಿದೆ. ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಂಡು ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಗಡ್ಡೆ ಬಸವೇಶ್ವರ ದೇವಸ್ಥಾನಕ್ಕೆ ಐತಿಹಾಸಿಕ ಹಾಗೂ ಧಾರ್ಮಿಕ ಹಿನ್ನೆಲೆಯಿದ್ದು, ಸೇತುವೆ ನಿರ್ಮಾಣದಿಂದ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಕೃಷ್ಣಾ ನದಿ ಈ ಭಾಗದ ರೈತರಿಗೆ ವರದಾನವಾಗಿದ್ದು, ಈ ವರ್ಷ ಬೆಳೆಗಳು ಉತ್ತಮವಾಗಿ ಬೆಳೆಯುತ್ತಿರುವುದು ಸಮಾಧಾನ ತಂದಿದೆ ಎಂದರು.

ರಾಜ್ಯ ಸರ್ಕಾರ ಮಹಿಳೆಯರ ಸ್ವಾವಲಂಬನೆ ಹಾಗೂ ಜನರ ಕಲ್ಯಾಣಕ್ಕಾಗಿ ಗೃಹಲಕ್ಷ್ಮಿ, ಉಚಿತ ಸಾರಿಗೆ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಪಂಚ ಗ್ಯಾರಂಟಿ ಯೋಜನೆಗಳಿಗೆ ಪ್ರತಿವರ್ಷ ಅಗತ್ಯ ಅನುದಾನ ಒದಗಿಸುವುದರ ಜೊತೆಗೆ, ವಿವಿಧ ಇಲಾಖೆಗಳ ಮೂಲಕ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೂ ಅನುದಾನ ನೀಡಲಾಗುತ್ತಿದೆ ಎಂದು ಹೇಳಿದರು.

18 ವರ್ಷಗಳ ಮನವಿಗೆ ಸ್ಪಂದನೆ :

ಗಡ್ಡೆ ಬಸವೇಶ್ವರ ದೇವಸ್ಥಾನದ ಪೀಠಾಧಿಪತಿ ಪಂಚಮಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ದೇವಸ್ಥಾನಕ್ಕೆ ಸುಮಾರು 400 ವರ್ಷಗಳ ಇತಿಹಾಸವಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಕೃಷ್ಣಾ ನದಿಯನ್ನು ದಾಟಿಯೇ ಬರಬೇಕಾಗಿತ್ತು. ಸೇತುವೆ ನಿರ್ಮಾಣಕ್ಕಾಗಿ ಕಳೆದ 18 ವರ್ಷಗಳಿಂದ ವಿವಿಧ ಶಾಸಕರಿಗೆ ಮನವಿ ಸಲ್ಲಿಸಲಾಗಿತ್ತು. ಇದೀಗ ಶಾಸಕ ತುನ್ನೂರ ಅವರ ಪ್ರಯತ್ನದಿಂದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿರುವುದು ಸಂತಸದ ಸಂಗತಿ ಎಂದರು.

ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸ್ಸುಗೌಡ ಬಿಳ್ಹಾರ ಮಾತನಾಡಿ, ಶಾಸಕ ತುನ್ನೂರ ಅವರು ಜನರು ಹಾಗೂ ಕಾರ್ಯಕರ್ತರಿಗೆ ಸುಲಭವಾಗಿ ಲಭ್ಯವಾಗಿ, ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಕಾಮಗಾರಿಗಳಿಗೆ ಆದ್ಯತೆ ನೀಡಿ ಅನುಕೂಲ ಕಲ್ಪಿಸುತ್ತಿದ್ದಾರೆ ಎಂದರು.

350 ಅಡಿ ಉದ್ದದ ಸೇತುವೆ :

ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮಾತನಾಡಿ, ಸೇತುವೆ 350 ಅಡಿ ಉದ್ದ, 19 ಅಡಿ ಅಗಲ ಹಾಗೂ 8 ಮೀಟರ್ ಎತ್ತರ ಹೊಂದಿರಲಿದೆ. ಕೋಡಾಲ ಗ್ರಾಮ ಹಾಗೂ ದೇವಸ್ಥಾನದ ಕಡೆಗೆ ಉತ್ತಮ ರಸ್ತೆ ನಿರ್ಮಾಣ ಮಾಡಲಾಗುವುದು. ಇದರಿಂದ ವಾಹನ ಸಂಚಾರಕ್ಕೂ ಅನುಕೂಲವಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಶಾಸಕರು ಹಾಗೂ ಮುಖಂಡರನ್ನು ಗ್ರಾಮಸ್ಥರು ಕೋಡಾಲ ಕ್ರಾಸ್‌ನಿಂದ ಗ್ರಾಮದ ಅಗಸಿ ಬಳಿಯ ಹನುಮಾನ ದೇವಸ್ಥಾನದವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕರೆತಂದರು. ಸಮಾರಂಭದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Tags

Channareddy TunnurYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X