Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | 371(ಜೆ) ಸಮರ್ಪಕ ಜಾರಿಗೆ...

Yadgiri | 371(ಜೆ) ಸಮರ್ಪಕ ಜಾರಿಗೆ ಆಗ್ರಹ: ಸೆ.17ರಂದು ಕಲಬುರಗಿಯಲ್ಲಿ ಸಂಕಲ್ಪ ಸಮಾವೇಶ

ಸಮಾವೇಶದಲ್ಲಿ 2 ಸಾವಿರ ಜನರು ಭಾಗವಹಿಸುವ ನಿರೀಕ್ಷೆ: ಮಲ್ಲಯ್ಯ ಕಮತಗಿ

ವಾರ್ತಾಭಾರತಿವಾರ್ತಾಭಾರತಿ13 Sept 2026 5:51 PM IST
share
Yadgiri | 371(ಜೆ) ಸಮರ್ಪಕ ಜಾರಿಗೆ ಆಗ್ರಹ: ಸೆ.17ರಂದು ಕಲಬುರಗಿಯಲ್ಲಿ ಸಂಕಲ್ಪ ಸಮಾವೇಶ

ಯಾದಗಿರಿ: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮುಂದುವರಿದಿರುವ ಪ್ರಾದೇಶಿಕ ಅಸಮತೋಲನ ನಿವಾರಣೆ ಹಾಗೂ ಸಂವಿಧಾನದ ಕಲಂ 371(ಜೆ) ಸಮರ್ಪಕ ಜಾರಿಗೆ ಆಗ್ರಹಿಸಿ ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಯ್ಯ ಕಮತಗಿ ತಿಳಿಸಿದರು.

ಭಾನುವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂಪಾಯಿ ಅನುದಾನ ವ್ಯಯವಾಗಿದ್ದರೂ ಶಿಕ್ಷಣ, ಆರೋಗ್ಯ, ಉದ್ಯೋಗ, ನೀರಾವರಿ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಡೇಚೂರು–ಬಾಡಿಹಾಳ ಕೈಗಾರಿಕಾ ಪ್ರದೇಶದಲ್ಲಿರುವ ಕೆಲವು ರಾಸಾಯನಿಕ ಕಾರ್ಖಾನೆಗಳಿಂದ ತ್ಯಾಜ್ಯ ನೀರು ಹೊರಹರಿಯುತ್ತಿದ್ದು, ಇದರಿಂದ ಜನರು ಹಾಗೂ ಜಾನುವಾರುಗಳ ಆರೋಗ್ಯಕ್ಕೆ ಅಪಾಯ ಎದುರಾಗುವ ಆತಂಕವಿದೆ. ಅಂತರ್ಜಲದ ಗುಣಮಟ್ಟವೂ ಹದಗೆಡುವ ಸಾಧ್ಯತೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಯಾದಗಿರಿ ನಗರದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರು ವಾಸಿಸುತ್ತಿದ್ದು, ನಗರಸಭೆಯಿಂದ ಪೂರೈಕೆಯಾಗುತ್ತಿರುವ ನೀರಿನ ಗುಣಮಟ್ಟದ ಬಗ್ಗೆ ಸಾರ್ವಜನಿಕರಲ್ಲಿ ಆತಂಕವಿದೆ. ಕಲುಷಿತ ನೀರಿನಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಭೀಮಾ ನದಿಯಿಂದ ನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಸುವ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

ಸೆಪ್ಟೆಂಬರ್ 17ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಲಬುರಗಿಗೆ ಆಗಮಿಸುವ ಹಿನ್ನೆಲೆಯಲ್ಲಿ ಸಮಿತಿಯ ನಿಯೋಗ ಅವರನ್ನು ಭೇಟಿ ಮಾಡಿ ಕಲ್ಯಾಣ ಕರ್ನಾಟಕದ ವಾಸ್ತವಿಕ ಪರಿಸ್ಥಿತಿ ಹಾಗೂ ವಿವಿಧ ಲೋಪದೋಷಗಳ ಬಗ್ಗೆ ಮನವಿ ಸಲ್ಲಿಸಲಿದೆ ಎಂದು ತಿಳಿಸಿದರು.

371(ಜೆ) ಜಾರಿಯಾದ ಬಳಿಕ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪನೆಯಾಗಿದ್ದು, ಪ್ರಾದೇಶಿಕ ಅಸಮತೋಲನ ನಿವಾರಣೆ ಅದರ ಪ್ರಮುಖ ಉದ್ದೇಶವಾಗಿದೆ. ಆದರೆ ಮಂಡಳಿಯ ಅನುದಾನವನ್ನು ವೈಜ್ಞಾನಿಕವಾಗಿ ಬಳಸದೆ ಕೇವಲ ಕಾಮಗಾರಿಗಳಿಗೆ ಸೀಮಿತಗೊಳಿಸಲಾಗುತ್ತಿದೆ. ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗದಂತಹ ಮಾನವ ಅಭಿವೃದ್ಧಿ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ, ವೈದ್ಯಕೀಯ ಸಿಬ್ಬಂದಿ ಅಭಾವ, ವಿಶ್ವವಿದ್ಯಾಲಯಗಳಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕೊರತೆ ಹಾಗೂ ನೀರಾವರಿ ಯೋಜನೆಗಳ ವಿಳಂಬದಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಯುವಜನರು, ರೈತರು, ಕಾರ್ಮಿಕರು, ದಲಿತರು, ಅಲ್ಪಸಂಖ್ಯಾತರು ಹಾಗೂ ಮಹಿಳೆಯರು ಒಗ್ಗೂಡಿ ಹೋರಾಟ ರೂಪಿಸಬೇಕು ಎಂದು ಕರೆ ನೀಡಿದರು.

ಕಲಬುರಗಿಯ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ನಡೆಯಲಿರುವ ಸಂಕಲ್ಪ ಸಮಾವೇಶದಲ್ಲಿ ಸುಮಾರು 2 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮಲ್ಲಯ್ಯ ಕಮತಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ತಿಪ್ಪಣ್ಣ ಸುಕಲ್ ಸುರಪುರ, ಅಶೋಕ್ ವಾಟಕರ್, ಸಿದ್ದಲಿಂಗಪ್ಪ ನಾಯಕ್ ಬೆಳಗುಂದಿ, ಅಹ್ಮದ್ ಪಠಾಣ್, ಯಲಪ್ಪ ಮಳಿಕೇರಿ, ಗಿರಿಯಪ್ಪಗೌಡ ಬಾಣತಿಹಾಳ ಶಹಾಪುರ, ಸೈಯದ್ ಕಾದ್ರಿ, ಸಿದ್ದಲಿಂಗ ರೆಡ್ಡಿ ಭೀಮನಹಳ್ಳಿ, ಶರಣಪ್ಪ ಜಾಕನಹಳ್ಳಿ, ದೊಡ್ಡಯ್ಯ ನಾಯಕ ಹಳಿಗೇರ, ಮಲ್ಲಯ್ಯ ಮಗ್ಗ, ಚಂದ್ರಪ್ಪ ನಾಯಕ್, ಹಫೀಜ್ ಪಟೇಲ್, ಅಬ್ದುಲ್ ಮತೀನ್, ವೈಜನಾಥ ಪಾಟೀಲ್ ಹತ್ತಿಕುಣಿ ಸೇರಿದಂತೆ ಸಮಿತಿಯ ಮುಖಂಡರು ಉಪಸ್ಥಿತರಿದ್ದರು.

Tags

KalaburagiArticle 371(J)Yadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X