Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಬಾವಿ ನೀರು ಸೇವಿಸಿ 50ಕ್ಕೂ...

Yadgiri | ಬಾವಿ ನೀರು ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ !

ಶರಬು ಬಿ.ನಾಟೇಕಾರ್ ಯಾದಗಿರಿಶರಬು ಬಿ.ನಾಟೇಕಾರ್ ಯಾದಗಿರಿ17 Jun 2026 10:50 PM IST
share
Yadgiri | ಬಾವಿ ನೀರು ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ !

ಯಾದಗಿರಿ : ಕಳೆದ ನಾಲ್ಕು ದಿನಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಬಾವಿಯಿಂದ ಪೂರೈಕೆಯಾದ ನೀರನ್ನು ಸೇವಿಸಿದ ಪರಿಣಾಮ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಬೀರನೂರ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ನಳದ ನೀರಿನ ಪೂರೈಕೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯ ಪೈಪ್‌ಲೈನ್ ಮೂಲಕ ಬಾವಿಯ ನೀರನ್ನು ಮನೆಗಳಿಗೆ ಸರಬರಾಜು ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ನೀರನ್ನು ಸೇವಿಸಿದ ಬಳಿಕ ಹಲವರಿಗೆ ವಾಂತಿ, ಭೇದಿ, ಹೊಟ್ಟೆನೋವು ಹಾಗೂ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದು, ಅಸ್ವಸ್ಥಗೊಂಡವರಲ್ಲಿ ಮಕ್ಕಳು, ಮಹಿಳೆಯರು ಹಾಗೂ ವೃದ್ಧರ ಸಂಖ್ಯೆಯೇ ಹೆಚ್ಚಿದ್ದು, ಅವರನ್ನು ಶಹಾಪುರ ತಾಲೂಕು ಆಸ್ಪತ್ರೆ ಸೇರಿದಂತೆ ವಿವಿಧ ಆರೋಗ್ಯ ಕೇಂದ್ರಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದಲ್ಲಿ ಕಾರ್ಯನಿರ್ವ

ಹಿಸುತ್ತಿದ್ದ ಶುದ್ಧ ಕುಡಿಯುವ ನೀರಿನ ಘಟಕವೂ ಹಲವು ದಿನಗಳಿಂದ ಸ್ಥಗಿತಗೊಂಡಿರುವುದರಿಂದ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಹಿಂದೆ ಬೋರ್‌ವೆಲ್ ಮೂಲಕ ನೀರು ಪೂರೈಕೆಯಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಬಾವಿಯ ನೀರನ್ನು ಸರಬರಾಜು ಮಾಡಲಾಗಿದ್ದು, ಅದೇ ಅಸ್ವಸ್ಥತೆಗೆ ಕಾರಣವಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.

ಈ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಆರೋಗ್ಯ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಅಸ್ವಸ್ಥತೆಗೆ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುರಕ್ಷಿತ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಗ್ರಾಮಕ್ಕೆ ತಕ್ಷಣ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಬೀರನೂರ ಗ್ರಾಮದಲ್ಲಿ ಬಾವಿ ನೀರು ಸೇವಿಸಿ ಹಲವು ಜನ ಅಸ್ವಸ್ಥಗೊಂಡಿದ್ದ ವಿಷಯ ನಮ್ಮ ಗಮನಕ್ಕೆ ಬಂದಿದೆ. ಆರೋಗ್ಯ ಇಲಾಖೆಯ ಡಿಎಚ್‌ಒ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಘಟನೆಯ ಸಂಪೂರ್ಣ ವಿವರವನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

-ಲವೀಶ್ ಒರಡಿಯಾ,ಜಿಪಂ ಸಿಇಒ

ಶಹಾಪುರ ತಾಲೂಕಿನ ಬೀರನೂರ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ನಳದ ನೀರಿನ ಪೂರೈಕೆ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯ ಪೈಪ್‌ಲೈನ್ ಮೂಲಕ ಬಾವಿಯ ನೀರನ್ನು ಮನೆಗಳಿಗೆ ಸರಬರಾಜು ಮಾಡಲಾಗಿದೆ. ಈ ನೀರನ್ನು ಸೇವಿಸಿದ ಬಳಿಕ ಗ್ರಾಮದ 50ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ, ಹೊಟ್ಟೆನೋವು ಹಾಗೂ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

share
ಶರಬು ಬಿ.ನಾಟೇಕಾರ್ ಯಾದಗಿರಿ
ಶರಬು ಬಿ.ನಾಟೇಕಾರ್ ಯಾದಗಿರಿ
Next Story
X