Yadgiri | ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗುರಮಠಕಲ್ ಪಿಐ

ವೀರಣ್ಣ ದೊಡ್ಡಮನಿ
ಗುರಮಠಕಲ್ : ಪ್ರಕರಣವೊಂದನ್ನು ಇತ್ಯರ್ಥಪಡಿಸುವ ಹೆಸರಿನಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಗುರಮಠಕಲ್ ಪೊಲೀಸ್ ಠಾಣೆಯ ಪಿಐ ವೀರಣ್ಣ ದೊಡ್ಡಮನಿ ಶನಿವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಆನಂದ ಭಜಂತ್ರಿ ಎಂಬವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ರಕ್ಷಣೆ ಮಾಡುವುದಾಗಿ ಹೇಳಿ ಪಿಐ ವೀರಣ್ಣ ದೊಡ್ಡಮನಿ ಅವರು 2 ಲಕ್ಷ ರೂ. ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅದರಂತೆ ಗುರಮಠಕಲ್ ಪೊಲೀಸ್ ವಸತಿ ಗೃಹದಲ್ಲಿ ದೂರುದಾರರಿಂದ 1 ಲಕ್ಷ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್. ಇನಾಂದಾರ್ ಹಾಗೂ ಪಿಐ ಸಿದ್ದರಾಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.
Next Story




